ETV Bharat / state

ಹುಟ್ಟೂರಲ್ಲಿ ಧರ್ಮೇಗೌಡರ ಅಂತ್ಯ ಸಂಸ್ಕಾರ: ಪುತ್ರನಿಂದ ತಂದೆಯ ಚಿತೆಗೆ ಅಗ್ನಿಸ್ಪರ್ಶ

author img

By

Published : Dec 29, 2020, 7:43 PM IST

ಸಖರಾಯಪಟ್ಟಣದ ಸರ್ಕಾರಿ ಕಾಲೇಜು ಆವರಣದಲ್ಲಿ ಸಾರ್ವಜನಿಕರಿಗಾಗಿ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿತ್ತು. ನಂತರ ಅವರ ಹುಟ್ಟೂರಾದ ಸರಪನಹಳ್ಳಿಯಲ್ಲಿರುವ ತೋಟದ ಮನೆಯಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ.

ಅಗ್ನಿಸ್ಪರ್ಶ
ಅಗ್ನಿಸ್ಪರ್ಶ

ಚಿಕ್ಕಮಗಳೂರು: ವಿಧಾನ ಪರಿಷತ್​ ಉಪಸಭಾಪತಿ ಎಸ್​.ಎಲ್.ಧರ್ಮೇಗೌಡರ ಅಂತ್ಯ ಸಂಸ್ಕಾರ ನೆರವೇರಿಸಲಾಗಿದ್ದು, ಹುಟ್ಟೂರಾದ ಸರಪನಹಳ್ಳಿಯ ತೋಟದ ಮನೆಯಲ್ಲಿ ಮಗ ಸೋನಾಲ್ ಗೌಡ ತಂದೆಯ ಚಿತೆಗೆ ಅಗ್ನಿಸ್ಪರ್ಶ ಮಾಡಿದರು.

ಸಖರಾಯಪಟ್ಟಣದ ಸರ್ಕಾರಿ ಕಾಲೇಜು ಆವರಣದಲ್ಲಿ ಸಾರ್ವಜನಿಕರಿಗಾಗಿ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿತ್ತು. ನಂತರ ಅವರ ಹುಟ್ಟೂರಾದ ಸರಪನಹಳ್ಳಿಯಲ್ಲಿರುವ ತೋಟದ ಮನೆಯಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ. ಪುತ್ರ ಸೋನಾಲ್ ಗೌಡ ತಂದೆಯ ಚಿತೆಗೆ ಅಗ್ನಿಸ್ಪರ್ಶ ಮಾಡಿದ್ದಾರೆ.

ಮಗ ಸೋನಾಲ್​ ಗೌಡರಿಂದ ಎಸ್​.ಎಲ್.ಧರ್ಮೇಗೌಡರ ಚಿತೆಗೆ ಅಗ್ನಿಸ್ಪರ್ಶ

ಹಿಂದೂ ಧಾರ್ಮಿಕ ವಿಧಿ ವಿಧಾನದಂತೆ ಅಂತ್ಯ ಸಂಸ್ಕಾರವನ್ನು ಮಾಡಲಾಗಿದ್ದು, ಈ ಕಾರ್ಯದಲ್ಲಿ ಅವರ ಕುಟುಂಬದ ಎಲ್ಲಾ ಸದಸ್ಯರು ಸೇರಿದಂತೆ ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಸಾ.ರಾ.ಮಹೇಶ್ ಹಾಗೂ ಹಲವರು ಗಣ್ಯರು ಭಾಗವಹಿಸಿದ್ದರು.

ಚಿಕ್ಕಮಗಳೂರು: ವಿಧಾನ ಪರಿಷತ್​ ಉಪಸಭಾಪತಿ ಎಸ್​.ಎಲ್.ಧರ್ಮೇಗೌಡರ ಅಂತ್ಯ ಸಂಸ್ಕಾರ ನೆರವೇರಿಸಲಾಗಿದ್ದು, ಹುಟ್ಟೂರಾದ ಸರಪನಹಳ್ಳಿಯ ತೋಟದ ಮನೆಯಲ್ಲಿ ಮಗ ಸೋನಾಲ್ ಗೌಡ ತಂದೆಯ ಚಿತೆಗೆ ಅಗ್ನಿಸ್ಪರ್ಶ ಮಾಡಿದರು.

ಸಖರಾಯಪಟ್ಟಣದ ಸರ್ಕಾರಿ ಕಾಲೇಜು ಆವರಣದಲ್ಲಿ ಸಾರ್ವಜನಿಕರಿಗಾಗಿ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿತ್ತು. ನಂತರ ಅವರ ಹುಟ್ಟೂರಾದ ಸರಪನಹಳ್ಳಿಯಲ್ಲಿರುವ ತೋಟದ ಮನೆಯಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ. ಪುತ್ರ ಸೋನಾಲ್ ಗೌಡ ತಂದೆಯ ಚಿತೆಗೆ ಅಗ್ನಿಸ್ಪರ್ಶ ಮಾಡಿದ್ದಾರೆ.

ಮಗ ಸೋನಾಲ್​ ಗೌಡರಿಂದ ಎಸ್​.ಎಲ್.ಧರ್ಮೇಗೌಡರ ಚಿತೆಗೆ ಅಗ್ನಿಸ್ಪರ್ಶ

ಹಿಂದೂ ಧಾರ್ಮಿಕ ವಿಧಿ ವಿಧಾನದಂತೆ ಅಂತ್ಯ ಸಂಸ್ಕಾರವನ್ನು ಮಾಡಲಾಗಿದ್ದು, ಈ ಕಾರ್ಯದಲ್ಲಿ ಅವರ ಕುಟುಂಬದ ಎಲ್ಲಾ ಸದಸ್ಯರು ಸೇರಿದಂತೆ ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಸಾ.ರಾ.ಮಹೇಶ್ ಹಾಗೂ ಹಲವರು ಗಣ್ಯರು ಭಾಗವಹಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.