ETV Bharat / state

ಚಿಕ್ಕಮಗಳೂರಿನಲ್ಲಿ ಮಳೆಯಾರ್ಭಟ: ರೆಸಾರ್ಟ್ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ಗುಡ್ಡಕುಸಿತ!

author img

By

Published : Jul 9, 2022, 7:10 PM IST

ತ್ರಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಡ್ಡದಲ್ಲಿ ರೆಸಾರ್ಟ್ ನಿರ್ಮಾಣ ಕಾಮಗಾರಿ ನಡೆಸಿದ ಪರಿಣಾಮ ಗುಡ್ಡ ಕುಸಿತ ಆಗಿದೆ.

hill collapsed due to rain in Chikkamagaluru
ಚಿಕ್ಕಮಗಳೂರಿನಲ್ಲಿ ಗುಡ್ಡಕುಸಿತ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಎಡಬಿಡದೇ ಮಳೆ ಸುರಿಯುತ್ತಿದೆ. ಮೂಡಿಗೆರೆ ತಾಲೂಕಿನ ತ್ರಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗುಡ್ಡ ಕುಸಿತವಾಗಿದೆ.

ಗುಡ್ಡದಲ್ಲಿ ರೆಸಾರ್ಟ್ ನಿರ್ಮಾಣ ಕಾಮಗಾರಿ ನಡೆಸಿದ ಪರಿಣಾಮ ಗುಡ್ಡ ಕುಸಿತ ಆಗಿದೆ. 4 ಎಕರೆಗೂ ಹೆಚ್ಚು ಪ್ರದೇಶದಲ್ಲಿ ಭೂಕುಸಿತ ಉಂಟಾಗಿದ್ದು, ಕೋಗಿಲೆ, ಗುತ್ತಿ, ದೇವರಮನೆ ಗ್ರಾಮದ ಜನರಲ್ಲಿ ಆತಂಕ ಮನೆ ಮಾಡಿದೆ. ಇನ್ನು ಗುಡ್ಡ ಕುಸಿತದ ಸ್ಥಳದಲ್ಲೇ ಹಳ್ಳ ಹರಿಯುತ್ತಿದ್ದು, ಭಯದ ವಾತಾವರಣ ನಿರ್ಮಾಣವಾಗಿದೆ.

ಗುಡ್ಡಕುಸಿತ-ಪ್ರತಿಕ್ರಿಯೆ ಹೀಗಿದೆ..

ರೆಸಾರ್ಟ್ ನಿರ್ಮಾಣಕ್ಕೆ ತ್ರಿಪುರ ಗ್ರಾಮ ಪಂಚಾಯಿತಿ ಅನುಮತಿ ನೀಡಿತ್ತು. ಗುಡ್ಡದಲ್ಲಿ ರೆಸಾರ್ಟ್ ನಿರ್ಮಾಣಕ್ಕೆ ಅನುಮತಿ ನೀಡಿದ್ದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮಳೆ‌ ಹೆಚ್ಚಾದರೆ ಮತ್ತಷ್ಟು ಗುಡ್ಡ ಕುಸಿಯುವ ಆತಂಕ ಇಲ್ಲಿನ ಸ್ಥಳೀಯರಲ್ಲಿ ಮನೆ ಮಾಡಿದೆ.

ಇದನ್ನೂ ಓದಿ: ಮಳೆಯಿಂದ ಜಲಪಾತಗಳ ಭೋರ್ಗರೆತ: ಹೆಬ್ಬೆ, ಬಾಳೆ ಬರೆ ಫಾಲ್ಸ್ ದೃಶ್ಯ ನಯನ ಮನೋಹರ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಎಡಬಿಡದೇ ಮಳೆ ಸುರಿಯುತ್ತಿದೆ. ಮೂಡಿಗೆರೆ ತಾಲೂಕಿನ ತ್ರಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗುಡ್ಡ ಕುಸಿತವಾಗಿದೆ.

ಗುಡ್ಡದಲ್ಲಿ ರೆಸಾರ್ಟ್ ನಿರ್ಮಾಣ ಕಾಮಗಾರಿ ನಡೆಸಿದ ಪರಿಣಾಮ ಗುಡ್ಡ ಕುಸಿತ ಆಗಿದೆ. 4 ಎಕರೆಗೂ ಹೆಚ್ಚು ಪ್ರದೇಶದಲ್ಲಿ ಭೂಕುಸಿತ ಉಂಟಾಗಿದ್ದು, ಕೋಗಿಲೆ, ಗುತ್ತಿ, ದೇವರಮನೆ ಗ್ರಾಮದ ಜನರಲ್ಲಿ ಆತಂಕ ಮನೆ ಮಾಡಿದೆ. ಇನ್ನು ಗುಡ್ಡ ಕುಸಿತದ ಸ್ಥಳದಲ್ಲೇ ಹಳ್ಳ ಹರಿಯುತ್ತಿದ್ದು, ಭಯದ ವಾತಾವರಣ ನಿರ್ಮಾಣವಾಗಿದೆ.

ಗುಡ್ಡಕುಸಿತ-ಪ್ರತಿಕ್ರಿಯೆ ಹೀಗಿದೆ..

ರೆಸಾರ್ಟ್ ನಿರ್ಮಾಣಕ್ಕೆ ತ್ರಿಪುರ ಗ್ರಾಮ ಪಂಚಾಯಿತಿ ಅನುಮತಿ ನೀಡಿತ್ತು. ಗುಡ್ಡದಲ್ಲಿ ರೆಸಾರ್ಟ್ ನಿರ್ಮಾಣಕ್ಕೆ ಅನುಮತಿ ನೀಡಿದ್ದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮಳೆ‌ ಹೆಚ್ಚಾದರೆ ಮತ್ತಷ್ಟು ಗುಡ್ಡ ಕುಸಿಯುವ ಆತಂಕ ಇಲ್ಲಿನ ಸ್ಥಳೀಯರಲ್ಲಿ ಮನೆ ಮಾಡಿದೆ.

ಇದನ್ನೂ ಓದಿ: ಮಳೆಯಿಂದ ಜಲಪಾತಗಳ ಭೋರ್ಗರೆತ: ಹೆಬ್ಬೆ, ಬಾಳೆ ಬರೆ ಫಾಲ್ಸ್ ದೃಶ್ಯ ನಯನ ಮನೋಹರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.