ETV Bharat / state

ಅಖಾಡದಲ್ಲಿ ಹೆಸರು ಮಾಡಿದ್ದ ಮಿಲನ್​ ವಿಧಿವಶ.. ಹೋರಿ ಸಾವಿಗೆ ಕಣ್ಣೀರಿಟ್ಟ ಕುಟುಂಬ - ಚಿಕ್ಕಮಗಳೂರಿನಲ್ಲಿ ಐದು ಲಕ್ಷ ಮೌಲ್ಯದ ಹಸು ನಿಧನ

ಸುಮಾರು ನಾಲ್ಕೂವರೆ ಲಕ್ಷ ಬೆಲೆ ಬಾಳುವ ಈ ಎತ್ತಿಗೆ ಕಳೆದ 2 ವಾರಗಳ ಹಿಂದಷ್ಟೇ ರಾಜ್ಯದ ಬೇರೆ-ಬೇರೆ ಹೋರಿ ಮಾಲೀಕರು 4 ಲಕ್ಷಗಳಷ್ಟು ಬೆಲೆಗೆ ಕೇಳಿದ್ದರು. ಸದೃಢ ಮೈಕಟ್ಟು ಹಾಗೂ ಸಾಕಷ್ಟು ಎತ್ತರವಿದ್ದ ಮಿಲನ್ ಅಖಾಡದಲ್ಲಿ ತನ್ನದೇ ಆದ ಹೆಸರು ಗಳಿಸಿತ್ತು. ಕಳೆದೊಂದು ವಾರದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಈ ಹೋರಿಯನ್ನ ಉಳಿಸಿಕೊಳ್ಳಲಾಗದೆ ಮಾಲೀಕ ನಿಂಗೇಗೌಡನ ಕುಟುಂಬಸ್ಥರು ಕಣ್ಣೀರಿಟ್ಟಿದ್ದಾರೆ.

five-lakhs-worth-cow-died-in-chikkamagaluru
ಐದು ಲಕ್ಷ ಮೌಲ್ಯದ ಎತ್ತು ಮೃತ
author img

By

Published : Apr 3, 2022, 10:46 PM IST

Updated : Apr 4, 2022, 10:34 AM IST

ಚಿಕ್ಕಮಗಳೂರು: ಜೋಡೆತ್ತಿನ ಗಾಡಿ ಸ್ಪರ್ಧೆಯಲ್ಲಿ ಇಡೀ ರಾಜ್ಯಕ್ಕೆ ಖ್ಯಾತಿಯಾಗಿದ್ದ ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಸಮೀಪದ ನಿಂಗೇನಹಳ್ಳಿ ಗ್ರಾಮದ ನಿಂಗೇಗೌಡರ ಎತ್ತು ಮಿಲನ್ ಅನಾರೋಗ್ಯದಿಂದ ಸಾವನ್ನಪ್ಪಿದೆ. ರಾಸುವಿನ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ, ಅವರು ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡಲಿಲ್ಲ ಎಂದು ಮಾಲೀಕ ಆರೋಪಿಸಿದ್ದಾರೆ.

ಚಿಕ್ಕಮಗಳೂರು, ಮೈಸೂರು, ಹಾಸನ, ಅಜ್ಜಂಪುರ, ಕಡೂರು ಹಾಗೂ ತರೀಕೆರೆ ಸೇರಿದಂತೆ ರಾಜ್ಯಾದ್ಯಂತ ಜೋಡೆತ್ತಿನ ಗಾಡಿ ಸ್ಪರ್ಧೆಗಳಲ್ಲಿ ಸಾಕಷ್ಟು ಘಟಾನುಘಟಿ ಹೋರಿಗಳಿಗೆ ಸೋಲಿನ ರುಚಿ ತೋರಿಸಿದ್ದ ಮಿಲನ್ ಭಾನುವಾರ ಉಸಿರು ನಿಲ್ಲಿಸಿದೆ. ಎತ್ತಿನ ಮಾಲೀಕ ನಿಂಗೇಗೌಡ ಕಳೆದ ಎರಡ್ಮೂರು ವರ್ಷಗಳಿಂದ ಎತ್ತಿನ ಆರೈಕೆಯಲ್ಲಿ ನಿರತರಾಗಿದ್ದರು. ಈ ಎತ್ತನ್ನ ಸ್ಪರ್ಧೆಗೆ ಬಿಟ್ಟು ಬೇರೆ ಕೆಲಸಕ್ಕೆ ಬಳಸುತ್ತಿರಲಿಲ್ಲ ಎಂಬುದು ತಿಳಿದುಬಂದಿದೆ.

