ETV Bharat / state

ಕನ್ನಡಿಗರ ಮೇಲೆ ಮರಾಠಿಗರ ಆಕ್ರಮಣ.. ಎಂಇಎಸ್​, ಶಿವಸೇನೆ ನಿಷೇಧಕ್ಕೆ ಕರವೇ ಕಾರ್ಯಕರ್ತರಿಂದ ಪ್ರತಿಭಟನೆ

author img

By

Published : Dec 29, 2021, 7:27 PM IST

ಬೆಳಗಾವಿ ಮತ್ತು ಮಹಾರಾಷ್ಟ್ರದಲ್ಲಿನ ಕನ್ನಡಿಗರ ಆತ್ಮಾಭಿಮಾನದ ಸಂಕೇತವಾಗಿರುವ ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟು, ಕರ್ನಾಟಕ ವಾಹನಗಳಿಗೆ ಕಲ್ಲು ತೂರಾಟ ಮಾಡಿ ಸಾರ್ವಜನಿಕ ಆಸ್ತಿ ಪಾಸ್ತಿಗೆ ಅಪಾರ ನಷ್ಟ ಉಂಟು ಮಾಡಿದೆ. ಇಂತಹ ಭಯೋತ್ಪಾದಕರನ್ನು ಹೊಂದಿರುವ ಪಕ್ಷವನ್ನು ಸರ್ಕಾರ ಕೂಡಲೇ ನಿಷೇಧಿಸಬೇಕು ಎಂದು ಆಗ್ರಹಿಸಿದರು..

karnataka rakhana vedike
ಕರವೇ ಕಾರ್ಯಕರ್ತರಿಂದ ಪ್ರತಿಭಟನೆ

ಚಿಕ್ಕಮಗಳೂರು : ರಾಜ್ಯದ ಗಡಿಯಲ್ಲಿ ಕನ್ನಡಿಗರ ಮೇಲೆ ಮರಾಠಿಗರನ್ನು ಎತ್ತಿಕಟ್ಟಿ ದ್ವೇಷದ ವಾತಾವರಣ ಮೂಡಿಸಿ ಅಶಾಂತಿ ಮೂಡಿಸಲು ಯತ್ನಿಸುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್​) ಹಾಗೂ ಶಿವಸೇನೆಯನ್ನು ರಾಜ್ಯದಲ್ಲಿ ನಿಷೇಧಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಚಿಕ್ಕಮಗಳೂರು ಘಟಕದ ಕಾರ್ಯಕರ್ತರು ನಗರದ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ನಗರದ ಹನುಮಂತಪ್ಪ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ನೂರಾರು ಕರವೇ ಕಾರ್ಯಕರ್ತರು ಎಂಇಎಸ್ ಹಾಗೂ ಶಿವಸೇನೆ ವಿರುದ್ದ ಧಿಕ್ಕಾರದ ಘೋಷಣೆ ಕೂಗುತ್ತಾ ತಾಲೂಕು ಕಚೇರಿ ಮುತ್ತಿಗೆ ಹಾಕಲು ಯತ್ನಿಸಿದರು.

ಭಾಷಾವಾರು ಪ್ರಾಂತ್ಯ ವಿಂಗಡಣೆಯ ಬಳಿಕ ಮಹಾರಾಷ್ಟ್ರ ರಾಜಕಾರಣಿಗಳು ಅಲ್ಲಿನ ಸರ್ಕಾರಗಳ ಪ್ರಚೋದನೆಯಿಂದ ಬೆಳಗಾವಿಯಲ್ಲಿ ಪದೇಪದೆ ಅಶಾಂತಿಯ ವಾತಾವರಣ ನಿರ್ಮಾಣ ಮಾಡುತ್ತಿದ್ದಾರೆ.

ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ ಕನ್ನಡಿಗರ ಮೇಲೆ ಮರಾಠಿಗನ್ನು ಎತ್ತಿಕಟ್ಟುವ ಮೂಲಕ ದ್ವೇಷದೊಂದಿಗೆ ಅಶಾಂತಿ ಮೂಡಿಸುವ ಕೆಲಸ ನಡೆಯುತ್ತಿದೆ ಎಂದು ಕಿಡಿಕಾರಿದರು.

