ETV Bharat / state

ರಾಹುಲ್ ಗಾಂಧಿಗೆ ಚಿಕಿತ್ಸೆಯ ಅಗತ್ಯವಿದೆ: ಸಂಸದೆ ಶೋಭಾ ಕರಂದ್ಲಾಜೆ ವ್ಯಂಗ್ಯ

author img

By

Published : Mar 2, 2021, 2:13 PM IST

ಬ್ರಿಟಿಷರನ್ನ ಓಡಿಸಿದವರಿಗೆ ಮೋದಿ ಓಡಿಸೋದು ಕಷ್ಟವಲ್ಲ ಎಂಬ ರಾಹುಲ್ ಹೇಳಿಕೆ ವಿಚಾರಕ್ಕೆ ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯಿಸಿದ ಸಂಸದೆ ಶೋಭಾ ಕರಂದ್ಲಾಜೆ, ರಾಹುಲ್ ಗಾಂಧಿಗೆ ಚಿಕಿತ್ಸೆಯ ಅಗತ್ಯವಿದೆ. ರಾಹುಲ್ ಗಾಂಧಿ ಕಾಲಿಟ್ಟಲ್ಲೆಲ್ಲ ಕಾಂಗ್ರೆಸ್ ನೆಲ ಕಚ್ಚುತ್ತಿದೆ ಎಂದು ವ್ಯಂಗ್ಯವಾಡಿದರು.

MP Shobha Karandlaje reaction
ಸಂಸದೆ ಶೋಭಾ ಕರಂದ್ಲಾಜೆ

ಚಿಕ್ಕಮಗಳೂರು: ರಾಹುಲ್ ಗಾಂಧಿಗೆ ಚಿಕಿತ್ಸೆಯ ಅಗತ್ಯವಿದೆ. ಅವರು ಕಾಲಿಟ್ಟಲ್ಲೆಲ್ಲ ಕಾಂಗ್ರೆಸ್ ನೆಲ ಕಚ್ಚುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ವ್ಯಂಗ್ಯವಾಡಿದರು.

ಕಾಂಗ್ರೆಸ್ ವಿರುದ್ಧ ಸಂಸದೆ ಶೋಭಾ ಕರಂದ್ಲಾಜೆ ವಾಗ್ದಾಳಿ ​

ಬ್ರಿಟಿಷರನ್ನ ಓಡಿಸಿದವರಿಗೆ ಮೋದಿ ಓಡಿಸೋದು ಕಷ್ಟವಲ್ಲ ಎಂಬ ರಾಹುಲ್ ಹೇಳಿಕೆ ವಿಚಾರಕ್ಕೆ ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯಿಸಿದ ಸಂಸದೆ ಶೋಭಾ ಕರಂದ್ಲಾಜೆ, ರಾಹುಲ್ ಗಾಂಧಿಗೆ ಚಿಕಿತ್ಸೆಯ ಅಗತ್ಯವಿದೆ. ರಾಹುಲ್ ಗಾಂಧಿ ಕಾಲಿಟ್ಟಲ್ಲೆಲ್ಲ ಕಾಂಗ್ರೆಸ್ ನೆಲ ಕಚ್ಚುತ್ತಿದೆ. 4 ರಾಜ್ಯಗಳ ಚುನಾವಣೆಯಲ್ಲೂ ಕಾಂಗ್ರೆಸ್ಸಿಗೆ ಸೋಲು ಕಟ್ಟಿಟ್ಟ ಬುತ್ತಿ. ಪದೆ-ಪದೇ ಸೋಲುವುದರಿಂದ ಕಾಂಗ್ರೆಸ್ಸಿಗರಿಗೆ ಬುದ್ಧಿ ಭ್ರಮಣೆಯಾಗಿದೆ ಎಂದರು.

ನೀವು ಲೋಕಸಭೆಯಲ್ಲಿ ಅಧಿಕೃತ ವಿರೋಧ ಪಕ್ಷವಾಗಿಯೂ ಉಳಿಯುವುದಿಲ್ಲ. ವಂಶಾಡಳಿತ, ದುರಾಡಳಿತ, ಭ್ರಷ್ಟಚಾರದಿಂದ ಜನರಿಂದಲೇ ನಾಶವಾಗಿದ್ದೀರಾ. ಮತ್ತೆ ಸರ್ವನಾಶವಾಗ್ತೀರಾ, ಯಾವ ರಾಜ್ಯದಲ್ಲೂ ಕಾಂಗ್ರೆಸ್ ಅಸ್ತಿತ್ವ ಉಳಿಯಲ್ಲ. ಚುನಾವಣೆ ಸಂದರ್ಭದಲ್ಲಿ ರಾಹುಲ್ ಗಾಂಧಿ ನಾನಾ ರೀತಿಯ ನಾಟಕವಾಡುತ್ತಾರೆ. ಪಾರ್ಲಿಮೆಂಟ್ ಚುನಾವಣೆ ನಡೆದಾಗ ವಿದೇಶಕ್ಕೆ ಓಡಿ ಹೋಗುತ್ತಾರೆ. ಈಗ ಚುನಾವಣೆಗಾಗಿ ನೀರಿಗಿಳಿಯೋದು, ಹಾಡೋದು, ಡ್ಯಾನ್ಸ್ ಮಾಡುತ್ತಿದ್ದಾರೆ ಎಂದರು.

