ETV Bharat / state

ಟಿಪ್ಪು ಸುಲ್ತಾನ್‌ ಪ್ರತಿಮೆ ನಿರ್ಮಿಸಿದ್ರೆ ಒಡೆದು ಹಾಕುತ್ತೇವೆ: ಪ್ರಮೋದ್‌ ಮುತಾಲಿಕ್‌

author img

By

Published : Nov 13, 2022, 11:55 AM IST

ಇಸ್ಲಾಂ ಧರ್ಮದಲ್ಲಿ ಮೂರ್ತಿ ಪೂಜೆಗೆ ಅವಕಾಶವಿಲ್ಲ. ಒಂದು ವೇಳೆ ಮೈಸೂರಿನಲ್ಲಿ ಟಿಪ್ಪು ಸುಲ್ತಾನ್‌ ಪ್ರತಿಮೆ ನಿರ್ಮಿಸಿದ್ರೆ ಒಡೆಯುತ್ತೇವೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ.

pramod muthalik
ಪ್ರಮೋದ್‌ ಮುತಾಲಿಕ್‌

ಚಿಕ್ಕಮಗಳೂರು: ಮೈಸೂರಿನಲ್ಲಿ ಟಿಪ್ಪು ಪ್ರತಿಮೆ ನಿರ್ಮಾಣ ಮಾಡ್ತೇವೆ ಎಂಬ ಶಾಸಕ ತನ್ವೀರ್ ಸೇಠ್ ಹೇಳಿಕೆ ಖಂಡನೀಯ. ಇಸ್ಲಾಂನಲ್ಲಿ ಮೂರ್ತಿ ಪೂಜೆಗೆ ಅವಕಾಶವಿಲ್ಲ. ಮುಸ್ಲಿಂ ಸಮುದಾಯದವರೇ ಅದನ್ನು ಒಪ್ಪುವುದಿಲ್ಲ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದರು.

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಪ್ರಮೋದ್‌ ಮುತಾಲಿಕ್‌

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಇಸ್ಲಾಂನಲ್ಲಿ ಮೂರ್ತಿ ಪೂಜೆ ಇಲ್ಲ ಅಂತ ಮುಸ್ಲಿಮರು ಒಪ್ಪಿಕೊಳ್ಳಬೇಕು. ಜೊತೆಗೆ ನಮ್ಮ ದೇವಸ್ಥಾನಗಳನ್ನು ಬಿಟ್ಟುಕೊಡಬೇಕು. ಮೈಸೂರು ನಮ್ಮ ಸ್ವಾಭಿಮಾನದ ಸಾಂಸ್ಕೃತಿಕ ಕೇಂದ್ರ. ಮೈಸೂರಿನ ಮಹಾರಾಣಿಯನ್ನು ಬಂಧಿಸಿ, ಮೋಸದಿಂದ ರಾಜ್ಯಭಾರ ಮಾಡಿದ ವ್ಯಕ್ತಿ ಆತ. ಅವನ ಮೂರ್ತಿಯನ್ನು ನೂರು ಅಲ್ಲ, ಒಂದಿಂಚೂ ಜಾಗದಲ್ಲೂ ನಿರ್ಮಾಣ ಮಾಡುವುದಕ್ಕೆ ಬಿಡೋದಿಲ್ಲ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: 100 ಅಡಿ ಎತ್ತರದ ಟಿಪ್ಪು ಪ್ರತಿಮೆ ಸ್ಥಾಪನೆಗೆ ಚಿಂತನೆ: ಶಾಸಕ ತನ್ವೀರ್ ಸೇಠ್

ಟಿಪ್ಪು ಸುಲ್ತಾನ್‍ನ 100 ಅಡಿ ಪ್ರತಿಮೆ ನಿರ್ಮಾಣ ಮಾಡುತ್ತೇವೆ ಅನ್ನೋದು ದೂರ್ತತನ ಮತ್ತು ಸೊಕ್ಕಿನ ಮಾತು. ಇವೆಲ್ಲಾ ನಡೆಯೋದಿಲ್ಲ. ಜ್ಞಾನವ್ಯಾಪಿ ಮಸೀದಿಯಲ್ಲಿ ಶಿವಲಿಂಗ ಮೂರ್ತಿ ಪತ್ತೆಯಾಗಿದ್ದು, ಅದನ್ನು ನಮಗೆ ಬಿಟ್ಟುಕೊಡಬೇಕು. ದಕ್ಷಿಣ ಕನ್ನಡ ಜಿಲ್ಲೆಯ ಮಳಲಿಯಲ್ಲೂ ದೇವಸ್ಥಾನದ ಸ್ವರೂಪ ಸಿಕ್ಕಿದೆ. ಅದನ್ನೂ ಬಿಡಬೇಕು. ಶ್ರೀರಂಗಪಟ್ಟಣದ ಹನುಮನ ಮಂದಿರ ಇಂದು ಮದರಸ ಆಗಿದೆ, ಅದನ್ನೂ ಬಿಟ್ಟು ಕೊಡಬೇಕು. ಇಲ್ಲ ಅಂದ್ರೆ ತನ್ವೀರ್ ಸೇಠ್ ವಿರುದ್ಧ ಬಹಿಷ್ಕಾರ ಹಾಕಬೇಕು ಎಂದರು.

