ETV Bharat / state

ಕಾಫಿನಾಡಲ್ಲಿ ವರುಣನ ಆರ್ಭಟ, ನದಿಗಳ ಭೋರ್ಗರೆತ: ಜನಜೀವನ ಅಸ್ತವ್ಯಸ್ತ

author img

By

Published : Oct 21, 2019, 4:49 PM IST

ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನದಿಗಳು ತುಂಬಿ ಹರಿಯುತ್ತಿವೆ. ಭಾರಿ ಮಳೆಯ ಪರಿಣಾಮ ಜಮೀನುಗಳಿಗೆ ನೀರು ನುಗ್ಗಿದ್ದು, ರೈತರು ಬೆಳೆದ ಬೆಳೆಗಳು ನೀರುಪಾಲಾಗಿವೆ. ಇನ್ನು ಜಿಲ್ಲೆಯ ಹಲವೆಡೆ ಮನೆಗಳಿಗೆ ನೀರು ನುಗ್ಗಿ ಜನರು ಪರದಾಡುವಂತಾಗಿದೆ.

ಚಿಕ್ಕಮಗಳೂರಿನಲ್ಲಿ ಮುಂದುವರೆದ ವರುಣನ ಆರ್ಭಟ

ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ನಿರಂತರ ಮಳೆ ಸುರಿಯುತ್ತಿರುವುದರಿಂದ ಐದು ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ತಾಲೂಕಿನ ಕಟ್ಟೆ ಹೊಳೆ ಹಳ್ಳ ತುಂಬಿ ಹರಿಯುತ್ತಿದ್ದು, ರಸ್ತೆ ಸಂಚಾರದಲ್ಲಿ ಅಸ್ತವ್ಯಸ್ತ ಉಂಟಾಗಿದೆ.

ಇನ್ನೊಂದೆಡೆ ತಾಲೂಕಿನ ದಂದೂರಿನಲ್ಲಿ ನಿರಂತರ ಮಳೆ ಪರಿಣಾಮ 10ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗಿದ್ದು, ಪಂಪ್​ ಬಳಸಿ ಜನರು ನೀರನ್ನು ಹೊರಹಾಕುತ್ತಿದ್ದಾರೆ. ಇನ್ನು ತರೀಕೆರೆ ರೈಲ್ವೆ ಅಂಡರ್ ಪಾಸ್​ಗೆ​ ದೊಡ್ಡ ಕೆರೆಯ ನೀರು ನುಗ್ಗಿ, ವಾಹನ ಸವಾರರು ಪರದಾಡುವಂತಾಗಿದೆ. ನಂದಿಪುರ ಗ್ರಾಮದಲ್ಲಿ ಭಾರಿ ಮಳೆಗೆ ಕಿರು ಸೇತುವೆ ಕೊಚ್ಚಿ ಹೋಗಿದ್ದು, ರೈತರು ಬೆಳೆದಿದ್ದ ಈರುಳ್ಳಿ ಬೆಳೆ ನಾಶವಾಗಿದೆ. ಇನ್ನು ಮಳೆಯ ಅವಾಂತರ ಇಷ್ಟು ಜೋರಾಗಿದ್ದರೂ ಯಾವುದೇ ಅಧಿಕಾರಿಗಳು ಇತ್ತ ಗಮನ ಹರಿಸಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮುಂದುವರೆದ ವರುಣನ ಆರ್ಭಟ

ಕಡೂರು ತಾಲೂಕಿನ ಕರಿಕಲ್ಲು, ವೇದಾವತಿ ನದಿಗಳು ತುಂಬಿ ಹರಿಯುತ್ತಿವೆ. ಶಂಕರಪುರ ಗ್ರಾಮದಲ್ಲಿ ಮಳೆಯ ಆರ್ಭಟಕ್ಕೆ ನೂರಾರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ರಾಗಿ ಬೆಳೆ ನಾಶವಾಗಿದೆ. ತಾಲೂಕಿನ ನರಸೀಪುರ ಗ್ರಾಮದಲ್ಲಿ ಭಾರಿ ಮಳೆಗೆ ದನದ ಕೊಟ್ಟಿಗೆ ಕುಸಿದು ಬಿದ್ದಿದ್ದು, ಕೊಟ್ಟಿಗೆಯಲ್ಲಿ ಸಿಲುಕಿದ್ದ 6 ಜಾನುವಾರುಗಳನ್ನು ಸ್ಥಳೀಯರು ರಕ್ಷಿಸಿದ್ದಾರೆ.

ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ನಿರಂತರ ಮಳೆ ಸುರಿಯುತ್ತಿರುವುದರಿಂದ ಐದು ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ತಾಲೂಕಿನ ಕಟ್ಟೆ ಹೊಳೆ ಹಳ್ಳ ತುಂಬಿ ಹರಿಯುತ್ತಿದ್ದು, ರಸ್ತೆ ಸಂಚಾರದಲ್ಲಿ ಅಸ್ತವ್ಯಸ್ತ ಉಂಟಾಗಿದೆ.

ಇನ್ನೊಂದೆಡೆ ತಾಲೂಕಿನ ದಂದೂರಿನಲ್ಲಿ ನಿರಂತರ ಮಳೆ ಪರಿಣಾಮ 10ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗಿದ್ದು, ಪಂಪ್​ ಬಳಸಿ ಜನರು ನೀರನ್ನು ಹೊರಹಾಕುತ್ತಿದ್ದಾರೆ. ಇನ್ನು ತರೀಕೆರೆ ರೈಲ್ವೆ ಅಂಡರ್ ಪಾಸ್​ಗೆ​ ದೊಡ್ಡ ಕೆರೆಯ ನೀರು ನುಗ್ಗಿ, ವಾಹನ ಸವಾರರು ಪರದಾಡುವಂತಾಗಿದೆ. ನಂದಿಪುರ ಗ್ರಾಮದಲ್ಲಿ ಭಾರಿ ಮಳೆಗೆ ಕಿರು ಸೇತುವೆ ಕೊಚ್ಚಿ ಹೋಗಿದ್ದು, ರೈತರು ಬೆಳೆದಿದ್ದ ಈರುಳ್ಳಿ ಬೆಳೆ ನಾಶವಾಗಿದೆ. ಇನ್ನು ಮಳೆಯ ಅವಾಂತರ ಇಷ್ಟು ಜೋರಾಗಿದ್ದರೂ ಯಾವುದೇ ಅಧಿಕಾರಿಗಳು ಇತ್ತ ಗಮನ ಹರಿಸಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮುಂದುವರೆದ ವರುಣನ ಆರ್ಭಟ

ಕಡೂರು ತಾಲೂಕಿನ ಕರಿಕಲ್ಲು, ವೇದಾವತಿ ನದಿಗಳು ತುಂಬಿ ಹರಿಯುತ್ತಿವೆ. ಶಂಕರಪುರ ಗ್ರಾಮದಲ್ಲಿ ಮಳೆಯ ಆರ್ಭಟಕ್ಕೆ ನೂರಾರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ರಾಗಿ ಬೆಳೆ ನಾಶವಾಗಿದೆ. ತಾಲೂಕಿನ ನರಸೀಪುರ ಗ್ರಾಮದಲ್ಲಿ ಭಾರಿ ಮಳೆಗೆ ದನದ ಕೊಟ್ಟಿಗೆ ಕುಸಿದು ಬಿದ್ದಿದ್ದು, ಕೊಟ್ಟಿಗೆಯಲ್ಲಿ ಸಿಲುಕಿದ್ದ 6 ಜಾನುವಾರುಗಳನ್ನು ಸ್ಥಳೀಯರು ರಕ್ಷಿಸಿದ್ದಾರೆ.