ಕಾಂಗ್ರೆಸ್ ನಾವಿಕನಿಲ್ಲದ ದೋಣಿ:

ಕಾಂಗ್ರೆಸ್ ನಾವಿಕನಿಲ್ಲದ ದೋಣಿಯಂತಾಗಿದೆ. ಕಾಂಗ್ರೆಸ್​​​ನಲ್ಲಿ ದೆಹಲಿಯಲ್ಲೂ ಲೀಡರ್ ಇಲ್ಲ, ರಾಜ್ಯದಲ್ಲೂ ಲೀಡರ್ ಇಲ್ಲ. ಇರೋ ಚಿಕ್ಕ ಪುಟ್ಟ ನಾಯಕರು ಕುರ್ಚಿಗಾಗಿ ಹೋರಾಟ ಮಾಡುತ್ತಿದ್ದಾರೆ. ಕಾಂಗ್ರೆಸ್ ನಲ್ಲಿ ಕುರ್ಚಿಗಾಗಿ ಕಾದಾಟ ನಡೆಯುತ್ತಿದೆ. ದೊಡ್ಡವರು, ಪಟ್ಟ, ಮುಂದಾಳತ್ವಕ್ಕಾಗಿ ಪರಸ್ಪರ ಕಾದಾಡುತ್ತಿದ್ದಾರೆ. ಕಾಂಗ್ರೆಸ್ ಕಾದಾಟಕ್ಕೆ ಮೈಸೂರು ಪಾಲಿಕೆ ಚುನಾವಣೆ ಉದಾಹರಣೆ. ಈಗಾಗಲೇ ಕಾಂಗ್ರೆಸ್ಸಿಂದ ಜನ ಬೇಸತ್ತಿದ್ದಾರೆ. ಜನ ಸಿದ್ದರಾಮಯ್ಯ ಆಡಳಿತವನ್ನೂ ತಿರಸ್ಕರಿಸಿ ಬಿಜೆಪಿಗೆ ಬೆಂಬಲಿಸಿದ್ದಾರೆ. ಮುಂದಿನ ದಿನಗಳಲ್ಲೂ ದೇಶ, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ಸಿಗರು ಕಿತ್ತಾಡುತ್ತಲೇ ಇರಲಿ ಎಂದು ಶೋಭಾ ಕರಂದ್ಲಾಜೆ ಟೀಕಿಸಿದರು.

ಓದಿ: ಬೆಲೆ ಏರಿಕೆ ಎಫೆಕ್ಟ್: ನವ ದಂಪತಿಗೆ ಪೆಟ್ರೋಲ್ ನೀಡಿ ಶುಭ ಕೋರಿದ ಪಾಲಿಕೆ ಸದಸ್ಯೆ

ಚಿಕ್ಕಮಗಳೂರು: ರಾಹುಲ್ ಗಾಂಧಿಗೆ ಚಿಕಿತ್ಸೆಯ ಅಗತ್ಯವಿದೆ. ಅವರು ಕಾಲಿಟ್ಟಲ್ಲೆಲ್ಲ ಕಾಂಗ್ರೆಸ್ ನೆಲ ಕಚ್ಚುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ವ್ಯಂಗ್ಯವಾಡಿದರು.

ಕಾಂಗ್ರೆಸ್ ವಿರುದ್ಧ ಸಂಸದೆ ಶೋಭಾ ಕರಂದ್ಲಾಜೆ ವಾಗ್ದಾಳಿ ​

ಬ್ರಿಟಿಷರನ್ನ ಓಡಿಸಿದವರಿಗೆ ಮೋದಿ ಓಡಿಸೋದು ಕಷ್ಟವಲ್ಲ ಎಂಬ ರಾಹುಲ್ ಹೇಳಿಕೆ ವಿಚಾರಕ್ಕೆ ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯಿಸಿದ ಸಂಸದೆ ಶೋಭಾ ಕರಂದ್ಲಾಜೆ, ರಾಹುಲ್ ಗಾಂಧಿಗೆ ಚಿಕಿತ್ಸೆಯ ಅಗತ್ಯವಿದೆ. ರಾಹುಲ್ ಗಾಂಧಿ ಕಾಲಿಟ್ಟಲ್ಲೆಲ್ಲ ಕಾಂಗ್ರೆಸ್ ನೆಲ ಕಚ್ಚುತ್ತಿದೆ. 4 ರಾಜ್ಯಗಳ ಚುನಾವಣೆಯಲ್ಲೂ ಕಾಂಗ್ರೆಸ್ಸಿಗೆ ಸೋಲು ಕಟ್ಟಿಟ್ಟ ಬುತ್ತಿ. ಪದೆ-ಪದೇ ಸೋಲುವುದರಿಂದ ಕಾಂಗ್ರೆಸ್ಸಿಗರಿಗೆ ಬುದ್ಧಿ ಭ್ರಮಣೆಯಾಗಿದೆ ಎಂದರು.

