ಚಿಕ್ಕಮಗಳೂರು: ಕಾಡಾನೆ ದಾಳಿಯಿಂದ ಫಾರೆಸ್ಟ್ ಗಾರ್ಡ್ ಮೃತಪಟ್ಟಿರುವ ಘಟನೆ ಇಲ್ಲಿನ ಅಲ್ದೂರು ಸಮೀಪದ ಗುಲ್ಲನ್ ಪೇಟೆ ಬಳಿ ನಡೆದಿದೆ.
ಪುಟ್ಟರಾಜು ಆನೆ ದಾಳಿಗೆ ಮೃತಪಟ್ಟ ಅರಣ್ಯ ಸಿಬ್ಬಂದಿಯಾಗಿದ್ದಾರೆ. ಇವರು ಬೆಳಗ್ಗೆ ಕಾಡಾನೆಯನ್ನು ಓಡಿಸಲು 6 ಮಂದಿಯ ತಂಡದೊಂದಿಗೆ ತೆರಳಿದ್ದರು. ಮಧ್ಯಾಹ್ನ ಕಾಡಾನೆ ಓಡಿಸುವ ಕಾರ್ಯಚರಣೆ ವೇಳೆ ಆನೆ ದಾಳಿ ಮಾಡಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂಡಿಗೆರೆ ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.