ಚಿಕ್ಕಮಗಳೂರು: ರಾಜ್ಯದ ಹಲವೆಡೆ ಮೊನ್ನೆಯಿಂದ ಮಳೆಯಾಗುತ್ತಿದ್ದು, ಚಿಕ್ಕಮಗಳೂರಿನಲ್ಲೂ ಕೂಡ ಇಂದು ಧಾರಾಕಾರ ಮಳೆಯಾಗಿದೆ.
ಚಿಕ್ಕಮಗಳೂರು ನಗರ ಸೇರಿದಂತೆ ಬಾಳೆಹೊನ್ನೂರು, ಕಳಸ, ಶೃಂಗೇರಿ, ಕೊಪ್ಪ ಸುತ್ತಮುತ್ತ ಮಳೆ ಸುರಿದಿದೆ. ಇಷ್ಟು ದಿನ ಕಾದ ಕಾವಲಿಯಂತಾಗಿದ್ದ ನಗರಕ್ಕೆ ಮಳೆ ತಂಪೆರೆದಿದ್ದು, ಗುಡುಗು-ಸಿಡಿಲಿನೊಂದಿಗೆ ವರುಣನ ಆಗಮನವಾಗಿದೆ.