ETV Bharat / state

ತರೀಕೆರೆಯಲ್ಲಿ ಭಾರೀ ಮಳೆ: ತುಂಬಿ ಹರಿದ ಹಳ್ಳ-ಕೊಳ್ಳಗಳು, ಹಲವೆಡೆ ರಸ್ತೆ ಸಂಪರ್ಕ ಕಡಿತ - ಚಿಕ್ಕಮಗಳೂರಲ್ಲಿ ಭಾರೀ ಮಳೆ

ಚಿಕ್ಕಮಗಳೂರು ಜಿಲ್ಲೆಯ ಬಯಲುಸೀಮೆ ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಹಲವೆಡೆ ರಸ್ತೆ ಸಂಪರ್ಕ ಬಂದ್​ ಆಗಿದೆ. ಸೇತುವೆಗಳು ಮುಳುಗಡೆಯಾಗಿವೆ. ಜೊತೆಗೆ ಮನೆಗಳಿಗೂ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ತವವಾಗಿದೆ.

ಭಾರಿ ಮಳೆಯಿಂದ ಅವಾಂತರ ಸೃಷ್ಟಿ
author img

By

Published : Oct 21, 2019, 12:59 PM IST

Updated : Oct 21, 2019, 1:33 PM IST

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಇಷ್ಟು ದಿನಗಳ ಕಾಲ ಸುರಿದ ಧಾರಾಕಾರ ಮಳೆಗೆ ಜನರು ಸುಸ್ತಾಗಿ ಹೋಗಿದ್ದರು. ಆದರೆ ಈಗ ಜಿಲ್ಲೆಯ ಬಯಲುಸೀಮೆ ಭಾಗದಲ್ಲೂ ಎಡಬಿಡದೆ ಮಳೆ ಸುರಿಯುತ್ತಿದ್ದು, ಜನ ಸಂಕಷ್ಟದಲ್ಲಿದ್ದಾರೆ.

ಭಾರಿ ಮಳೆಯಿಂದ ಅವಾಂತರ ಸೃಷ್ಟಿ

ಜಿಲ್ಲೆಯ ಬಯಲುಸೀಮೆ ತಾಲೂಕು ತರೀಕೆರೆಯ ಅಜ್ಜಂಪುರ, ಶಿವನಿ ಭಾಗದಲ್ಲಿ ಇಡೀ ರಾತ್ರಿ ಸುರಿದ ಭಾರಿ ಮಳೆಗೆ ದೊಡ್ಡ ದೊಡ್ಡ ಕೆರೆಗಳ ಕೋಡಿ ಬಿದ್ದಿದೆ. ಜೊತೆಗೆ ತಾಲೂಕಿನ ಎ.ರಂಗಾಪುರ ಗ್ರಾಮದಲ್ಲಿ ಸುಮಾರು 10 ಮನೆಗಳಿಗೆ ನೀರು ನುಗ್ಗಿದ್ದು, ಜನರು ಮನೆಯಿಂದ ಹೊರ ಬರಲು ಆಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ತರೀಕೆರೆಯ ಹಾದಿಕೆರೆ-ಇಟ್ಟಿಗೆ ಸಂಪರ್ಕ ಬಂದ್​ ಆಗಿದೆ. ಜೊತೆಗೆ ಅಜ್ಜಂಪುರ ಸಮೀಪದ ಮಗುಳಿ ಸೇತವೆ ಮುಳುಗಿದ್ದು, ಮುಗುಳಿ - ತಮಟಹಳ್ಳಿ ಗ್ರಾಮಗಳ ಸಂಪರ್ಕ ಸಂಪೂರ್ಣವಾಗಿ ಬಂದ್ ಆಗಿದೆ. ಈ ಹಿನ್ನೆಲೆ ಸಂಚಾರ ಕೂಡ ಸ್ಥಗಿತವಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.

