ETV Bharat / state

ಜ್ಯೋತಿ ಭತ್ತಕ್ಕೆ ಬೆಂಬಲ ಬೆಲೆ, ಖರೀದಿ ಕೇಂದ್ರಕ್ಕೆ ಆಗ್ರಹಿಸಿ ಪ್ರತಿಭಟನೆ - ಲಕ್ಕವಳ್ಳಿಯ ಬಸವೇಶ್ವರ ಆಸ್ವತ್ರೆ

ತರೀಕೆರೆ ತಾಲೂಕಿನ ಲಕ್ಕವಳ್ಳಿ ಹೋಬಳಿಯಲ್ಲಿ ಭದ್ರಾ ರೈತರ ಅಭಿವೃದ್ಧಿ ಸಂಘದ ವತಿಯಿಂದ ಭತ್ತದ ಬೆಳೆಗೆ ಬೆಂಬಲ ಬೆಲೆ ನಿಗದಿ ಮಾಡಬೇಕು ಹಾಗೂ ಭತ್ತದ ಖರೀದಿ ಕೇಂದ್ರ ಪ್ರಾರಂಭ ಮಾಡಬೇಕು ಎಂದು ಆಗ್ರಹಿಸಿ ನೂರಾರು ರೈತರು ಪ್ರತಿಭಟನೆ ನಡೆಸಿದರು.

Kn_Ckm_03_Raith_protest_av_7202347
ಜ್ಯೋತಿ ಭತ್ತಕ್ಕೆ ಬೆಂಬಲ ಬೆಲೆ, ಖರೀದಿ ಕೇಂದ್ರಕ್ಕೆ ಆಗ್ರಹ: ಭದ್ರಾ ರೈತ ಸಂಘದಿಂದ ಪ್ರತಿಭಟನೆ
author img

By

Published : Nov 26, 2019, 5:58 PM IST

ಚಿಕ್ಕಮಗಳೂರು: ತರೀಕೆರೆ ತಾಲೂಕಿನ ಲಕ್ಕವಳ್ಳಿ ಹೋಬಳಿಯಲ್ಲಿ ಭದ್ರಾ ರೈತರ ಅಭಿವೃದ್ಧಿ ಸಂಘದ ವತಿಯಿಂದ ಭತ್ತದ ಬೆಳೆಗೆ ಬೆಂಬಲ ಬೆಲೆ ನಿಗದಿ ಮಾಡಬೇಕು ಹಾಗೂ ಭತ್ತದ ಖರೀದಿ ಕೇಂದ್ರ ಪ್ರಾರಂಭ ಮಾಡಬೇಕು ಎಂದು ಆಗ್ರಹಿಸಿ ನೂರಾರು ರೈತರು ಪ್ರತಿಭಟನೆ ನಡೆಸಿದರು.

ಲಕ್ಕವಳ್ಳಿಯ ಬಸವೇಶ್ವರ ಆಸ್ವತ್ರೆಯ ಮುಂಭಾಗದಿಂದ ಲಕ್ಕವಳ್ಳಿಯ ಬಸ್ ನಿಲ್ಡಾಣದವರೆಗೂ ಪ್ರತಿಭಟನಾ ಮೆರವಣಿಗೆ ಮಾಡಿದ ನೂರಾರು ರೈತರು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಲಕ್ಕವಳ್ಳಿ ಹೋಬಳಿ ಪ್ರದೇಶದಲ್ಲಿ ರೈತರು ಅತಿ ಹೆಚ್ಚಾಗಿ ಜ್ಯೋತಿ ಭತ್ತವನ್ನು ಬೆಳೆಯುತ್ತಿದ್ದು, ಕಳೆದ ವಾರ ಪ್ರತಿ ಕ್ವಿಂಟಾಲ್​​ಗೆ 2,500 ರೂ. ಬೆಲೆ ಇತ್ತು. ಆದರೆ ಒಂದು ವಾರದಲ್ಲಿಯೇ 1,700 ರೂ.ಗೆ ಇಳಿದಿದ್ದು, ಇದರಿಂದ ರೈತರಿಗೆ ತುಂಬಾ ಅನಾನುಕೂಲವಾಗಿ ತೊಂದರೆಗೆ ಸಿಲುಕಿದ್ದಾರೆ.

