ETV Bharat / state

ಫೇಸ್​​ಬುಕ್​ನಲ್ಲಿ ಶೃಂಗೇರಿ ಶ್ರೀಗಳ ಬಗ್ಗೆ ಆಕ್ಷೇಪಾರ್ಹ ಕಮೆಂಟ್​: ಆರೋಪಿಗೆ ಮೂರು ವರ್ಷ ಜೈಲು ಶಿಕ್ಷೆ - ಶೃಂಗೇರಿ ಶಾರದಾ ಪೀಠದ ಭಾರತೀ ತೀರ್ಥ ಶ್ರೀಗಳ ವಿರುದ್ಧ ಅವಹೇಳನಕಾರಿ ಕಮೆಂಟ್

2015ರ ನವೆಂಬರ್ 19ರಂದು ಫೇಸ್​​ಬುಕ್​ನಲ್ಲಿ ಶೃಂಗೇರಿ ಶ್ರೀ ಬಗ್ಗೆ ಆಕ್ಷೇಪಾರ್ಹ ಕಮೆಂಟ್ ಹಾಕಿದ್ದ ಹುಬ್ಬಳ್ಳಿ ಮೂಲದ ಮುನ್ನಾ ಅಜರ್​ಗೆ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.

objectionable-comment-about-sringeri-shri-on-facebook-accused-sentenced-three-years-in-jail
ಫೇಸ್​​ಬುಕ್​ನಲ್ಲಿ ಶೃಂಗೇರಿ ಶ್ರೀಗಳ ಬಗ್ಗೆ ಆಕ್ಷೇಪಾರ್ಹ ಕಮೆಂಟ್​: ಆರೋಪಿಗೆ ಮೂರು ವರ್ಷ ಜೈಲು ಶಿಕ್ಷೆ
author img

By

Published : Jul 20, 2022, 5:57 PM IST

ಚಿಕ್ಕಮಗಳೂರು: ಫೇಸ್​ಬುಕ್​​ ಪೇಜ್​ವೊಂದರಲ್ಲಿ ಹಾಕಿದ್ದ ಪೋಸ್​ಗೆ ಜಿಲ್ಲೆಯ ಶೃಂಗೇರಿ ಶಾರದಾ ಪೀಠದ ಭಾರತೀ ತೀರ್ಥ ಶ್ರೀಗಳ ವಿರುದ್ಧ ಅವಹೇಳನಕಾರಿ ಕಮೆಂಟ್ ಹಾಕಿದ್ದ ಮುನ್ನಾ ಅಜರ್ ಎಂಬಾತನಿಗೆ ಶೃಂಗೇರಿಯ ಜೆ.ಎಂ.ಎಫ್.ಸಿ ನ್ಯಾಯಾಲಯವು ಮೂರು ವರ್ಷಗಳ ಕಾಲ ಜೈಲು ಶಿಕ್ಷೆ ಹಾಗೂ 3,300 ರೂಪಾಯಿಗಳ ದಂಡವನ್ನು ವಿಧಿಸಿ ತೀರ್ಪು ನೀಡಿದೆ.

2015ರ ನವೆಂಬರ್ 19ರಂದು ಶೃಂಗೇರಿ ಹಿಂದೂಸ್ ಎಂಬ ಫೇಸ್​​ಬುಕ್ ಪೇಜ್​ನಲ್ಲಿ ಶೃಂಗೇರಿ ಶ್ರೀ ಮಠದ ಗುರು ಪರಂಪರೆ ಕುರಿತು ಮಾಹಿತಿ ನೀಡುವ ಫೋಸ್ಟ್​ ಹಾಕಲಾಗಿತ್ತು. ಈ ಪೋಸ್ಟ್​​ಗೆ ಶ್ರೀಗಳ ಕುರಿತಾಗಿ ಮುನ್ನಾ ಅಜರ್ ಆಕ್ಷೇಪಾರ್ಹ ಕಮೆಂಟ್ ಹಾಕಿದ್ದ. ಈ ಕುರಿತಾಗಿ ಶೃಂಗೇರಿ ಸೇರಿದಂತೆ ರಾಜ್ಯದ ವಿವಿಧ ಕಡೆಗಳಲ್ಲಿ ಶೃಂಗೇರಿ ಮಠದ ಹಾಗೂ ಶ್ರೀಗಳ ಭಕ್ತರು ಪ್ರತಿಭಟನೆ ನಡೆಸಿದ್ದರು. ಆರೋಪಿಯನ್ನು ಬಂಧಿಸಿ ಶಿಕ್ಷೆಗೆ ಒಳಪಡಿಸಬೇಕೆಂದು ಆಗ್ರಹಿಸಿದ್ದರು.