ತಾಲೂಕಿನ ಜಂಬದ ಹಳ್ಳ ಪೂರ್ತಿಯಾದ ಹಿನ್ನೆಲೆ ಜಲಾಶಯದಿಂದಲೂ ನೀರನ್ನು ಹೊರಕ್ಕೆ ಹರಿಬಿಡಲಾಗುತ್ತಿದೆ. ಮಳೆಯ ನೀರು ಹಾಗೂ ಜಲಾಶಯದ ನೀರು ಭಾರೀ ಪ್ರಮಾಣದಲ್ಲಿ ಹರಿಯುತ್ತಿದ್ದು, ಜನರಿಗೆ ತೊಂದರೆ ಆಗುತ್ತಿದೆ. 12 ವರ್ಷಗಳ ನಂತರ ಜಂಬದ ಹಳ್ಳ ತುಂಬಿ ಹರಿಯುತ್ತಿದೆ. ಇದರಿಂದ ತರೀಕೆರೆ ತಾಲೂಕಿನಲ್ಲಿ ಬಹುತೇಕ ಕೆರೆಗಳು ಭರ್ತಿಯಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಉರುಳಿ ಬಿದ್ದ ಕಾರು:

ನಿರಂತರ ಮಳೆಯ ಕಾರಣಾದಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆಯ ಪಕ್ಕಕ್ಕೆ ಉರುಳಿ ಬಿದ್ದಿದೆ. ತರೀಕೆರೆ ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರಸ್ತೆಯ ಮೇಲೆ ನೀರು ಹರಿಯುತ್ತಿರುವ ಕಾರಣ ಈ ಘಟನೆ ಸಂಭವಿಸಿದೆ. ಲಿಂಗದಹಳ್ಳಿ ಸುತ್ತಮುತ್ತಲ ಪ್ರದೇಶದಲ್ಲಿಯೂ ಅಡಿಕೆ ತೋಟ ಹಾಗೂ ಬಾಳೆ ತೋಟ ಮುಳುಗಡೆಯಾಗಿವೆ. ಅಲ್ಲದೆ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ.

ರೈತನ ಕಣ್ಣಲ್ಲಿ ನೀರು ತರಿಸುತ್ತಿರುವ ಈರುಳ್ಳಿ:

ಇವೆಲ್ಲಾ ಒಂದೆಡೆಯಾದರೆ, ರೈತನ ಸಂಕಷ್ಟ ಮುಗಿಲು ಮಟ್ಟುವಂತಿದೆ. ಮಳೆಯ ನೀರಿಗೆ ಕೊಚ್ಚಿ ಹೋದ ಸಾವಿರಾರು ಚೀಲ ಈರುಳ್ಳಿ ಬೆಳೆ ರಸ್ತೆಯಲ್ಲಿ ಹರಡಿ ಬಿದ್ದಿದ್ದ ದೃಶ್ಯ ನೋಡಿ ಈರುಳ್ಳಿ ಬೆಳೆಗಾರರು ಕಣ್ಣೀರು ಹಾಕುತ್ತಿದ್ದಾರೆ.

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಇಷ್ಟು ದಿನಗಳ ಕಾಲ ಸುರಿದ ಧಾರಾಕಾರ ಮಳೆಗೆ ಜನರು ಸುಸ್ತಾಗಿ ಹೋಗಿದ್ದರು. ಆದರೆ ಈಗ ಜಿಲ್ಲೆಯ ಬಯಲುಸೀಮೆ ಭಾಗದಲ್ಲೂ ಎಡಬಿಡದೆ ಮಳೆ ಸುರಿಯುತ್ತಿದ್ದು, ಜನ ಸಂಕಷ್ಟದಲ್ಲಿದ್ದಾರೆ.

