ETV Bharat / state

ಚಿಕ್ಕಮಗಳೂರು: ಅಕ್ರಮ ಕಸಾಯಿಖಾನೆ ಧ್ವಂಸ ಮಾಡಿದ ನಗರಸಭೆ ಅಧಿಕಾರಿಗಳು

author img

By

Published : Jun 10, 2022, 11:01 PM IST

ಚಿಕ್ಕಮಗಳೂರು ನಗರದ ತಮಿಳು ಕಾಲೋನಿಯಲ್ಲಿ ಅಕ್ರಮ ಗೋಮಾಂಸ ಶೆಡ್ ಮೇಲೆ ಜೆಸಿಬಿ ಮೂಲಕ ದಾಳಿ ಮಾಡಲಾಗಿದೆ.

ಜೆಸಿಬಿಯಿಂದ ಅಕ್ರಮ ಕಸಾಯಿಖಾನೆ ದ್ವಂಸ
ಜೆಸಿಬಿಯಿಂದ ಅಕ್ರಮ ಕಸಾಯಿಖಾನೆ ದ್ವಂಸ

ಚಿಕ್ಕಮಗಳೂರು: ಅಕ್ರಮ ಗೋಮಾಂಸ ಶೆಡ್ ಮೇಲೆ ಜೆಸಿಬಿ ದಾಳಿ ಮಾಡಿರುವ ಘಟನೆ ನಗರದ ತಮಿಳು ಕಾಲೋನಿಯಲ್ಲಿ ನಡೆದಿದೆ. ನಗರಸಭೆಯಲ್ಲಿ ಇಂದು ಎಂದಿನಂತೆ ತಮಿಳು ಕಾಲೋನಿ ಹಾಗೂ ಷರೀಫ್ ಗಲ್ಲಿಯಲ್ಲಿ ಬೆಳೆದಿದ್ದ ಗಿಡ-ಘಂಟೆಗಳ ತೆರವಿಗೆ ಮುಂದಾಗಿತ್ತು. ಆಗ ತಮಿಳು ಕಾಲೋನಿಯ ಜನನಿಬಿಡ ಪ್ರದೇಶದಲ್ಲಿದ್ದ ಅಕ್ರಮ ಗೋಮಾಂಸ ಶೆಡ್ ಕಣ್ಣಿಗೆ ಬಿದ್ದಿದೆ.

ಜೆಸಿಬಿಯಿಂದ ಅಕ್ರಮ ಕಸಾಯಿಖಾನೆ ದ್ವಂಸ

ಅಧಿಕಾರಿಗಳು ಸ್ಥಳಕ್ಕೆ ಹೋದಾಗ ಗೋಮಾಂಸವೂ ಅಲ್ಲಿ ಇತ್ತು ಎಂದು ಹೇಳಲಾಗಿದೆ. ಕೂಡಲೇ ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಹಾಗೂ ನಗರಸಭೆ ಆಯುಕ್ತ ಬಸವರಾಜ್ ನಗರ ಪೊಲೀಸರಿಗೆ ಮಾಹಿತಿ ನೀಡಿ ಪೊಲೀಸರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಅಕ್ರಮ ಗೋಮಾಂಸ ಮಳಿಗೆಯನ್ನ ಜೆಸಿಬಿಯಿಂದ ದ್ವಂಸ ಮಾಡಿದ್ದಾರೆ.

ಸ್ಥಳಕ್ಕೆ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡುತ್ತಿದ್ದಂತೆ ಗೋಮಾಂಸದ ಮಳಿಗೆಯಲ್ಲಿದ್ದ ಮೂವರು ನಾಪತ್ತೆಯಾಗಿದ್ದಾರೆ. ಅಕ್ರಮ ಗೋಮಾಂಸ ಶೆಡ್ ಕಣ್ಣಿಗೆ ಬೀಳುತ್ತಿದ್ದಂತೆ ಆ ಕಟ್ಟಡವನ್ನ ಜೆಸಿಬಿಯಿಂದ ದ್ವಂಸ ಮಾಡಿದ್ದಾರೆ. ಪೊಲೀಸರು ಹಾಗೂ ಅಧಿಕಾರಿಗಳು ಅಕ್ರಮ ಗೋಮಾಂಸ ಮಳಿಗೆಯ ಶೋಧ ಕಾರ್ಯ ಆರಂಭಿಸಿದ್ದಾರೆ. ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಓದಿ: ನೂಪುರ್ ಶರ್ಮಾ ವಿವಾದಾತ್ಮಕ ಹೇಳಿಕೆ ವಿರೋಧಿಸಿ ಪ್ರತಿಭಟನೆ: ರಾಜ್ಯಾದ್ಯಂತ ಕಟ್ಟೆಚ್ಚರಕ್ಕೆ ಸಿಎಂ ಸೂಚನೆ