ಇದನ್ನೂ ಓದಿ: ಕಾರ್ಯಕಾರಣಿಯಲ್ಲಿ ಅಪಹಾಸ್ಯಕ್ಕೀಡಾದ ಬಿಜೆಪಿ.. ಭಾರತಾಂಬೆಯ ಚಿತ್ರದಲ್ಲಿ ಪಾಕ್​​ ಧ್ವಜ..

ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿ ಅಪಮಾನ ಮಾಡಿರುವುದಲ್ಲದೇ ಸ್ವಾತಂತ್ರ್ಯ ಹೋರಾಟಗಾರ, ವೀರ ಸೇನಾನಿ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಭಗ್ನಗೊಳಿಸಿ ಕೋಮುದ್ವೇಷ ಉಂಟಾಗುವಂತೆ ಮಾಡಿರುವುದು ಖಂಡನೀಯ.

ಇದನ್ನು ವಿರೋಧಿಸಿ ರಾಜ್ಯಾದ್ಯಂತ ನಾರಾಯಣಗೌಡ ಬಣದ ಕರವೇ ಎಂಇಎಸ್ ಹಾಗೂ ಶಿವಸೇನೆ ನಿಷೇಧಕ್ಕೆ ಕರೆ ನೀಡಿದ್ದು, ಅದರಂತೆ ಎಲ್ಲಾ ಜಿಲ್ಲಾ ಕೇಂದ್ರದಲ್ಲಿ ಏಕಕಾಲದಲ್ಲಿ ಪ್ರತಿಭಟಿಸುವ ಮೂಲಕ ಸರ್ಕಾರವನ್ನು ಒತ್ತಾಯಿಸಲಾಯಿತು.

ರಾಜ್ಯ ಸರ್ಕಾರದ ವಿರುದ್ಧ ಮಾನಹಾನಿಕರ ಪ್ರಚೋದನಾತ್ಮಕ ಭಾಷಣಗಳನ್ನು ಮಾಡುವುದು, ಮರಾಠಿಗರನ್ನು ಕನ್ನಡಿಗರ ವಿರುದ್ಧ ಎತ್ತಿ ಕಟ್ಟುವುದು ನಿರಂತರವಾಗಿ ನಡೆಯುತ್ತಿದೆ.

ಇದರ ಪರಿಣಾಮದಿಂದ ಬೆಳಗಾವಿಯಲ್ಲಿನ ಕನ್ನಡಿಗರು, ಮರಾಠಿಗರು ನೆಮ್ಮದಿ, ಶಾಂತಿಯಿಂದ ಬಾಳಲು ಸಾಧ್ಯವಾಗುತ್ತಿಲ್ಲ. ಅವರು ಈಗಾಗಲೇ ಎಂಇಎಸ್ ಹಾಗೂ ಶಿವಸೇನೆಗಳನ್ನು ತಿರಸ್ಕರಿಸಿದ್ದು, ಹತಾಶೆಗೆ ಒಳಗಾದ ಈ ಸಂಘಟನೆಗಳು ಹಿಂಸಾಚಾರಕ್ಕೆ ಮುಂದಾಗಿವೆ ಎಂದು ವಾಗ್ದಾಳಿ ನಡೆಸಿದರು.

ಮಾನವತಾವಾದಿ ಬಸವಣ್ಣನವರ ಭಾಚಿತ್ರಕ್ಕೆ ಮಸಿ ಬಳಿಯುವುದು, ಪ್ರತಿಮೆ ಭಗ್ನಗೊಳಿಸುವುದು, ಇಡೀ ಮಾನವ ಕುಲಕ್ಕೆ ಮಾಡಿದ ಅಪಮಾನವಾಗಿದೆ.

