ETV Bharat / state

ದೇಶಕ್ಕಾಗಿ ಕೊರೊನಾ ವಾರಿಯರ್ಸ್‌ ಸಲ್ಲಿಸಿರುವ ಸೇವೆ ಶ್ಲಾಘನೀಯ: ಸಚಿವ ಸಿ.ಟಿ ರವಿ

author img

By

Published : Jun 23, 2020, 4:34 PM IST

ಕೊರೊನಾ ಸೋಂಕು ಈಗಾಗಲೇ ಜಿಲ್ಲೆ, ರಾಜ್ಯ ಸೇರಿದಂತೆ ಎಲ್ಲೆಡೆ ವ್ಯಾಪಕವಾಗಿ ಹರಡುತ್ತಿದ್ದು, ನಮ್ಮ ಕುಟುಂಬವನ್ನು ಸುರಕ್ಷಿತವಾಗಿಟ್ಟುಕೊಳ್ಳುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ. ಹಾಗಾಗಿ ಸಾಮಾಜಿಕ ಅಂತರ, ಮಾಸ್ಕ್ ಬಳಕೆ, ಸ್ಯಾನಿಟೈಸೇಶನ್, ವೈಯಕ್ತಿಕ ಸ್ವಚ್ಛತೆ ಒಳಗೊಂಡು ಸರ್ಕಾರದ ನಿಯಮಗಳನ್ನು ಪ್ರತಿಯೊಬ್ಬರೂ ಕೂಡಾ ಪಾಲಿಸುವ ಮೂಲಕ ಸೋಂಕು ನಿಯಂತ್ರಣಕ್ಕೆ ಶ್ರಮಿಸಬೇಕು ಎಂದು ಸಚಿವ ಸಿ.ಟಿ ರವಿ ಮನವಿ ಮಾಡಿದರು.

Honoured to corona warrior's
Honoured to corona warrior's

ಚಿಕ್ಕಮಗಳೂರು: ಮಹಾಮಾರಿ ಕೊರೊನಾ ಸೋಂಕಿನ ಕುರಿತು ಜನತೆಗೆ ನಿರಂತರವಾಗಿ ಜಾಗೃತಿ ಮೂಡಿಸುತ್ತಿರುವ, ಆರೊಗ್ಯ ಇಲಾಖೆ, ಪೊಲೀಸ್ ಇಲಾಖೆ, ಮತ್ತು ಆಶಾ ಕಾರ್ಯಕರ್ತೆಯರು ಸೇರಿದಂತೆ ಸ್ವಯಂ ಸೇವಕರ ಕಾರ್ಯ ಶ್ಲಾಘನೀಯವಾದದ್ದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ ರವಿ ತಿಳಿಸಿದರು.

ಜಿಲ್ಲೆಯ ಕಡೂರು ತಾಲೂಕಿನ ಪಿಳ್ಳೇನಹಳ್ಳಿ ಗ್ರಾಮ ಪಂಚಾಯತ್ ನಲ್ಲಿ ಸ್ಥಳೀಯ ಆಡಳಿತದ ವತಿಯಿಂದ ಅಂಗನವಾಡಿ, ಆಶಾ, ಆರೋಗ್ಯ ಕಾರ್ಯಕರ್ತೆಯರಿಗಾಗಿ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಕೊರೊನಾ ಸೋಂಕು ಕೂಲಿ ಕಾರ್ಮಿಕರಿಂದ ಹಿಡಿದು ದೊಡ್ಡ ಉದ್ದಿಮೆದಾರರವರೆಗೂ ಆರ್ಥಿಕವಾಗಿ ಸಂಕಷ್ಟ ಅನುಭವಿಸುವಂತೆ ಮಾಡಿದೆ. ಆರಂಭದಲ್ಲಿ ಸೋಂಕಿನ ಬಗ್ಗೆ ಯಾವುದೇ ಭಯವಿರಲಿಲ್ಲ, ಆದ್ರೆ ಇಂದು ಸೋಂಕಿನ ಪ್ರಕರಣಗಳು ದಿನೇ-ದಿನೆ ಹೆಚ್ಚಾಗುತ್ತಿದೆ. ಕೊರೊನಾ ಸೋಂಕಿನಿಂದ ದೇಶ ಮುಕ್ತವಾಗಿಲ್ಲ ಎಂಬುದನ್ನು ಅರಿತು ಜನತೆ ಮುನ್ನೆಚ್ಚರಿಕೆ ಕ್ರಮ ವಹಿಸುವುದು ಒಳಿತು ಎಂದು ಹೇಳಿದರು.

