ETV Bharat / state

ಕೈಯಲ್ಲಿ ಮಚ್ಚು, ರಾಜಾರೋಷವಾಗಿ ಓಡಾಟ... ಕೊಪ್ಪದಲ್ಲಿ ಆತಂಕ ಸೃಷ್ಟಿಸಿದ ಅಪರಿಚಿತ!

ಅಪರಿಚಿತ ವ್ಯಕ್ತಿವೋರ್ವ ಮಚ್ಚು ಹಿಡಿದು ರಸ್ತೆಯಲ್ಲಿ ಓಡಾಡುವ ಮೂಲಕ ಕೊಪ್ಪ ತಾಲೂಕಿನಲ್ಲಿ ಆತಂಕ ಸೃಷ್ಟಿಸಿದ್ದಾನೆ. ಸದ್ಯ ಈತನಿಗಾಗಿ ಪೊಲೀಸರು ತಲಾಶ್​ ನಡೆಸಿದ್ದಾರೆ.

author img

By

Published : Jul 23, 2019, 1:00 PM IST

Updated : Jul 23, 2019, 2:59 PM IST

ಮಚ್ಚು ಹಿಡಿದು ಆತಂಕ ಸೃಷ್ಟಿಸಿದ ಅಪರಿಚಿತ

ಚಿಕ್ಕಮಗಳೂರು: ಜಿಲ್ಲೆಯ ಕೊಪ್ಪದ ತಾಲೂಕಿನ ರಸ್ತೆಯಲ್ಲಿಯೇ ಕೈಯಲ್ಲಿ ಮಚ್ಚು ಹಿಡಿದು ಅಪರಿಚಿತನೋರ್ವ ಆತಂಕ ಸೃಷ್ಟಿಸಿರುವ ಘಟನೆ ಬೆಳಕಿಗೆ ಬಂದಿದೆ.

ಈ ವ್ಯಕ್ತಿ ಕೆಲ ಹೊತ್ತು ಕೈಯಲ್ಲಿ ಮಚ್ಚು ಹಿಡಿದು ಕೊಪ್ಪ ಬಸ್ ನಿಲ್ದಾಣ ಹಾಗೂ ಮುಖ್ಯ ರಸ್ತೆಯಲ್ಲಿ ಓಡಾಡಿರುವ ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮಚ್ಚು ಹಿಡಿದು ಆತಂಕ ಸೃಷ್ಟಿಸಿದ ಅಪರಿಚಿತ

ಮಚ್ಚು ಹಿಡಿದು ಓಡಾಡುತ್ತಿರುವುದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕಾಗಮಿಸಿದ ಪೊಲೀಸರು ವ್ಯಕ್ತಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ. ಆದರೂ ಆತ ಪತ್ತೆಯಾಗಿಲ್ಲ. ನಿನ್ನೆ ಸಂಜೆ ಈ ಘಟನೆ ನಡೆದಿದ್ದು, ವ್ಯಕ್ತಿಯ ಫೋಟೊ ಆಧರಿಸಿ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ. ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಿಕ್ಕಮಗಳೂರು: ಜಿಲ್ಲೆಯ ಕೊಪ್ಪದ ತಾಲೂಕಿನ ರಸ್ತೆಯಲ್ಲಿಯೇ ಕೈಯಲ್ಲಿ ಮಚ್ಚು ಹಿಡಿದು ಅಪರಿಚಿತನೋರ್ವ ಆತಂಕ ಸೃಷ್ಟಿಸಿರುವ ಘಟನೆ ಬೆಳಕಿಗೆ ಬಂದಿದೆ.

