ಚಿಕ್ಕಮಗಳೂರು : ದೆಹಲಿಯಲ್ಲಿ ನಡೆದ ಸಮಾವೇಶದಲ್ಲಿ ಚಿಕ್ಕಮಗಳೂರು ಜಿಲ್ಲೆಯಿಂದ ಯಾರು ಭಾಗವಹಿಸಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಸ್ವಷ್ಟನೆ ನೀಡಿದ್ದಾರೆ.
ಆದರೆ ಧರ್ಮಸಭೆ ನಡೆದ ಸುಮಾರು 500 ಮೀಟರ್ ದೂರದಲ್ಲಿರುವ ನಿಜಾಮುದ್ದೀನ್ ರೈಲ್ವೆ ಸ್ಟೇಷನ್ ಬಳಿ ನಮ್ಮ ಚಿಕ್ಕಮಗಳೂರು ಜಿಲ್ಲೆಯ 5 ಜನರು ಸುತ್ತಾಡಿದ್ದಾರೆ. ಆದರೆ, ಆ ಐದು ಜನರು ಈ ಸಭೆಯಲ್ಲಿ ಭಾಗವಹಿಸಿಲ್ಲ. ಅವರ ಬಳಿಗೆ ಈಗಾಗಲೇ ಆರೋಗ್ಯಧಿಕಾರಿಗಳನ್ನು ಕಳುಹಿಸಲಾಗಿದ್ದು, ಅವರಿಗೂ ತಪಾಸಣೆ ಮಾಡಲಾಗುತ್ತಿದೆ.
ಒಂದು ವೇಳೆ, ರೋಗದ ಲಕ್ಷಣ ಕಂಡು ಬಂದರೇ ಅವರಿಗೆ ಚಿಕಿತ್ಸೆ ನೀಡಿ, ಹೋಂ ಕ್ವಾರಂಟೈನ್ ಮಾಡಿಸುತ್ತೇವೆ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ತಿಳಿಸಿದರು.