ಚಿಕ್ಕಮಗಳೂರು: ಜಿಲ್ಲೆಯಲ್ಲಿ ಹಲವಾರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಮತ್ತೆ ಅವಾಂತರಗಳು ಸೃಷ್ಟಿಯಾಗುತ್ತಿವೆ. ನಿರಂತರ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಕುಸಿತ ಉಂಟಾಗಿದೆ.
![ಕಾಫಿನಾಡಲ್ಲಿ ಮಳೆರಾಯನ ಆರ್ಭಟ](https://etvbharatimages.akamaized.net/etvbharat/prod-images/kn-ckm-05-raste-kusita-av-7202347_18052020165811_1805f_1589801291_648.jpg)
ಆಲ್ದೂರು, ಬಾಳೆಹೊನ್ನೂರಿನಲ್ಲಿ ಭಾರಿ ವಾಹನಗಳ ಓಡಾಟಕ್ಕೆ ತಡೆಯೊಡ್ಡಲಾಗಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ಹಾಗೂ ಕೊಟ್ಟಿಗೆಹಾರದ ಸುತ್ತಮುತ್ತ ವರುಣದೇವ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ. ಬಿರುಗಾಳಿ, ಗುಡುಗು-ಸಿಡಿಲಿನೊಂದಿಗೆ ಸುರಿದ ಮಳೆಗೆ ವಿದ್ಯುತ್ ಕಂಬಗಳು ಹಾಗೂ ರಸ್ತೆ ಬದಿಯ ಮರಗಳು ಧರೆಗುರುಳಿವೆ.
![ಕಾಫಿನಾಡಲ್ಲಿ ಮಳೆರಾಯನ ಆರ್ಭಟ](https://etvbharatimages.akamaized.net/etvbharat/prod-images/kn-ckm-03-rain-av-7202347_18052020165452_1805f_1589801092_161.jpg)
ಮೂಡಿಗೆರೆ ಬಾಳೂರು, ಮತ್ತಿಕಟ್ಟೆ, ಹೊಸಳ್ಳಿ ಹಾಗೂ ಬಣಕಲ್ ಸುತ್ತಮುತ್ತ ಧಾರಾಕಾರ ಮಳೆ ಸುರಿಯುತ್ತಿದ್ದು, ಜನ ಆತಂಕಕ್ಕೀಡಾಗಿದ್ದಾರೆ. ಗ್ರಾಮೀಣ ಭಾಗದಲ್ಲಿ ಅಲ್ಲಲ್ಲೇ ವಿದ್ಯುತ್ ತಂತಿಗಳ ಮೇಲೆ ಮರದ ರೆಂಬೆಕೊಂಬೆಗಳು ಬಿದ್ದಿರೋದ್ರಿಂದ ಗ್ರಾಮೀಣ ಭಾಗದಲ್ಲಿ ವಿದ್ಯುತ್ ಸಂಪರ್ಕ ಕೂಡ ಕಡಿತಗೊಂಡಿದೆ.