ಚಿಕ್ಕಮಗಳೂರು: ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಸಂಖ್ಯೆಗಿಂತ ಬಿಪಿಎಲ್ ಕಾರ್ಡ್ ಪಡೆದ ಕುಟುಂಬಗಳ ಸಂಖ್ಯೆ ಹೆಚ್ಚಾಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.
ಹೆಚ್ಚು ಬಿಪಿಎಲ್ ಕಾರ್ಡ್ದಾರರು ಇರುವುದು ಎಲ್ಲರಿಗೂ ತಿಳಿದಿರುವ ಸತ್ಯ. ನಾನು ಮಂತ್ರಿಯಾಗಿದ್ದಾಗ ಸುಮಾರು 35 ಲಕ್ಷ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಿದ್ದೆ. ನಂತರ ಬಂದ ಸರ್ಕಾರ ಮತ್ತೆ ಕಾರ್ಡ್ ವಿತರಣೆ ಮಾಡಿತು. ಕೋವಿಡ್-19 ಸಂದರ್ಭದಲ್ಲಿ ಈ ಬಗ್ಗೆ ಮಾತನಾಡಲು ಹೋಗಲ್ಲ. ಆದರೆ ಯಾರು ಹೆಚ್ಚಾಗಿ ಕಾರ್ಡ್ ಇಟ್ಟುಕೊಂಡಿದ್ದಾರೆ ಎಲ್ಲವನ್ನೂ ಪತ್ತೆ ಮಾಡುತ್ತೇವೆ ಎಂದರು.
ಬಡ ಹಾಗೂ ನಿರ್ಗತಿಕರಿಗೆ ಸೇರಿದಂತೆ ಅವಶ್ಯಕತೆ ಇರುವ ಎಲ್ಲರಿಗೂ ಸರ್ಕಾರದಿಂದ ಪಡಿತರ ನೀಡಲಾಗುತ್ತಿದೆ ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.