ಚಿಕ್ಕಮಗಳೂರು: ಸರ್ಕಾರ ಹಸಿರು ವಲಯ ಎಂದು ಲಾಕ್ಡೌನ್ ಸಡಿಲಿಕೆ ಮಾಡುತ್ತಿದ್ದಂತೆ ಅನಗತ್ಯ ವಾಹನ ಸಂಚಾರ ಹೆಚ್ಚಾಗಿದ್ದು, ಸವಾರರಿಗೆ ದಂಡ ವಿಧಿಸಿಸಲು ಸಂಚಾರಿ ಪೊಲೀಸರು ಮುಂದಾಗಿದ್ದಾರೆ.
ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆ ಉಂಟಾಗುತ್ತಿದೆ. ಇದರಿಂದ ಅನಗತ್ಯ ತಿರುಗಾಡುವ ಕಾರ್, ಬೈಕ್ ಸವಾರರ ವಾಹನಗಳನ್ನು ವಶಕ್ಕೆ ಪಡೆಯಲಾಗುತ್ತಿದೆ.
ನಗರದಲ್ಲಿ 3 ಗಂಟೆಯಲ್ಲೇ ನೂರಾರು ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಮಾಸ್ಕ್ ಧರಿಸದ, ಸಾಮಾಜಿಕ ಅಂತರ ಕಾಯ್ದುಕೊಳ್ಳದ ಜನರಿಗೆ ಪೊಲೀಸರು ಶಾಕ್ ನೀಡಿದ್ದಾರೆ.