ಫೇಸ್​​ಬುಕ್​ನಲ್ಲಿ ಶೃಂಗೇರಿ ಶ್ರೀಗಳ ಬಗ್ಗೆ ಆಕ್ಷೇಪಾರ್ಹ ಕಮೆಂಟ್​: ಆರೋಪಿಗೆ ಮೂರು ವರ್ಷ ಜೈಲು ಶಿಕ್ಷೆ

ಈ ಬಗ್ಗೆ ತನಿಖೆ ಕೈಗೊಂಡ ಪೊಲೀಸರು ಕೆಲವೇ ದಿನಗಳಲ್ಲಿ ಹುಬ್ಬಳ್ಳಿ ಮೂಲದ ಆರೋಪಿಯಾದ ಅಜರ್​ನನ್ನು ಬಂಧಿಸಿದ್ದರು. ಆಗ ಶೃಂಗೇರಿ ಠಾಣೆಯ ವೃತ್ತ ನಿರೀಕ್ಷಕರಾಗಿದ್ದ ಸುಧೀರ್ ಹೆಗ್ಡೆ ನೇತೃತ್ವದ ತಂಡ ತನಿಖೆ ನಡೆಸಿ ಕೋರ್ಟ್​ಗೆ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ದಾಸರಿ ಕ್ರಾಂತಿಕಿರಣ್ ಈ ತೀರ್ಪು ಪ್ರಕಟಿಸಿದ್ದಾರೆ.

ಇದನ್ನೂ ಓದಿ: ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿದ್ದಕ್ಕೆ ಹತ್ಯೆ: ಮೂವರ ಬಂಧನ

ಚಿಕ್ಕಮಗಳೂರು: ಫೇಸ್​ಬುಕ್​​ ಪೇಜ್​ವೊಂದರಲ್ಲಿ ಹಾಕಿದ್ದ ಪೋಸ್​ಗೆ ಜಿಲ್ಲೆಯ ಶೃಂಗೇರಿ ಶಾರದಾ ಪೀಠದ ಭಾರತೀ ತೀರ್ಥ ಶ್ರೀಗಳ ವಿರುದ್ಧ ಅವಹೇಳನಕಾರಿ ಕಮೆಂಟ್ ಹಾಕಿದ್ದ ಮುನ್ನಾ ಅಜರ್ ಎಂಬಾತನಿಗೆ ಶೃಂಗೇರಿಯ ಜೆ.ಎಂ.ಎಫ್.ಸಿ ನ್ಯಾಯಾಲಯವು ಮೂರು ವರ್ಷಗಳ ಕಾಲ ಜೈಲು ಶಿಕ್ಷೆ ಹಾಗೂ 3,300 ರೂಪಾಯಿಗಳ ದಂಡವನ್ನು ವಿಧಿಸಿ ತೀರ್ಪು ನೀಡಿದೆ.

2015ರ ನವೆಂಬರ್ 19ರಂದು ಶೃಂಗೇರಿ ಹಿಂದೂಸ್ ಎಂಬ ಫೇಸ್​​ಬುಕ್ ಪೇಜ್​ನಲ್ಲಿ ಶೃಂಗೇರಿ ಶ್ರೀ ಮಠದ ಗುರು ಪರಂಪರೆ ಕುರಿತು ಮಾಹಿತಿ ನೀಡುವ ಫೋಸ್ಟ್​ ಹಾಕಲಾಗಿತ್ತು. ಈ ಪೋಸ್ಟ್​​ಗೆ ಶ್ರೀಗಳ ಕುರಿತಾಗಿ ಮುನ್ನಾ ಅಜರ್ ಆಕ್ಷೇಪಾರ್ಹ ಕಮೆಂಟ್ ಹಾಕಿದ್ದ. ಈ ಕುರಿತಾಗಿ ಶೃಂಗೇರಿ ಸೇರಿದಂತೆ ರಾಜ್ಯದ ವಿವಿಧ ಕಡೆಗಳಲ್ಲಿ ಶೃಂಗೇರಿ ಮಠದ ಹಾಗೂ ಶ್ರೀಗಳ ಭಕ್ತರು ಪ್ರತಿಭಟನೆ ನಡೆಸಿದ್ದರು. ಆರೋಪಿಯನ್ನು ಬಂಧಿಸಿ ಶಿಕ್ಷೆಗೆ ಒಳಪಡಿಸಬೇಕೆಂದು ಆಗ್ರಹಿಸಿದ್ದರು.

ಫೇಸ್​​ಬುಕ್​ನಲ್ಲಿ ಶೃಂಗೇರಿ ಶ್ರೀಗಳ ಬಗ್ಗೆ ಆಕ್ಷೇಪಾರ್ಹ ಕಮೆಂಟ್​: ಆರೋಪಿಗೆ ಮೂರು ವರ್ಷ ಜೈಲು ಶಿಕ್ಷೆ

ಈ ಬಗ್ಗೆ ತನಿಖೆ ಕೈಗೊಂಡ ಪೊಲೀಸರು ಕೆಲವೇ ದಿನಗಳಲ್ಲಿ ಹುಬ್ಬಳ್ಳಿ ಮೂಲದ ಆರೋಪಿಯಾದ ಅಜರ್​ನನ್ನು ಬಂಧಿಸಿದ್ದರು. ಆಗ ಶೃಂಗೇರಿ ಠಾಣೆಯ ವೃತ್ತ ನಿರೀಕ್ಷಕರಾಗಿದ್ದ ಸುಧೀರ್ ಹೆಗ್ಡೆ ನೇತೃತ್ವದ ತಂಡ ತನಿಖೆ ನಡೆಸಿ ಕೋರ್ಟ್​ಗೆ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ದಾಸರಿ ಕ್ರಾಂತಿಕಿರಣ್ ಈ ತೀರ್ಪು ಪ್ರಕಟಿಸಿದ್ದಾರೆ.

ಇದನ್ನೂ ಓದಿ: ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿದ್ದಕ್ಕೆ ಹತ್ಯೆ: ಮೂವರ ಬಂಧನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.