ಇದನ್ನೂ ಓದಿ:ಇಸ್ಲಾಂನಲ್ಲಿ ಮೂರ್ತಿಪೂಜೆಯೇ ಇಲ್ಲ.. ತನ್ವೀರ್ ಸೇಠ್ ಟಿಪ್ಪು ಪ್ರತಿಮೆ ನಿರ್ಮಿಸಿದರೆ ಮುಸ್ಲಿಮರ ಬಂಡೆಳ್ತಾರೆ: ಮುತಾಲಿಕ್ ಆಕ್ಷೇಪ

ಚಿಕ್ಕಮಗಳೂರು: ಮೈಸೂರಿನಲ್ಲಿ ಟಿಪ್ಪು ಪ್ರತಿಮೆ ನಿರ್ಮಾಣ ಮಾಡ್ತೇವೆ ಎಂಬ ಶಾಸಕ ತನ್ವೀರ್ ಸೇಠ್ ಹೇಳಿಕೆ ಖಂಡನೀಯ. ಇಸ್ಲಾಂನಲ್ಲಿ ಮೂರ್ತಿ ಪೂಜೆಗೆ ಅವಕಾಶವಿಲ್ಲ. ಮುಸ್ಲಿಂ ಸಮುದಾಯದವರೇ ಅದನ್ನು ಒಪ್ಪುವುದಿಲ್ಲ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದರು.

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಪ್ರಮೋದ್‌ ಮುತಾಲಿಕ್‌

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಇಸ್ಲಾಂನಲ್ಲಿ ಮೂರ್ತಿ ಪೂಜೆ ಇಲ್ಲ ಅಂತ ಮುಸ್ಲಿಮರು ಒಪ್ಪಿಕೊಳ್ಳಬೇಕು. ಜೊತೆಗೆ ನಮ್ಮ ದೇವಸ್ಥಾನಗಳನ್ನು ಬಿಟ್ಟುಕೊಡಬೇಕು. ಮೈಸೂರು ನಮ್ಮ ಸ್ವಾಭಿಮಾನದ ಸಾಂಸ್ಕೃತಿಕ ಕೇಂದ್ರ. ಮೈಸೂರಿನ ಮಹಾರಾಣಿಯನ್ನು ಬಂಧಿಸಿ, ಮೋಸದಿಂದ ರಾಜ್ಯಭಾರ ಮಾಡಿದ ವ್ಯಕ್ತಿ ಆತ. ಅವನ ಮೂರ್ತಿಯನ್ನು ನೂರು ಅಲ್ಲ, ಒಂದಿಂಚೂ ಜಾಗದಲ್ಲೂ ನಿರ್ಮಾಣ ಮಾಡುವುದಕ್ಕೆ ಬಿಡೋದಿಲ್ಲ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: 100 ಅಡಿ ಎತ್ತರದ ಟಿಪ್ಪು ಪ್ರತಿಮೆ ಸ್ಥಾಪನೆಗೆ ಚಿಂತನೆ: ಶಾಸಕ ತನ್ವೀರ್ ಸೇಠ್

ಟಿಪ್ಪು ಸುಲ್ತಾನ್‍ನ 100 ಅಡಿ ಪ್ರತಿಮೆ ನಿರ್ಮಾಣ ಮಾಡುತ್ತೇವೆ ಅನ್ನೋದು ದೂರ್ತತನ ಮತ್ತು ಸೊಕ್ಕಿನ ಮಾತು. ಇವೆಲ್ಲಾ ನಡೆಯೋದಿಲ್ಲ. ಜ್ಞಾನವ್ಯಾಪಿ ಮಸೀದಿಯಲ್ಲಿ ಶಿವಲಿಂಗ ಮೂರ್ತಿ ಪತ್ತೆಯಾಗಿದ್ದು, ಅದನ್ನು ನಮಗೆ ಬಿಟ್ಟುಕೊಡಬೇಕು. ದಕ್ಷಿಣ ಕನ್ನಡ ಜಿಲ್ಲೆಯ ಮಳಲಿಯಲ್ಲೂ ದೇವಸ್ಥಾನದ ಸ್ವರೂಪ ಸಿಕ್ಕಿದೆ. ಅದನ್ನೂ ಬಿಡಬೇಕು. ಶ್ರೀರಂಗಪಟ್ಟಣದ ಹನುಮನ ಮಂದಿರ ಇಂದು ಮದರಸ ಆಗಿದೆ, ಅದನ್ನೂ ಬಿಟ್ಟು ಕೊಡಬೇಕು. ಇಲ್ಲ ಅಂದ್ರೆ ತನ್ವೀರ್ ಸೇಠ್ ವಿರುದ್ಧ ಬಹಿಷ್ಕಾರ ಹಾಕಬೇಕು ಎಂದರು.

ಇದನ್ನೂ ಓದಿ:ಇಸ್ಲಾಂನಲ್ಲಿ ಮೂರ್ತಿಪೂಜೆಯೇ ಇಲ್ಲ.. ತನ್ವೀರ್ ಸೇಠ್ ಟಿಪ್ಪು ಪ್ರತಿಮೆ ನಿರ್ಮಿಸಿದರೆ ಮುಸ್ಲಿಮರ ಬಂಡೆಳ್ತಾರೆ: ಮುತಾಲಿಕ್ ಆಕ್ಷೇಪ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.