ಚಿಕ್ಕಮಗಳೂರು: ಅಕ್ರಮ ಗೋಮಾಂಸ ಶೆಡ್ ಮೇಲೆ ಜೆಸಿಬಿ ದಾಳಿ ಮಾಡಿರುವ ಘಟನೆ ನಗರದ ತಮಿಳು ಕಾಲೋನಿಯಲ್ಲಿ ನಡೆದಿದೆ. ನಗರಸಭೆಯಲ್ಲಿ ಇಂದು ಎಂದಿನಂತೆ ತಮಿಳು ಕಾಲೋನಿ ಹಾಗೂ ಷರೀಫ್ ಗಲ್ಲಿಯಲ್ಲಿ ಬೆಳೆದಿದ್ದ ಗಿಡ-ಘಂಟೆಗಳ ತೆರವಿಗೆ ಮುಂದಾಗಿತ್ತು. ಆಗ ತಮಿಳು ಕಾಲೋನಿಯ ಜನನಿಬಿಡ ಪ್ರದೇಶದಲ್ಲಿದ್ದ ಅಕ್ರಮ ಗೋಮಾಂಸ ಶೆಡ್ ಕಣ್ಣಿಗೆ ಬಿದ್ದಿದೆ.

ಜೆಸಿಬಿಯಿಂದ ಅಕ್ರಮ ಕಸಾಯಿಖಾನೆ ದ್ವಂಸ

ಅಧಿಕಾರಿಗಳು ಸ್ಥಳಕ್ಕೆ ಹೋದಾಗ ಗೋಮಾಂಸವೂ ಅಲ್ಲಿ ಇತ್ತು ಎಂದು ಹೇಳಲಾಗಿದೆ. ಕೂಡಲೇ ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಹಾಗೂ ನಗರಸಭೆ ಆಯುಕ್ತ ಬಸವರಾಜ್ ನಗರ ಪೊಲೀಸರಿಗೆ ಮಾಹಿತಿ ನೀಡಿ ಪೊಲೀಸರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಅಕ್ರಮ ಗೋಮಾಂಸ ಮಳಿಗೆಯನ್ನ ಜೆಸಿಬಿಯಿಂದ ದ್ವಂಸ ಮಾಡಿದ್ದಾರೆ.

ಸ್ಥಳಕ್ಕೆ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡುತ್ತಿದ್ದಂತೆ ಗೋಮಾಂಸದ ಮಳಿಗೆಯಲ್ಲಿದ್ದ ಮೂವರು ನಾಪತ್ತೆಯಾಗಿದ್ದಾರೆ. ಅಕ್ರಮ ಗೋಮಾಂಸ ಶೆಡ್ ಕಣ್ಣಿಗೆ ಬೀಳುತ್ತಿದ್ದಂತೆ ಆ ಕಟ್ಟಡವನ್ನ ಜೆಸಿಬಿಯಿಂದ ದ್ವಂಸ ಮಾಡಿದ್ದಾರೆ. ಪೊಲೀಸರು ಹಾಗೂ ಅಧಿಕಾರಿಗಳು ಅಕ್ರಮ ಗೋಮಾಂಸ ಮಳಿಗೆಯ ಶೋಧ ಕಾರ್ಯ ಆರಂಭಿಸಿದ್ದಾರೆ. ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಓದಿ: ನೂಪುರ್ ಶರ್ಮಾ ವಿವಾದಾತ್ಮಕ ಹೇಳಿಕೆ ವಿರೋಧಿಸಿ ಪ್ರತಿಭಟನೆ: ರಾಜ್ಯಾದ್ಯಂತ ಕಟ್ಟೆಚ್ಚರಕ್ಕೆ ಸಿಎಂ ಸೂಚನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.