ETV Bharat / state

ಚಿಕ್ಕಮಗಳೂರಿನಲ್ಲಿ ಆಹಾರ ಪದಾರ್ಥಗಳ ಕಿಟ್​​​ ವಿತರಿಸಿದ ಸಂಸದೆ ಶೋಭಾ ಕರಂದ್ಲಾಜೆ

author img

By

Published : Apr 19, 2020, 5:34 PM IST

ಸಂಸದೆ ಶೋಭಾ ಕರಂದ್ಲಾಜೆ ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಹಾರ ಪದಾರ್ಥಗಳ ಕಿಟ್​ಗಳನ್ನು ವಿತರಿಸಿದ್ದಾರೆ.

Shobha Karandlaje Distribute food items
ಚಿಕ್ಕಮಗಳೂರಿನಲ್ಲಿ ಆಹಾರ ಪದಾರ್ಥಗಳ ಕಿಟ್​ ವಿತರಿಸಿದ ಸಂಸದೆ ಶೋಭ ಕರಂದ್ಲಾಜೆ

ಚಿಕ್ಕಮಗಳೂರು: ಲಾಕ್​ಡೌನ್​ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಕೆಲವು ಸಂಘ ಸಂಸ್ಥೆಗಳು, ರಾಜಕಾರಣಿಗಳು ಹಾಗೂ ದಾನಿಗಳು ಆಹಾರ ಪದಾರ್ಥಗಳ ಕಿಟ್​ಗಳನ್ನು ವಿತರಿಸುತ್ತಿದ್ದಾರೆ. ಅಂತೆಯೇ ಇಂದು ಸಂಸದೆ ಶೋಭಾ ಕರಂದ್ಲಾಜೆ ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಹಾರ ಪದಾರ್ಥಗಳ ಕಿಟ್​ಗಳನ್ನು ವಿತರಿಸಿದ್ದಾರೆ.

ಅಕ್ಕಿ, ಬೇಳೆ, ಸೋಪು, ಅಡುಗೆ ಎಣ್ಣೆ ಸೇರಿದಂತೆ ವಿವಿಧ ದಿನಸಿ ಪದಾರ್ಥಗಳನ್ನು ಒಳಗೊಂಡ ಈ ಕಿಟ್​ಗಳನ್ನು ಪ್ರಮುಖವಾಗಿ ಚಿಕ್ಕಮಗಳೂರು ನಗರದ ಗವನಹಳ್ಳಿ, ಆಲ್ಡೂರು, ಹಿರೇಮಗಳೂರು, ಸೇರಿದಂತೆ ವಿವಿಧ ಭಾಗದ ಬಡವರ ಮನೆಯ ಬಾಗಿಲಿಗೆ ತೆರಳಿ ವಿತರಿಸಿದ್ದಾರೆ.

ಅಲ್ಲದೇ ಕಿಟ್ ವಿತರಿಸಿ, ನಿಮ್ಮ ಜೊತೆ ನಾವಿದ್ದೇವೆ. ಯಾವುದಕ್ಕೂ ಭಯ ಪಡಬೇಡಿ ಎಂದು ಅವರಿಗೆ ಧೈರ್ಯ ತುಂಬಿದ್ದಾರೆ.

ಚಿಕ್ಕಮಗಳೂರು: ಲಾಕ್​ಡೌನ್​ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಕೆಲವು ಸಂಘ ಸಂಸ್ಥೆಗಳು, ರಾಜಕಾರಣಿಗಳು ಹಾಗೂ ದಾನಿಗಳು ಆಹಾರ ಪದಾರ್ಥಗಳ ಕಿಟ್​ಗಳನ್ನು ವಿತರಿಸುತ್ತಿದ್ದಾರೆ. ಅಂತೆಯೇ ಇಂದು ಸಂಸದೆ ಶೋಭಾ ಕರಂದ್ಲಾಜೆ ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಹಾರ ಪದಾರ್ಥಗಳ ಕಿಟ್​ಗಳನ್ನು ವಿತರಿಸಿದ್ದಾರೆ.

ಅಕ್ಕಿ, ಬೇಳೆ, ಸೋಪು, ಅಡುಗೆ ಎಣ್ಣೆ ಸೇರಿದಂತೆ ವಿವಿಧ ದಿನಸಿ ಪದಾರ್ಥಗಳನ್ನು ಒಳಗೊಂಡ ಈ ಕಿಟ್​ಗಳನ್ನು ಪ್ರಮುಖವಾಗಿ ಚಿಕ್ಕಮಗಳೂರು ನಗರದ ಗವನಹಳ್ಳಿ, ಆಲ್ಡೂರು, ಹಿರೇಮಗಳೂರು, ಸೇರಿದಂತೆ ವಿವಿಧ ಭಾಗದ ಬಡವರ ಮನೆಯ ಬಾಗಿಲಿಗೆ ತೆರಳಿ ವಿತರಿಸಿದ್ದಾರೆ.

ಅಲ್ಲದೇ ಕಿಟ್ ವಿತರಿಸಿ, ನಿಮ್ಮ ಜೊತೆ ನಾವಿದ್ದೇವೆ. ಯಾವುದಕ್ಕೂ ಭಯ ಪಡಬೇಡಿ ಎಂದು ಅವರಿಗೆ ಧೈರ್ಯ ತುಂಬಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.