ಭಾರಿ ಮಳೆಯಿಂದ ಅವಾಂತರ ಸೃಷ್ಟಿ

ಜಿಲ್ಲೆಯ ಬಯಲುಸೀಮೆ ತಾಲೂಕು ತರೀಕೆರೆಯ ಅಜ್ಜಂಪುರ, ಶಿವನಿ ಭಾಗದಲ್ಲಿ ಇಡೀ ರಾತ್ರಿ ಸುರಿದ ಭಾರಿ ಮಳೆಗೆ ದೊಡ್ಡ ದೊಡ್ಡ ಕೆರೆಗಳ ಕೋಡಿ ಬಿದ್ದಿದೆ. ಜೊತೆಗೆ ತಾಲೂಕಿನ ಎ.ರಂಗಾಪುರ ಗ್ರಾಮದಲ್ಲಿ ಸುಮಾರು 10 ಮನೆಗಳಿಗೆ ನೀರು ನುಗ್ಗಿದ್ದು, ಜನರು ಮನೆಯಿಂದ ಹೊರ ಬರಲು ಆಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ತರೀಕೆರೆಯ ಹಾದಿಕೆರೆ-ಇಟ್ಟಿಗೆ ಸಂಪರ್ಕ ಬಂದ್​ ಆಗಿದೆ. ಜೊತೆಗೆ ಅಜ್ಜಂಪುರ ಸಮೀಪದ ಮಗುಳಿ ಸೇತವೆ ಮುಳುಗಿದ್ದು, ಮುಗುಳಿ - ತಮಟಹಳ್ಳಿ ಗ್ರಾಮಗಳ ಸಂಪರ್ಕ ಸಂಪೂರ್ಣವಾಗಿ ಬಂದ್ ಆಗಿದೆ. ಈ ಹಿನ್ನೆಲೆ ಸಂಚಾರ ಕೂಡ ಸ್ಥಗಿತವಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.

ತಾಲೂಕಿನ ಜಂಬದ ಹಳ್ಳ ಪೂರ್ತಿಯಾದ ಹಿನ್ನೆಲೆ ಜಲಾಶಯದಿಂದಲೂ ನೀರನ್ನು ಹೊರಕ್ಕೆ ಹರಿಬಿಡಲಾಗುತ್ತಿದೆ. ಮಳೆಯ ನೀರು ಹಾಗೂ ಜಲಾಶಯದ ನೀರು ಭಾರೀ ಪ್ರಮಾಣದಲ್ಲಿ ಹರಿಯುತ್ತಿದ್ದು, ಜನರಿಗೆ ತೊಂದರೆ ಆಗುತ್ತಿದೆ. 12 ವರ್ಷಗಳ ನಂತರ ಜಂಬದ ಹಳ್ಳ ತುಂಬಿ ಹರಿಯುತ್ತಿದೆ. ಇದರಿಂದ ತರೀಕೆರೆ ತಾಲೂಕಿನಲ್ಲಿ ಬಹುತೇಕ ಕೆರೆಗಳು ಭರ್ತಿಯಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಉರುಳಿ ಬಿದ್ದ ಕಾರು:

ನಿರಂತರ ಮಳೆಯ ಕಾರಣಾದಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆಯ ಪಕ್ಕಕ್ಕೆ ಉರುಳಿ ಬಿದ್ದಿದೆ. ತರೀಕೆರೆ ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರಸ್ತೆಯ ಮೇಲೆ ನೀರು ಹರಿಯುತ್ತಿರುವ ಕಾರಣ ಈ ಘಟನೆ ಸಂಭವಿಸಿದೆ. ಲಿಂಗದಹಳ್ಳಿ ಸುತ್ತಮುತ್ತಲ ಪ್ರದೇಶದಲ್ಲಿಯೂ ಅಡಿಕೆ ತೋಟ ಹಾಗೂ ಬಾಳೆ ತೋಟ ಮುಳುಗಡೆಯಾಗಿವೆ. ಅಲ್ಲದೆ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ.

