ETV Bharat / state

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಶೃಂಗೇರಿಯಲ್ಲಿ ಪ್ರತಿಭಟನೆ

ಇಂಧನ ದರ ಏರಿಕೆ ಖಂಡಿಸಿ ಶೃಂಗೇರಿಯಲ್ಲಿ ಕಾಂಗ್ರೆಸ್​ನಿಂದ ಪ್ರತಿಭಟನೆ ನಡೆಯಿತು.

author img

By

Published : Aug 2, 2021, 8:11 AM IST

Shringeri Congress protest
ಶೃಂಗೇರಿಯಲ್ಲಿ ಪ್ರತಿಭಟನೆ

ಚಿಕ್ಕಮಗಳೂರು: ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ದರ ಹೆಚ್ಚಳ ಖಂಡಿಸಿ ಶೃಂಗೇರಿ ಖಾಂಡ್ಯ ಹೋಬಳಿಯ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಶಾಸಕ ಟಿ.ಡಿ ರಾಜೇಗೌಡ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ಸೈಕಲ್ ಜಾಥಾ ಮಾಡಿ, ಕಾರಿಗೆ ಹಗ್ಗಕಟ್ಟಿ ಎಳೆಯುವುದರ ಕಾಂಗ್ರೆಸ್ ಕಾರ್ಯಕರ್ತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕಾರಿಗೆ ಹಗ್ಗ ಕಟ್ಟಿ ಎಳೆದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು

ಇದನ್ನೂ ಓದಿ: ಇಂಜಿನ್ ಬೂಸ್ಟರ್ ಆಲ್ಟರ್ ಮಾಡಿಸಿದ್ದ ವಾಹನ ಸವಾರರಿಗೆ ಆರ್‌ಟಿಒ ಬಿಸಿ

ಈ ವೇಳೆ ಮಾತನಾಡಿದ ಶಾಸಕ ಟಿ.ಡಿ ರಾಜೇಗೌಡ, ರಾಜ್ಯ ಹಾಗೂ ಕೇಂದ್ರದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಅಭಿವೃದ್ದಿ ಮಾಡುತ್ತೇವೆ, ರಾಮರಾಜ್ಯ ಮಾಡುತ್ತೇವೆ ಎಂದು ಹೇಳಿ ಬಿಜೆಪಿಯವರು ರಾಕ್ಷಸ ರಾಜ್ಯ ಮಾಡಿದ್ದಾರೆ. ಡೀಸೆಲ್, ಪೆಟ್ರೋಲ್, ಗ್ಯಾಸ್ ಎಲ್ಲದರ ಬೆಲೆ ಹೆಚ್ಚಳವಾಗಿದೆ. ರೈತರ ಬೆಳೆಗಳಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ ಎಂದರು.

ಕೋವಿಡ್​ನಿಂದ ಹೆಚ್ಚಿನ ಜನ ಸಾಯಲು ಸರ್ಕಾರದ ವೈಫಲ್ಯವೇ ಕಾರಣ ಎಂದು ಆರೋಪಿಸಿದರು.

ಚಿಕ್ಕಮಗಳೂರು: ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ದರ ಹೆಚ್ಚಳ ಖಂಡಿಸಿ ಶೃಂಗೇರಿ ಖಾಂಡ್ಯ ಹೋಬಳಿಯ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಶಾಸಕ ಟಿ.ಡಿ ರಾಜೇಗೌಡ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ಸೈಕಲ್ ಜಾಥಾ ಮಾಡಿ, ಕಾರಿಗೆ ಹಗ್ಗಕಟ್ಟಿ ಎಳೆಯುವುದರ ಕಾಂಗ್ರೆಸ್ ಕಾರ್ಯಕರ್ತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕಾರಿಗೆ ಹಗ್ಗ ಕಟ್ಟಿ ಎಳೆದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು

ಇದನ್ನೂ ಓದಿ: ಇಂಜಿನ್ ಬೂಸ್ಟರ್ ಆಲ್ಟರ್ ಮಾಡಿಸಿದ್ದ ವಾಹನ ಸವಾರರಿಗೆ ಆರ್‌ಟಿಒ ಬಿಸಿ

ಈ ವೇಳೆ ಮಾತನಾಡಿದ ಶಾಸಕ ಟಿ.ಡಿ ರಾಜೇಗೌಡ, ರಾಜ್ಯ ಹಾಗೂ ಕೇಂದ್ರದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಅಭಿವೃದ್ದಿ ಮಾಡುತ್ತೇವೆ, ರಾಮರಾಜ್ಯ ಮಾಡುತ್ತೇವೆ ಎಂದು ಹೇಳಿ ಬಿಜೆಪಿಯವರು ರಾಕ್ಷಸ ರಾಜ್ಯ ಮಾಡಿದ್ದಾರೆ. ಡೀಸೆಲ್, ಪೆಟ್ರೋಲ್, ಗ್ಯಾಸ್ ಎಲ್ಲದರ ಬೆಲೆ ಹೆಚ್ಚಳವಾಗಿದೆ. ರೈತರ ಬೆಳೆಗಳಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ ಎಂದರು.

ಕೋವಿಡ್​ನಿಂದ ಹೆಚ್ಚಿನ ಜನ ಸಾಯಲು ಸರ್ಕಾರದ ವೈಫಲ್ಯವೇ ಕಾರಣ ಎಂದು ಆರೋಪಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.