ರಾಜ್ಯದಲ್ಲಿ ಆರೋಗ್ಯ ಇಲಾಖೆ, ಆಶಾ ಕಾರ್ಯಕರ್ತೆಯರು, ಪೊಲೀಸ್ ಇಲಾಖೆ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸ್ವಯಂ ಸೇವಕರು ಒಳಗೊಂಡಂತೆ ವಿವಿಧ ಇಲಾಖೆಗಳು ಕಳೆದ 4 ತಿಂಗಳಿನಿಂದ ಕೊರೊನಾ ನಿಯಂತ್ರಣಕ್ಕಾಗಿ ಶ್ರಮಿಸುತ್ತಿದೆ. ಈ ನಿಟ್ಟಿನಲ್ಲಿ ಜನತೆಗೆ ಎಚ್ಚರಿಕೆ ಮೂಡಿಸಲು, ಮನೆ-ಮನೆ ಭೇಟಿ ನೀಡುವ ಮೂಲಕ ನಿರಂತರವಾಗಿ ಶ್ರಮಿಸಿದ್ದು, ಅವರ ಕಾರ್ಯ ಅಭಿನಂದನಾರ್ಹವಾದದ್ದು ಎಂದರು.

ನಮ್ಮ ಜಿಲ್ಲೆಯು ಮೂರು ಹಂತಗಳ ಲಾಕ್‌ಡೌನ್ ಸಮಯದಲ್ಲೂ ಹಸಿರು ವಲಯವಾಗಿಯೇ ಗುರುತಿಸಿಕೊಂಡಿತ್ತು. ಆದ್ರೆ ತಮಿಳುನಾಡು, ಮಹಾರಾಷ್ಟ್ರ ಸೇರಿದಂತೆ ಹೊರ ರಾಜ್ಯಗಳಿಂದ ಬರುವವರ ಸಂಖ್ಯೆ ಅಧಿಕವಾದ ಮೇಲೆ ಜಿಲ್ಲೆಯಲ್ಲಿ ಸೋಂಕು ಪ್ರಕರಣಗಳು ಕಂಡು ಬಂದಿವೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಾಗಲಿದ್ದು, ಸೋಂಕು ನಿಯಂತ್ರಣಕ್ಕೆ ಜನತೆಯ ಸಹಕಾರ ಅಗತ್ಯ ಎಂದು ತಿಳಿಸಿದರು.

ಚಿಕ್ಕಮಗಳೂರು: ಮಹಾಮಾರಿ ಕೊರೊನಾ ಸೋಂಕಿನ ಕುರಿತು ಜನತೆಗೆ ನಿರಂತರವಾಗಿ ಜಾಗೃತಿ ಮೂಡಿಸುತ್ತಿರುವ, ಆರೊಗ್ಯ ಇಲಾಖೆ, ಪೊಲೀಸ್ ಇಲಾಖೆ, ಮತ್ತು ಆಶಾ ಕಾರ್ಯಕರ್ತೆಯರು ಸೇರಿದಂತೆ ಸ್ವಯಂ ಸೇವಕರ ಕಾರ್ಯ ಶ್ಲಾಘನೀಯವಾದದ್ದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ ರವಿ ತಿಳಿಸಿದರು.