ಬೆಳಗಾವಿ ಮತ್ತು ಮಹಾರಾಷ್ಟ್ರದಲ್ಲಿನ ಕನ್ನಡಿಗರ ಆತ್ಮಾಭಿಮಾನದ ಸಂಕೇತವಾಗಿರುವ ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟು, ಕರ್ನಾಟಕ ವಾಹನಗಳಿಗೆ ಕಲ್ಲು ತೂರಾಟ ಮಾಡಿ ಸಾರ್ವಜನಿಕ ಆಸ್ತಿ ಪಾಸ್ತಿಗೆ ಅಪಾರ ನಷ್ಟ ಉಂಟು ಮಾಡಿದೆ. ಇಂತಹ ಭಯೋತ್ಪಾದಕರನ್ನು ಹೊಂದಿರುವ ಪಕ್ಷವನ್ನು ಸರ್ಕಾರ ಕೂಡಲೇ ನಿಷೇಧಿಸಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ: ಮಂಡ್ಯದಲ್ಲಿ ಒಂದೇ ಶಾಲೆಯ 5 ವಿದ್ಯಾರ್ಥಿಗಳಿಗೆ ಕೊರೊನಾ ದೃಢ

ಚಿಕ್ಕಮಗಳೂರು : ರಾಜ್ಯದ ಗಡಿಯಲ್ಲಿ ಕನ್ನಡಿಗರ ಮೇಲೆ ಮರಾಠಿಗರನ್ನು ಎತ್ತಿಕಟ್ಟಿ ದ್ವೇಷದ ವಾತಾವರಣ ಮೂಡಿಸಿ ಅಶಾಂತಿ ಮೂಡಿಸಲು ಯತ್ನಿಸುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್​) ಹಾಗೂ ಶಿವಸೇನೆಯನ್ನು ರಾಜ್ಯದಲ್ಲಿ ನಿಷೇಧಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಚಿಕ್ಕಮಗಳೂರು ಘಟಕದ ಕಾರ್ಯಕರ್ತರು ನಗರದ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ನಗರದ ಹನುಮಂತಪ್ಪ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ನೂರಾರು ಕರವೇ ಕಾರ್ಯಕರ್ತರು ಎಂಇಎಸ್ ಹಾಗೂ ಶಿವಸೇನೆ ವಿರುದ್ದ ಧಿಕ್ಕಾರದ ಘೋಷಣೆ ಕೂಗುತ್ತಾ ತಾಲೂಕು ಕಚೇರಿ ಮುತ್ತಿಗೆ ಹಾಕಲು ಯತ್ನಿಸಿದರು.

ಭಾಷಾವಾರು ಪ್ರಾಂತ್ಯ ವಿಂಗಡಣೆಯ ಬಳಿಕ ಮಹಾರಾಷ್ಟ್ರ ರಾಜಕಾರಣಿಗಳು ಅಲ್ಲಿನ ಸರ್ಕಾರಗಳ ಪ್ರಚೋದನೆಯಿಂದ ಬೆಳಗಾವಿಯಲ್ಲಿ ಪದೇಪದೆ ಅಶಾಂತಿಯ ವಾತಾವರಣ ನಿರ್ಮಾಣ ಮಾಡುತ್ತಿದ್ದಾರೆ.

ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ ಕನ್ನಡಿಗರ ಮೇಲೆ ಮರಾಠಿಗನ್ನು ಎತ್ತಿಕಟ್ಟುವ ಮೂಲಕ ದ್ವೇಷದೊಂದಿಗೆ ಅಶಾಂತಿ ಮೂಡಿಸುವ ಕೆಲಸ ನಡೆಯುತ್ತಿದೆ ಎಂದು ಕಿಡಿಕಾರಿದರು.

ಇದನ್ನೂ ಓದಿ: ಕಾರ್ಯಕಾರಣಿಯಲ್ಲಿ ಅಪಹಾಸ್ಯಕ್ಕೀಡಾದ ಬಿಜೆಪಿ.. ಭಾರತಾಂಬೆಯ ಚಿತ್ರದಲ್ಲಿ ಪಾಕ್​​ ಧ್ವಜ..

ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿ ಅಪಮಾನ ಮಾಡಿರುವುದಲ್ಲದೇ ಸ್ವಾತಂತ್ರ್ಯ ಹೋರಾಟಗಾರ, ವೀರ ಸೇನಾನಿ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಭಗ್ನಗೊಳಿಸಿ ಕೋಮುದ್ವೇಷ ಉಂಟಾಗುವಂತೆ ಮಾಡಿರುವುದು ಖಂಡನೀಯ.

