ಚಿಕ್ಕಮಗಳೂರು: ನಗರದಲ್ಲಿರುವ ಜಿಲ್ಲೆಯ ಮಾಜಿ ಸಂಸದ ಚಂದ್ರಪ್ಪ ಅವರ ಮನೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಸೀತಾರಾಮ್ ಎಂಬುವರ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಈ ದಾಳಿ ನಡೆಸಿದ್ದು, ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿಯಲ್ಲಿರುವ ಹುರುಳಿಬಾರೆ ಗ್ರಾಮದ ತೋಟದ ಮನೆಯಲ್ಲಿ ಲೋಡ್ ಗಟ್ಟಲೇ ಅಕ್ರಮವಾಗಿ ಪಿವಿಸಿ ಪೈಪ್ ಸಂಗ್ರಹಿಸಿಟ್ಟಿದ್ದಾರೆ ಎಂಬ ಖಚಿತ ಮಾಹಿತಿ ಪಡೆದ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ.
![complaint copy](https://etvbharatimages.akamaized.net/etvbharat/prod-images/4990045_thjpg.jpg)
ಅಲ್ಲದೇ ಗ್ರಾಮದ ಅಂಬೇಡ್ಕರ್ ಭವನದಲ್ಲಿಯೂ ಪೈಪ್ಗಳನ್ನು ಸಂಗ್ರಹಿಸಿಡಲಾಗಿದೆ ಎಂಬ ಆರೋಪವು ಕೇಳಿ ಬಂದಿದೆ. ಲಕ್ಕವಳ್ಳಿ ಪೊಲೀಸರು ಈ ದಾಳಿ ನಡೆಸಿದ್ದು, ಈ ಕುರಿತು ತನಿಖೆ ನಡೆಸುತ್ತಿದ್ದಾರೆ.