Intro:Kn_Ckm_06_Rain_av_7202347Body:ಚಿಕ್ಕಮಗಳೂರು :-

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ಧಾರಕಾರ ಮಳೆ ಮುಂದುವರೆದಿದೆ. ನಿರಂತರ ಮಳೆ ಸುರಿಯುತ್ತಿರುವ ಹಿನ್ನಲೆ ತರೀಕೆರೆ ತಾಲೂಕಿನಲ್ಲಿರುವ ಕಟ್ಟೆಹೊಳೆ ಹಳ್ಳ ತುಂಬಿ ಹರಿಯೋದಕ್ಕೆ ಪ್ರಾರಂಭ ಮಾಡಿದೆ. ಐದು ವರ್ಷಗಳ ಬಳಿಕ ಈ ಹಳ್ಳ ತುಂಬಿ ಹರಿಯುತ್ತಿದ್ದು ರಸ್ತೆ ಸಂಚಾರದಲ್ಲಿ ಅಸ್ತವ್ಯಸ್ಥ ಉಂಟಾಗಿದೆ.ಇನ್ನೋಂದು ಕಡೆ ತಾಲೂಕಿನ ದಂದೂರಿನಲ್ಲಿ ನಿರಂತರ ಮಳೆಯ ಕಾರಣದಿಂದಾ ಮನೆಗಳಿಗೆ ನೀರು ನುಗ್ಗುತ್ತಿದ್ದು ಮೋಟಾರ್ ಇಟ್ಟು ನೀರನ್ನು ಮನೆಯ ಸದಸ್ಯರು ಹೊರ ಹಾಕುತ್ತಿದ್ದಾರೆ. 10 ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ರೂ ಸ್ಥಳಕ್ಕೆ ಬಾರದ ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ತರೀಕೆರೆಯ ರೈಲ್ವೆ ಅಂಡರ್ ಪಾಸ್ ಗೂ ನೀರು ನುಗ್ಗಿದ್ದು ಗ್ರಾಮಸ್ಥರು ಹಾಗೂ ವಾಹನ ಸವಾರರು ಪರದಾಟ ನಡೆಸುವಂತಾಗಿದೆ.ದೊಡ್ಡ ಕೆರೆಯ ನೀರು ಈ ಭಾಗದಲ್ಲಿ ನುಗ್ಗಿದ್ದು ರಸ್ತೆ ಸಂಚಾರ ಮಾಡಲೂ ಸಾಧ್ಯವಾಗದೇ ಜನರು ಪರದಾಟ ನಡೆಸುವಂತಾಗಿದೆ.ನಂದಿಪುರ ಗ್ರಾಮದಲ್ಲಿ ಮಳೆ ನರ್ತನ ಮುಂದುವರೆದಿದ್ದು ಬಾರೀ ಮಳೆಗೆ ಕಿರು ಸೇತುವೆ ಕೊಚ್ಚಿ ಹೋಗಿದೆ. ತಾಲೂಕಿನ ನಂದಿಪುರದಲ್ಲಿ ಈ ಘಟನೆ ನಡೆದಿದ್ದು ಈ ಭಾಗದಲ್ಲಿ ಬೆಳೆದಿದ್ದ ಈರುಳ್ಳಿ ಬೆಳೆಯೂ ನಾಶವಾಗಿದೆ.ಚಿಕ್ಕಮಗಳೂರು ಜಿಲ್ಲೆಯ ಇನ್ನೋಂದು ತಾಲ್ಲೂಕಾದ ಕಡೂರಿನಲ್ಲಿಯೂ ಮಹಾ ಮಳೆ ಪ್ರಾರಂಭವಾಗಿದ್ದು ತಾಲೂಕಿನ ಕರಿಕಲ್ಲು ಹೊಳೆ ತುಂಬಿ ಹರಿಯೋದಕ್ಕೆ ಪ್ರಾರಂಭ ಮಾಡಿದೆ. ಶಂಕರಪುರ ಗ್ರಾಮಕ್ಕೂ ನೀರು ನುಗ್ಗಿದ್ದು ನೂರಾರು ಎಕರೇ ಪ್ರದೇಶದಲ್ಲಿ ಬೆಳೆದಿದ್ದ ರಾಗಿ ಬೆಳೆ ನಾಶವಾಗಿ ಹೋಗಿದೆ.ತಾಲೂಕಿನ ನರಸೀಪುರ ಗ್ರಾಮದಲ್ಲಿ ಒಂದು ಅವಘಡ ನಡೆದಿದ್ದು ಬಾರೀ ಮಳೆಗೆ ದನದ ಕೊಟ್ಟಿಗೆ ಕುಸಿದು ಬಿದ್ದಿದೆ.ಕೊಟ್ಟಿಗೆಯಲ್ಲಿ ಸಿಲುಕಿದ್ದ 6 ಜಾನುವಾರುಗಳನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.ಇನ್ನು ಕಡೂರಿನಲ್ಲಿರುವ ವೇದಾವತಿ ನದಿಯೂ ತುಂಬಿ ಹರಿಯುತ್ತಿದ್ದು ದಶಕಗಳ ನಂತರ ಈ ನದಿ ಉಕ್ಕಿ ಹರಿಯೋದಕ್ಕೆ ಪ್ರಾರಂಭ ಮಾಡಿದೆ. ಚೌಳ ಹಿರಿಯೂರು ಬಳಿ ಇರುವ ಈ ನದಿ ಅಪಾಯದ ಮಟ್ಟ ಮೀರಿ ಹರಿಯೋದಕ್ಕೆ ಪ್ರಾರಂಭ ಮಾಡಿದೆ.....

Conclusion:ರಾಜಕುಮಾರ್.....
ಈ ಟಿವಿ ಭಾರತ್....
ಚಿಕ್ಕಮಗಳೂರು....
ETV Bharat Logo

Copyright © 2024 Ushodaya Enterprises Pvt. Ltd., All Rights Reserved.