ಸುಮಾರು ನಾಲ್ಕೂವರೆ ಲಕ್ಷ ರೂಪಾಯಿ ಬೆಲೆ ಬಾಳುವ ಈ ಎತ್ತಿಗೆ ಕಳೆದ 2 ವಾರಗಳ ಹಿಂದಷ್ಟೇ ರಾಜ್ಯದ ಬೇರೆ-ಬೇರೆ ಹೋರಿ ಮಾಲೀಕರು 4 ಲಕ್ಷಗಳಷ್ಟು ಬೆಲೆಗೆ ಕೇಳಿದ್ದರು. ಸದೃಢ ಮೈಕಟ್ಟು ಹಾಗೂ ಸಾಕಷ್ಟು ಎತ್ತರವಿದ್ದ ಮಿಲನ್ ಅಖಾಡದಲ್ಲಿ ತನ್ನದೇ ಆದ ಹೆಸರು ಗಳಿಸಿತ್ತು. ಕಳೆದೊಂದು ವಾರದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಈ ಹೋರಿಯನ್ನ ಉಳಿಸಿಕೊಳ್ಳಲಾಗದೆ ಮಾಲೀಕ ನಿಂಗೇಗೌಡನ ಕುಟುಂಬಸ್ಥರು ಕಣ್ಣೀರಿಟ್ಟಿದ್ದಾರೆ.

ಓದಿ: ಅಪಘಾತದಲ್ಲಿ ನಿವೃತ್ತ ಎಎಸ್​ಐ ಸಾವು.. ಕಡಬದಲ್ಲಿ ನೀರುಪಾಲಾದ ಐಟಿಐ ವಿದ್ಯಾರ್ಥಿ

ಚಿಕ್ಕಮಗಳೂರು: ಜೋಡೆತ್ತಿನ ಗಾಡಿ ಸ್ಪರ್ಧೆಯಲ್ಲಿ ಇಡೀ ರಾಜ್ಯಕ್ಕೆ ಖ್ಯಾತಿಯಾಗಿದ್ದ ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಸಮೀಪದ ನಿಂಗೇನಹಳ್ಳಿ ಗ್ರಾಮದ ನಿಂಗೇಗೌಡರ ಎತ್ತು ಮಿಲನ್ ಅನಾರೋಗ್ಯದಿಂದ ಸಾವನ್ನಪ್ಪಿದೆ. ರಾಸುವಿನ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ, ಅವರು ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡಲಿಲ್ಲ ಎಂದು ಮಾಲೀಕ ಆರೋಪಿಸಿದ್ದಾರೆ.

ಚಿಕ್ಕಮಗಳೂರು, ಮೈಸೂರು, ಹಾಸನ, ಅಜ್ಜಂಪುರ, ಕಡೂರು ಹಾಗೂ ತರೀಕೆರೆ ಸೇರಿದಂತೆ ರಾಜ್ಯಾದ್ಯಂತ ಜೋಡೆತ್ತಿನ ಗಾಡಿ ಸ್ಪರ್ಧೆಗಳಲ್ಲಿ ಸಾಕಷ್ಟು ಘಟಾನುಘಟಿ ಹೋರಿಗಳಿಗೆ ಸೋಲಿನ ರುಚಿ ತೋರಿಸಿದ್ದ ಮಿಲನ್ ಭಾನುವಾರ ಉಸಿರು ನಿಲ್ಲಿಸಿದೆ. ಎತ್ತಿನ ಮಾಲೀಕ ನಿಂಗೇಗೌಡ ಕಳೆದ ಎರಡ್ಮೂರು ವರ್ಷಗಳಿಂದ ಎತ್ತಿನ ಆರೈಕೆಯಲ್ಲಿ ನಿರತರಾಗಿದ್ದರು. ಈ ಎತ್ತನ್ನ ಸ್ಪರ್ಧೆಗೆ ಬಿಟ್ಟು ಬೇರೆ ಕೆಲಸಕ್ಕೆ ಬಳಸುತ್ತಿರಲಿಲ್ಲ ಎಂಬುದು ತಿಳಿದುಬಂದಿದೆ.

ಸುಮಾರು ನಾಲ್ಕೂವರೆ ಲಕ್ಷ ರೂಪಾಯಿ ಬೆಲೆ ಬಾಳುವ ಈ ಎತ್ತಿಗೆ ಕಳೆದ 2 ವಾರಗಳ ಹಿಂದಷ್ಟೇ ರಾಜ್ಯದ ಬೇರೆ-ಬೇರೆ ಹೋರಿ ಮಾಲೀಕರು 4 ಲಕ್ಷಗಳಷ್ಟು ಬೆಲೆಗೆ ಕೇಳಿದ್ದರು. ಸದೃಢ ಮೈಕಟ್ಟು ಹಾಗೂ ಸಾಕಷ್ಟು ಎತ್ತರವಿದ್ದ ಮಿಲನ್ ಅಖಾಡದಲ್ಲಿ ತನ್ನದೇ ಆದ ಹೆಸರು ಗಳಿಸಿತ್ತು. ಕಳೆದೊಂದು ವಾರದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಈ ಹೋರಿಯನ್ನ ಉಳಿಸಿಕೊಳ್ಳಲಾಗದೆ ಮಾಲೀಕ ನಿಂಗೇಗೌಡನ ಕುಟುಂಬಸ್ಥರು ಕಣ್ಣೀರಿಟ್ಟಿದ್ದಾರೆ.

ಓದಿ: ಅಪಘಾತದಲ್ಲಿ ನಿವೃತ್ತ ಎಎಸ್​ಐ ಸಾವು.. ಕಡಬದಲ್ಲಿ ನೀರುಪಾಲಾದ ಐಟಿಐ ವಿದ್ಯಾರ್ಥಿ

Last Updated : Apr 4, 2022, 10:34 AM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.