ನೀವು ಲೋಕಸಭೆಯಲ್ಲಿ ಅಧಿಕೃತ ವಿರೋಧ ಪಕ್ಷವಾಗಿಯೂ ಉಳಿಯುವುದಿಲ್ಲ. ವಂಶಾಡಳಿತ, ದುರಾಡಳಿತ, ಭ್ರಷ್ಟಚಾರದಿಂದ ಜನರಿಂದಲೇ ನಾಶವಾಗಿದ್ದೀರಾ. ಮತ್ತೆ ಸರ್ವನಾಶವಾಗ್ತೀರಾ, ಯಾವ ರಾಜ್ಯದಲ್ಲೂ ಕಾಂಗ್ರೆಸ್ ಅಸ್ತಿತ್ವ ಉಳಿಯಲ್ಲ. ಚುನಾವಣೆ ಸಂದರ್ಭದಲ್ಲಿ ರಾಹುಲ್ ಗಾಂಧಿ ನಾನಾ ರೀತಿಯ ನಾಟಕವಾಡುತ್ತಾರೆ. ಪಾರ್ಲಿಮೆಂಟ್ ಚುನಾವಣೆ ನಡೆದಾಗ ವಿದೇಶಕ್ಕೆ ಓಡಿ ಹೋಗುತ್ತಾರೆ. ಈಗ ಚುನಾವಣೆಗಾಗಿ ನೀರಿಗಿಳಿಯೋದು, ಹಾಡೋದು, ಡ್ಯಾನ್ಸ್ ಮಾಡುತ್ತಿದ್ದಾರೆ ಎಂದರು.

ಕಾಂಗ್ರೆಸ್ ನಾವಿಕನಿಲ್ಲದ ದೋಣಿ:

ಕಾಂಗ್ರೆಸ್ ನಾವಿಕನಿಲ್ಲದ ದೋಣಿಯಂತಾಗಿದೆ. ಕಾಂಗ್ರೆಸ್​​​ನಲ್ಲಿ ದೆಹಲಿಯಲ್ಲೂ ಲೀಡರ್ ಇಲ್ಲ, ರಾಜ್ಯದಲ್ಲೂ ಲೀಡರ್ ಇಲ್ಲ. ಇರೋ ಚಿಕ್ಕ ಪುಟ್ಟ ನಾಯಕರು ಕುರ್ಚಿಗಾಗಿ ಹೋರಾಟ ಮಾಡುತ್ತಿದ್ದಾರೆ. ಕಾಂಗ್ರೆಸ್ ನಲ್ಲಿ ಕುರ್ಚಿಗಾಗಿ ಕಾದಾಟ ನಡೆಯುತ್ತಿದೆ. ದೊಡ್ಡವರು, ಪಟ್ಟ, ಮುಂದಾಳತ್ವಕ್ಕಾಗಿ ಪರಸ್ಪರ ಕಾದಾಡುತ್ತಿದ್ದಾರೆ. ಕಾಂಗ್ರೆಸ್ ಕಾದಾಟಕ್ಕೆ ಮೈಸೂರು ಪಾಲಿಕೆ ಚುನಾವಣೆ ಉದಾಹರಣೆ. ಈಗಾಗಲೇ ಕಾಂಗ್ರೆಸ್ಸಿಂದ ಜನ ಬೇಸತ್ತಿದ್ದಾರೆ. ಜನ ಸಿದ್ದರಾಮಯ್ಯ ಆಡಳಿತವನ್ನೂ ತಿರಸ್ಕರಿಸಿ ಬಿಜೆಪಿಗೆ ಬೆಂಬಲಿಸಿದ್ದಾರೆ. ಮುಂದಿನ ದಿನಗಳಲ್ಲೂ ದೇಶ, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ಸಿಗರು ಕಿತ್ತಾಡುತ್ತಲೇ ಇರಲಿ ಎಂದು ಶೋಭಾ ಕರಂದ್ಲಾಜೆ ಟೀಕಿಸಿದರು.

ಓದಿ: ಬೆಲೆ ಏರಿಕೆ ಎಫೆಕ್ಟ್: ನವ ದಂಪತಿಗೆ ಪೆಟ್ರೋಲ್ ನೀಡಿ ಶುಭ ಕೋರಿದ ಪಾಲಿಕೆ ಸದಸ್ಯೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.