ಜಿಲ್ಲೆಯ ಕಡೂರು ತಾಲೂಕಿನ ಪಿಳ್ಳೇನಹಳ್ಳಿ ಗ್ರಾಮ ಪಂಚಾಯತ್ ನಲ್ಲಿ ಸ್ಥಳೀಯ ಆಡಳಿತದ ವತಿಯಿಂದ ಅಂಗನವಾಡಿ, ಆಶಾ, ಆರೋಗ್ಯ ಕಾರ್ಯಕರ್ತೆಯರಿಗಾಗಿ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಕೊರೊನಾ ಸೋಂಕು ಕೂಲಿ ಕಾರ್ಮಿಕರಿಂದ ಹಿಡಿದು ದೊಡ್ಡ ಉದ್ದಿಮೆದಾರರವರೆಗೂ ಆರ್ಥಿಕವಾಗಿ ಸಂಕಷ್ಟ ಅನುಭವಿಸುವಂತೆ ಮಾಡಿದೆ. ಆರಂಭದಲ್ಲಿ ಸೋಂಕಿನ ಬಗ್ಗೆ ಯಾವುದೇ ಭಯವಿರಲಿಲ್ಲ, ಆದ್ರೆ ಇಂದು ಸೋಂಕಿನ ಪ್ರಕರಣಗಳು ದಿನೇ-ದಿನೆ ಹೆಚ್ಚಾಗುತ್ತಿದೆ. ಕೊರೊನಾ ಸೋಂಕಿನಿಂದ ದೇಶ ಮುಕ್ತವಾಗಿಲ್ಲ ಎಂಬುದನ್ನು ಅರಿತು ಜನತೆ ಮುನ್ನೆಚ್ಚರಿಕೆ ಕ್ರಮ ವಹಿಸುವುದು ಒಳಿತು ಎಂದು ಹೇಳಿದರು.

ರಾಜ್ಯದಲ್ಲಿ ಆರೋಗ್ಯ ಇಲಾಖೆ, ಆಶಾ ಕಾರ್ಯಕರ್ತೆಯರು, ಪೊಲೀಸ್ ಇಲಾಖೆ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸ್ವಯಂ ಸೇವಕರು ಒಳಗೊಂಡಂತೆ ವಿವಿಧ ಇಲಾಖೆಗಳು ಕಳೆದ 4 ತಿಂಗಳಿನಿಂದ ಕೊರೊನಾ ನಿಯಂತ್ರಣಕ್ಕಾಗಿ ಶ್ರಮಿಸುತ್ತಿದೆ. ಈ ನಿಟ್ಟಿನಲ್ಲಿ ಜನತೆಗೆ ಎಚ್ಚರಿಕೆ ಮೂಡಿಸಲು, ಮನೆ-ಮನೆ ಭೇಟಿ ನೀಡುವ ಮೂಲಕ ನಿರಂತರವಾಗಿ ಶ್ರಮಿಸಿದ್ದು, ಅವರ ಕಾರ್ಯ ಅಭಿನಂದನಾರ್ಹವಾದದ್ದು ಎಂದರು.

ನಮ್ಮ ಜಿಲ್ಲೆಯು ಮೂರು ಹಂತಗಳ ಲಾಕ್‌ಡೌನ್ ಸಮಯದಲ್ಲೂ ಹಸಿರು ವಲಯವಾಗಿಯೇ ಗುರುತಿಸಿಕೊಂಡಿತ್ತು. ಆದ್ರೆ ತಮಿಳುನಾಡು, ಮಹಾರಾಷ್ಟ್ರ ಸೇರಿದಂತೆ ಹೊರ ರಾಜ್ಯಗಳಿಂದ ಬರುವವರ ಸಂಖ್ಯೆ ಅಧಿಕವಾದ ಮೇಲೆ ಜಿಲ್ಲೆಯಲ್ಲಿ ಸೋಂಕು ಪ್ರಕರಣಗಳು ಕಂಡು ಬಂದಿವೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಾಗಲಿದ್ದು, ಸೋಂಕು ನಿಯಂತ್ರಣಕ್ಕೆ ಜನತೆಯ ಸಹಕಾರ ಅಗತ್ಯ ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.