ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಎಡೆಬಿಡದೆ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಜಿಲ್ಲೆಯ ಮಲೆನಾಡು ಭಾಗವಾದ ಕಳಸ, ಕೊಟ್ಟಿಗೆಹಾರ, ಚಾರ್ಮಾಡಿ ಘಾಟಿ, ಬಾಳೂರು, ಬಣಕಲ್, ಶೃಂಗೇರಿ, ಮೆಣಸೆಯಲ್ಲಿ ಮಳೆ ಮುಂದುವರೆದಿದ್ದು, ರೈತರು ನಿಟ್ಟುಸಿರು ಬಿಟ್ಟಿದ್ದಾರೆ.
ಇನ್ನು ಕೆಲ ಹಳ್ಳಿಗಳಲ್ಲಿ ವಿದ್ಯುತ್ ಸಂಪರ್ಕದಲ್ಲೂ ವ್ಯತಯ್ಯ ಉಂಟಾಗಿದ್ದು, ನಿರಂತರ ಮಳೆ ಸುರಿಯುತ್ತಿರುವ ಹಿನ್ನಲೆ ವಾಹನ ಸವಾರರಿಗೂ ಕಿರಿ ಕಿರಿ ಉಂಟಾಗುತ್ತಿದೆ.