ಈ ವ್ಯಕ್ತಿ ಕೆಲ ಹೊತ್ತು ಕೈಯಲ್ಲಿ ಮಚ್ಚು ಹಿಡಿದು ಕೊಪ್ಪ ಬಸ್ ನಿಲ್ದಾಣ ಹಾಗೂ ಮುಖ್ಯ ರಸ್ತೆಯಲ್ಲಿ ಓಡಾಡಿರುವ ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮಚ್ಚು ಹಿಡಿದು ಆತಂಕ ಸೃಷ್ಟಿಸಿದ ಅಪರಿಚಿತ

ಮಚ್ಚು ಹಿಡಿದು ಓಡಾಡುತ್ತಿರುವುದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕಾಗಮಿಸಿದ ಪೊಲೀಸರು ವ್ಯಕ್ತಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ. ಆದರೂ ಆತ ಪತ್ತೆಯಾಗಿಲ್ಲ. ನಿನ್ನೆ ಸಂಜೆ ಈ ಘಟನೆ ನಡೆದಿದ್ದು, ವ್ಯಕ್ತಿಯ ಫೋಟೊ ಆಧರಿಸಿ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ. ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Intro:Kn_Ckm_03_Fear for people_av_7202347Body:

ಚಿಕ್ಕಮಗಳೂರು :-

ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡು ರಸ್ತೆಯಲ್ಲಿಯೇ ಕೈಯಲ್ಲಿ ಲಾಂಗ್ ಹಿಡಿದು ಅಪರಿಚಿತ ವ್ಯಕ್ತಿ ರಸ್ತೆಯಲ್ಲಿ ಓಡಾಡಿದ ಘಟನೆ ಬೆಳಕಿಗೆ ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ಈ ಘಟನೆ ನಡೆದಿದ್ದು ಅಪರಿಚಿತ ವ್ಯಕ್ತಿ ಕೆಲ ಹೊತ್ತು ಕೈಯಲ್ಲಿ ಮಚ್ಚು ಹಿಡಿದು ಜನರಲ್ಲಿ ಆತಂಕ ಹುಟ್ಟಿಸಿದ್ದು ಕೊಪ್ಪ ಬಸ್ ನಿಲ್ದಾಣ ಹಾಗೂ ಮುಖ್ಯ ರಸ್ತೆಯಲ್ಲಿ ಓಡಾಡಿದ್ದಾನೆ. ಅಪರಿಚಿತ ವ್ಯಕ್ತಿ ಲಾಂಗ್ ಹಿಡಿದು ಓಡಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವ್ಯಕ್ತಿ ಮಚ್ಚು ಹಿಡಿದು ಓಡಾಡುತ್ತಿರುವುದನ್ನು ಕಂಡು ಸ್ಥಳೀಯರು ಪೋಲಿಸರಿಗೆ ಮಾಹಿತಿ ನೀಡಿದ್ದು ಕೂಡಲೇ ಸ್ಥಳಕ್ಕೇ ಬಂದ ಪೋಲಿಸರು ಆ ವ್ಯಕ್ತಿಯ ಶೋಧ ಕಾರ್ಯ ನಡೆಸಿದ್ದಾರೆ. ಕೊಪ್ಪ ಪಟ್ಟಣದಲ್ಲಿ ಹುಡುಕಾಟ ನಡೆಸಿದರೂ ಆ ಅಪರಿಚಿತ ವ್ಯಕ್ತಿ ಪತ್ತೆಯಾಗಿಲ್ಲ. ನಿನ್ನೆ ಸಂಜೆ ಈ ಘಟನೆ ನಡೆದಿದ್ದು ಆ ಅಪರಿಚಿತ ವ್ಯಕ್ತಿಯ ಪೋಟೋ ಆಧರಿಸಿ ಪೋಲಿಸರು ಶೋಧ ಕಾರ್ಯ ಮುಂದುವರೆಸಿದ್ದು ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.....

Conclusion:ರಾಜಕುಮಾರ್.....
ಈ ಟಿವಿ ಭಾರತ್.....
ಚಿಕ್ಕಮಗಳೂರು......
Last Updated : Jul 23, 2019, 2:59 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.