ETV Bharat / state

ಚಾರ್ಮಾಡಿ ಘಾಟ್​ನ​ಲ್ಲಿ ಭಾರಿ ಮಳೆ: ಪ್ರವಾಸಿಗರನ್ನು ಸೆಳೆಯುತ್ತಿರುವ ಹತ್ತಾರು ಜಲಪಾತಗಳು

author img

By

Published : Jul 23, 2021, 7:21 AM IST

ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಜಿಲ್ಲೆಯಲ್ಲಿರುವ ಜಲಪಾತಗಳಿಗೆ ಜೀವಕಳೆ ಬಂದಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹತ್ತಾರು ಕಡೆ ಕೃತಕ ಜಲಪಾತಗಳು ನಿರ್ಮಾಣವಾಗಿವೆ.

Heavy rain in charmadi ghat
ಚಾರ್ಮಾಡಿ ಘಾಟ್​ನ​ಲ್ಲಿ ಭಾರೀ ಮಳೆ

ಚಿಕ್ಕಮಗಳೂರು: ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ಹಲವು ಜಿಲ್ಲೆಗಳಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್​ನಲ್ಲಿ ಸಹ ಭಾರಿ ಮಳೆ ಸುರಿಯುತ್ತಿದ್ದು, ಪರಿಣಾಮ ಹತ್ತಾರು ಜಲಪಾತಗಳು ತುಂಬಿ ತುಳುಕುತ್ತಿವೆ.

ಮೋಜು, ಮಸ್ತಿಗೆ ಎಂದು ಚಾರ್ಮಾಡಿ ಘಾಟ್​ಗೆ ಬಂದಂತಹ ಪ್ರವಾಸಿಗರಿಗೆ ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರು ಬ್ರೇಕ್​ ಹಾಕಿದ್ದು, ಗಸ್ತು ತಿರುಗಾಟ ಪ್ರಾರಂಭಿಸಿದ್ದಾರೆ. ಚಾರ್ಮಾಡಿ ಘಾಟ್​ನ ವ್ಯೂ ಪಾಯಿಂಟ್​ನಲ್ಲೇ ಹೈವೇ ಪೆಟ್ರೋಲ್(ಹೆದ್ದಾರಿ ವೀಕ್ಷಣ ವಾಹನ) ಪೊಲೀಸ್ ವಾಹನ ಬೀಡು ಬಿಟ್ಟಿದೆ. ಯಾರು ಜಲಪಾತಗಳಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಚಾರ್ಮಾಡಿ ಘಾಟ್​ನ​ಲ್ಲಿ ಭಾರಿ ಮಳೆ

ಕಳೆದ ವಾರ ಈ ಭಾಗದಲ್ಲಿ ಕೆಲ ಯುವಕರು ರಸ್ತೆ ಮಧ್ಯೆಯೇ ಕಾರಿನಲ್ಲಿ ಹಾಡುಗಳನ್ನು ಹಾಕಿಕೊಂಡು ಡ್ಯಾನ್ಸ್ ಮಾಡಿದ್ದರು. ಪ್ರವಾಸಿಗರ ಮಿತಿಮೀರಿದ ವರ್ತನೆಯಿಂದ ವಾಹನ ಸವಾರರು ತೊಂದರೆ ಅನುಭವಿಸಿದರು. ಜೊತೆಗೆ ಟ್ರಾಫಿಕ್ ಜಾಮ್ ಸಮಸ್ಯೆ ಕೂಡ ಉಂಟಾಗಿತ್ತು. ಈ ಹಿನ್ನೆಲೆ ಇದೀಗ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಇನ್ನು ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಜಿಲ್ಲೆಯಲ್ಲಿರುವ ಜಲಪಾತಗಳಿಗೆ ಜೀವಕಳೆ ಬಂದಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹತ್ತಾರು ಕಡೆ ಕೃತಕ ಜಲಪಾತಗಳು ನಿರ್ಮಾಣವಾಗಿದ್ದು, ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿವೆ.

ಚಿಕ್ಕಮಗಳೂರು: ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ಹಲವು ಜಿಲ್ಲೆಗಳಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್​ನಲ್ಲಿ ಸಹ ಭಾರಿ ಮಳೆ ಸುರಿಯುತ್ತಿದ್ದು, ಪರಿಣಾಮ ಹತ್ತಾರು ಜಲಪಾತಗಳು ತುಂಬಿ ತುಳುಕುತ್ತಿವೆ.

ಮೋಜು, ಮಸ್ತಿಗೆ ಎಂದು ಚಾರ್ಮಾಡಿ ಘಾಟ್​ಗೆ ಬಂದಂತಹ ಪ್ರವಾಸಿಗರಿಗೆ ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರು ಬ್ರೇಕ್​ ಹಾಕಿದ್ದು, ಗಸ್ತು ತಿರುಗಾಟ ಪ್ರಾರಂಭಿಸಿದ್ದಾರೆ. ಚಾರ್ಮಾಡಿ ಘಾಟ್​ನ ವ್ಯೂ ಪಾಯಿಂಟ್​ನಲ್ಲೇ ಹೈವೇ ಪೆಟ್ರೋಲ್(ಹೆದ್ದಾರಿ ವೀಕ್ಷಣ ವಾಹನ) ಪೊಲೀಸ್ ವಾಹನ ಬೀಡು ಬಿಟ್ಟಿದೆ. ಯಾರು ಜಲಪಾತಗಳಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಚಾರ್ಮಾಡಿ ಘಾಟ್​ನ​ಲ್ಲಿ ಭಾರಿ ಮಳೆ

ಕಳೆದ ವಾರ ಈ ಭಾಗದಲ್ಲಿ ಕೆಲ ಯುವಕರು ರಸ್ತೆ ಮಧ್ಯೆಯೇ ಕಾರಿನಲ್ಲಿ ಹಾಡುಗಳನ್ನು ಹಾಕಿಕೊಂಡು ಡ್ಯಾನ್ಸ್ ಮಾಡಿದ್ದರು. ಪ್ರವಾಸಿಗರ ಮಿತಿಮೀರಿದ ವರ್ತನೆಯಿಂದ ವಾಹನ ಸವಾರರು ತೊಂದರೆ ಅನುಭವಿಸಿದರು. ಜೊತೆಗೆ ಟ್ರಾಫಿಕ್ ಜಾಮ್ ಸಮಸ್ಯೆ ಕೂಡ ಉಂಟಾಗಿತ್ತು. ಈ ಹಿನ್ನೆಲೆ ಇದೀಗ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಇನ್ನು ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಜಿಲ್ಲೆಯಲ್ಲಿರುವ ಜಲಪಾತಗಳಿಗೆ ಜೀವಕಳೆ ಬಂದಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹತ್ತಾರು ಕಡೆ ಕೃತಕ ಜಲಪಾತಗಳು ನಿರ್ಮಾಣವಾಗಿದ್ದು, ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.