ETV Bharat / state

ಮನೆಯ ಆವರಣದಲ್ಲಿ ಅಕ್ರಮ ಮರಳು ಸಂಗ್ರಹ, ಇಬ್ಬರ ಬಂಧನ - ಅಕ್ರಮ ಮರಳು ಸಂಗ್ರಹ ಸುದ್ದಿ

ಮೂಡಿಗೆರೆ ತಾಲೂಕಿನ ತಲಗೂರು ಗ್ರಾಮದಲ್ಲಿ ಮನೆಯ ಆವರಣದಲ್ಲಿ ಅಕ್ರಮ ಮರಳು ಸಂಗ್ರಹ ಮಾಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಮನೆಯ ಆವರಣದಲ್ಲಿ ಅಕ್ರಮ ಮರಳು ಸಂಗ್ರಹ
author img

By

Published : Sep 22, 2019, 7:31 PM IST

ಚಿಕ್ಕಮಗಳೂರು : ಅಕ್ರಮವಾಗಿ ಮನೆಯ ಆವರಣದಲ್ಲಿ ಮರಳು ಸಂಗ್ರಹಿಸಿಟ್ಟುಕೊಂಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಜಿಲ್ಲೆಯ ಮೂಡಿಗೆರೆ ತಾಲೂಕಿನ ತಲಗೂರು ಗ್ರಾಮದಲ್ಲಿ ನಾಸಿರ್ ಎಂಬ ವ್ಯಕ್ತಿ, ಮನೆಯ ಆವರಣದಲ್ಲಿ ಅಕ್ರಮವಾಗಿ 2 ಲಾರಿಯಷ್ಟು ಮರಳು ಶೇಖರಣೆ ಮಾಡಿದ್ದ. ಸಾರಗೋಡು ಹಳ್ಳದಿಂದ ಅಕ್ರಮವಾಗಿ ಈ ಮರಳನ್ನು ತೆಗೆಯಲಾಗಿತ್ತು. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ಮರಳನ್ನು ವಶಕ್ಕೆ ಪಡೆದಿದ್ದಾರೆ. ರಿಯಾಜ್ ಹಾಗೂ ನಾಸಿರ್ ಎಂಬ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಲೆಮರೆಸಿಕೊಂಡಿರುವ ಇನ್ನೋರ್ವ ಆರೋಪಿಗಾಗಿ ಬಲೆ ಬೀಸಿದ್ದಾರೆ. ಬಾಳೂರು ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರೆಸಿದ್ದಾರೆ.

ಚಿಕ್ಕಮಗಳೂರು : ಅಕ್ರಮವಾಗಿ ಮನೆಯ ಆವರಣದಲ್ಲಿ ಮರಳು ಸಂಗ್ರಹಿಸಿಟ್ಟುಕೊಂಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಜಿಲ್ಲೆಯ ಮೂಡಿಗೆರೆ ತಾಲೂಕಿನ ತಲಗೂರು ಗ್ರಾಮದಲ್ಲಿ ನಾಸಿರ್ ಎಂಬ ವ್ಯಕ್ತಿ, ಮನೆಯ ಆವರಣದಲ್ಲಿ ಅಕ್ರಮವಾಗಿ 2 ಲಾರಿಯಷ್ಟು ಮರಳು ಶೇಖರಣೆ ಮಾಡಿದ್ದ. ಸಾರಗೋಡು ಹಳ್ಳದಿಂದ ಅಕ್ರಮವಾಗಿ ಈ ಮರಳನ್ನು ತೆಗೆಯಲಾಗಿತ್ತು. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ಮರಳನ್ನು ವಶಕ್ಕೆ ಪಡೆದಿದ್ದಾರೆ. ರಿಯಾಜ್ ಹಾಗೂ ನಾಸಿರ್ ಎಂಬ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಲೆಮರೆಸಿಕೊಂಡಿರುವ ಇನ್ನೋರ್ವ ಆರೋಪಿಗಾಗಿ ಬಲೆ ಬೀಸಿದ್ದಾರೆ. ಬಾಳೂರು ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರೆಸಿದ್ದಾರೆ.

Intro:Kn_Ckm_04_Sand ride_av_7202347Body:ಚಿಕ್ಕಮಗಳೂರು :-

ಅಕ್ರಮವಾಗಿ ಮನೆಯ ಆವರದಲ್ಲಿ ಮರಳು ದಾಸ್ತಾನು ಸಂಗ್ರಹಿಸಿಟ್ಟುಕೊಂಡಿದ್ದ ಆರೋಪಿಗಳ ಮೇಲೆ ಚಿಕ್ಕಮಗಳೂರಿನಲ್ಲಿ ಪೋಲಿಸರು ದಾಳಿ ಮಾಡಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ತಲಗೂರು ಗ್ರಾಮದಲ್ಲಿ ನಾಸೀರ್ ಎಂಬ ವ್ಯಕ್ತಿಯ ಮನೆಯ ಆವರಣದಲ್ಲಿ ಅಕ್ರಮವಾಗಿ ಎರಡೂ ಲಾರಿಯಷ್ಟು ಮರಳು ಶೇಕರಣೆ ಮಾಡಿದ್ದು ಸಾರಗೋಡು ಹಳ್ಳದಿಂದಾ ಅಕ್ರಮವಾಗಿ ಈ ಮರಳನ್ನು ತೆಗೆಯಲಾಗಿತ್ತು.ಖಚಿತ ಮಾಹಿತಿ ಮೇರೆಗೆ ಪೋಲಿಸರು ಈ ಧಾಳಿ ಮಾಡಿದ್ದು ಎರಡೂ ಲಾರಿಯಷ್ಟು ಮರಳನ್ನು ವಶಕ್ಕೆ ಪಡೆದಿದ್ದಾರೆ. ಇಬ್ಬರೂ ಆರೋಪಿಗಳನ್ನು ಬಂಧಿಸಿದ್ದು ರಿಯಾಜ್ ಹಾಗೂ ನಾಸೀರ್ ಬಂಧಿತ ಆರೋಪಿಗಳಾಗಿದ್ದಾರೆ.ಇನ್ನೋರ್ವ ಆರೋಪಿ ತಲೆ ಮರಿಸಿಕೊಂಡಿದ್ದು ಪೋಲಿಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಈ ಮರಳು ತೆಗೆಯಲು ಯಾವುದೇ ಪರವಾನಿಗೆ, ಯಾರಿಂದಲೂ ಅನುಮತಿಯನ್ನು ಪಡೆಯದೇ ಈ ಮರಳನ್ನು ಶೇಕರಣೆ ಮಾಡಲಾಗಿತ್ತು. ಬಾಳೂರು ಪೋಲಿಸರು ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ....

Conclusion:ರಾಜಕುಮಾರ್....
ಈ ಟಿವಿ ಭಾರತ್....
ಚಿಕ್ಕಮಗಳೂರು....
ETV Bharat Logo

Copyright © 2025 Ushodaya Enterprises Pvt. Ltd., All Rights Reserved.