ಇದನ್ನು ವಿರೋಧಿಸಿ ರಾಜ್ಯಾದ್ಯಂತ ನಾರಾಯಣಗೌಡ ಬಣದ ಕರವೇ ಎಂಇಎಸ್ ಹಾಗೂ ಶಿವಸೇನೆ ನಿಷೇಧಕ್ಕೆ ಕರೆ ನೀಡಿದ್ದು, ಅದರಂತೆ ಎಲ್ಲಾ ಜಿಲ್ಲಾ ಕೇಂದ್ರದಲ್ಲಿ ಏಕಕಾಲದಲ್ಲಿ ಪ್ರತಿಭಟಿಸುವ ಮೂಲಕ ಸರ್ಕಾರವನ್ನು ಒತ್ತಾಯಿಸಲಾಯಿತು.

ರಾಜ್ಯ ಸರ್ಕಾರದ ವಿರುದ್ಧ ಮಾನಹಾನಿಕರ ಪ್ರಚೋದನಾತ್ಮಕ ಭಾಷಣಗಳನ್ನು ಮಾಡುವುದು, ಮರಾಠಿಗರನ್ನು ಕನ್ನಡಿಗರ ವಿರುದ್ಧ ಎತ್ತಿ ಕಟ್ಟುವುದು ನಿರಂತರವಾಗಿ ನಡೆಯುತ್ತಿದೆ.

ಇದರ ಪರಿಣಾಮದಿಂದ ಬೆಳಗಾವಿಯಲ್ಲಿನ ಕನ್ನಡಿಗರು, ಮರಾಠಿಗರು ನೆಮ್ಮದಿ, ಶಾಂತಿಯಿಂದ ಬಾಳಲು ಸಾಧ್ಯವಾಗುತ್ತಿಲ್ಲ. ಅವರು ಈಗಾಗಲೇ ಎಂಇಎಸ್ ಹಾಗೂ ಶಿವಸೇನೆಗಳನ್ನು ತಿರಸ್ಕರಿಸಿದ್ದು, ಹತಾಶೆಗೆ ಒಳಗಾದ ಈ ಸಂಘಟನೆಗಳು ಹಿಂಸಾಚಾರಕ್ಕೆ ಮುಂದಾಗಿವೆ ಎಂದು ವಾಗ್ದಾಳಿ ನಡೆಸಿದರು.

ಮಾನವತಾವಾದಿ ಬಸವಣ್ಣನವರ ಭಾಚಿತ್ರಕ್ಕೆ ಮಸಿ ಬಳಿಯುವುದು, ಪ್ರತಿಮೆ ಭಗ್ನಗೊಳಿಸುವುದು, ಇಡೀ ಮಾನವ ಕುಲಕ್ಕೆ ಮಾಡಿದ ಅಪಮಾನವಾಗಿದೆ.

ಬೆಳಗಾವಿ ಮತ್ತು ಮಹಾರಾಷ್ಟ್ರದಲ್ಲಿನ ಕನ್ನಡಿಗರ ಆತ್ಮಾಭಿಮಾನದ ಸಂಕೇತವಾಗಿರುವ ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟು, ಕರ್ನಾಟಕ ವಾಹನಗಳಿಗೆ ಕಲ್ಲು ತೂರಾಟ ಮಾಡಿ ಸಾರ್ವಜನಿಕ ಆಸ್ತಿ ಪಾಸ್ತಿಗೆ ಅಪಾರ ನಷ್ಟ ಉಂಟು ಮಾಡಿದೆ. ಇಂತಹ ಭಯೋತ್ಪಾದಕರನ್ನು ಹೊಂದಿರುವ ಪಕ್ಷವನ್ನು ಸರ್ಕಾರ ಕೂಡಲೇ ನಿಷೇಧಿಸಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ: ಮಂಡ್ಯದಲ್ಲಿ ಒಂದೇ ಶಾಲೆಯ 5 ವಿದ್ಯಾರ್ಥಿಗಳಿಗೆ ಕೊರೊನಾ ದೃಢ

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.