ರೈತನ ಕಣ್ಣಲ್ಲಿ ನೀರು ತರಿಸುತ್ತಿರುವ ಈರುಳ್ಳಿ:

ಇವೆಲ್ಲಾ ಒಂದೆಡೆಯಾದರೆ, ರೈತನ ಸಂಕಷ್ಟ ಮುಗಿಲು ಮಟ್ಟುವಂತಿದೆ. ಮಳೆಯ ನೀರಿಗೆ ಕೊಚ್ಚಿ ಹೋದ ಸಾವಿರಾರು ಚೀಲ ಈರುಳ್ಳಿ ಬೆಳೆ ರಸ್ತೆಯಲ್ಲಿ ಹರಡಿ ಬಿದ್ದಿದ್ದ ದೃಶ್ಯ ನೋಡಿ ಈರುಳ್ಳಿ ಬೆಳೆಗಾರರು ಕಣ್ಣೀರು ಹಾಕುತ್ತಿದ್ದಾರೆ.

Intro:Kn_Ckm_03_Manege nuggida neru_av_7202347
Body:ಚಿಕ್ಕಮಗಳೂರು :-

ಚಿಕ್ಕಮಗಳೂರು ಜಿಲ್ಲೆಯ ಬಯಲು ಸೀಮೆ ಭಾಗದಲ್ಲಿ ಸುರಿಯುತ್ತಿರುವ ಧಾರಕಾರ ಮಳೆ ನಾನಾ ಅವಾಂತರ ಸೃಷ್ಟಿ ಮಾಡೋದಕ್ಕೆ ಪ್ರಾರಂಭ ಮಾಡಿದೆ. ರಾತ್ರಿಯಿಂದಾ ಸುರಿಯುತ್ತಿರುವ ಮಳೆಗೆ ಬಯಲು ಸೀಮೆ ಜನರು ಹೈರಾಣಾಗಿ ಹೋಗಿದ್ದು ನೀರು ಗಂಟೆ ಗಂಟೆಯಿಂದಾ ಗಂಟೆಗೆ ರಭಸವಾಗಿ ಹರಿಯೋದಕ್ಕೆ ಪ್ರಾರಂಭ ಮಾಡಿದೆ.ನಿರಂತರ ಸುರಿಯುತ್ತಿರುವ ಮಳೆಯಿಂದಾ ತರೀಕೆರೆ ತಾಲೂಕಿನಲ್ಲಿರುವ ದೊಡ್ಡ ಕೆರೆ ಕೋಡಿ ಬಿದ್ದಿದ್ದು ಕೆರೆ ಕೋಡಿ ಬಿದ್ದ ಪರಿಣಾಮ ಎ.ರಂಗಾಪುರದಲ್ಲಿರುವ ಮನೆಗಳಿಗೆ ನೀರು ನುಗ್ಗಲು ಪ್ರಾರಂಭ ಮಾಡಿದೆ. ಎ.ರಂಗಾಪುರ ಗ್ರಾಮದಲ್ಲಿ ಸುಮಾರು 10 ಮನೆಗಳಿಗೆ ಕೆರೆಯ ನೀರು ನುಗ್ಗಿದ್ದು ಮನೆಯಿಂದಾ ಸದಸ್ಯರು ಹೊರ ಬರಲು ಆಗದಂತಹ ಪರಿಸ್ಥಿತಿ ನಿರ್ಮಾಣ ಆಗಿದೆ. ನಿರಂತರ ಮಳೆಯಿಂದಾ ತರೀಕೆರೆಯ ಹಾದಿಕೆರೆ, ಇಟ್ಟಿಗೆ, ಸಂಪರ್ಕ ಬಂದ್ ಆಗಿದ್ದು ನಿರಂತರ ಸುರಿಯುತ್ತಿರುವ ಮಳೆಯ ನೀರು ರಸ್ತೆಯ ಮೇಲೆಯೇ ಹರಿಯೋದಕ್ಕೆ ಪ್ರಾರಂಭ ಮಾಡಿದೆ.....

Conclusion:ರಾಜಕುಮಾರ್....
ಈ ಟಿವಿ ಭಾರತ್.....
ಚಿಕ್ಕಮಗಳೂರು....
Last Updated : Oct 21, 2019, 1:33 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.