ಈ ಬಾರಿಯ ಮಳೆಯಿಂದ ಫಸಲು ಸಹ ಕುಂಠಿತವಾಗಿದ್ದು, ಈಗ ಬಂದಿರುವಂತಹ ಅಲ್ಪಸ್ವಲ್ಪ ಇಳುವರಿಗೂ ಸಹ ನಿರೀಕ್ಷಿತ ಬೆಲೆ ಸಿಗದೇ ರೈತರು ಕಂಗಾಲಾಗಿದ್ದಾರೆ. ಕೂಡಲೇ ರಾಜ್ಯ ಹಾಗೂ ಕೇಂದ್ರ ಸರ್ಕಾರ ಮಧ್ಯ ಪ್ರವೇಶ ಮಾಡಿ ರೈತರು ಬೆಳೆದ ಭತ್ತಕ್ಕೆ ಬೆಂಬಲ ಬೆಲೆ ನೀಡಬೇಕು ಹಾಗೂ ಭತ್ತದ ಖರೀದಿ ಕೇಂದ್ರ ಪ್ರಾರಂಭ ಮಾಡಬೇಕು ಎಂದು ಆಗ್ರಹಿಸಿ ತರೀಕೆರೆ ತಹಶೀಲ್ದಾರ್​​​ಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಚಿಕ್ಕಮಗಳೂರು: ತರೀಕೆರೆ ತಾಲೂಕಿನ ಲಕ್ಕವಳ್ಳಿ ಹೋಬಳಿಯಲ್ಲಿ ಭದ್ರಾ ರೈತರ ಅಭಿವೃದ್ಧಿ ಸಂಘದ ವತಿಯಿಂದ ಭತ್ತದ ಬೆಳೆಗೆ ಬೆಂಬಲ ಬೆಲೆ ನಿಗದಿ ಮಾಡಬೇಕು ಹಾಗೂ ಭತ್ತದ ಖರೀದಿ ಕೇಂದ್ರ ಪ್ರಾರಂಭ ಮಾಡಬೇಕು ಎಂದು ಆಗ್ರಹಿಸಿ ನೂರಾರು ರೈತರು ಪ್ರತಿಭಟನೆ ನಡೆಸಿದರು.

ಲಕ್ಕವಳ್ಳಿಯ ಬಸವೇಶ್ವರ ಆಸ್ವತ್ರೆಯ ಮುಂಭಾಗದಿಂದ ಲಕ್ಕವಳ್ಳಿಯ ಬಸ್ ನಿಲ್ಡಾಣದವರೆಗೂ ಪ್ರತಿಭಟನಾ ಮೆರವಣಿಗೆ ಮಾಡಿದ ನೂರಾರು ರೈತರು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಲಕ್ಕವಳ್ಳಿ ಹೋಬಳಿ ಪ್ರದೇಶದಲ್ಲಿ ರೈತರು ಅತಿ ಹೆಚ್ಚಾಗಿ ಜ್ಯೋತಿ ಭತ್ತವನ್ನು ಬೆಳೆಯುತ್ತಿದ್ದು, ಕಳೆದ ವಾರ ಪ್ರತಿ ಕ್ವಿಂಟಾಲ್​​ಗೆ 2,500 ರೂ. ಬೆಲೆ ಇತ್ತು. ಆದರೆ ಒಂದು ವಾರದಲ್ಲಿಯೇ 1,700 ರೂ.ಗೆ ಇಳಿದಿದ್ದು, ಇದರಿಂದ ರೈತರಿಗೆ ತುಂಬಾ ಅನಾನುಕೂಲವಾಗಿ ತೊಂದರೆಗೆ ಸಿಲುಕಿದ್ದಾರೆ.

ಈ ಬಾರಿಯ ಮಳೆಯಿಂದ ಫಸಲು ಸಹ ಕುಂಠಿತವಾಗಿದ್ದು, ಈಗ ಬಂದಿರುವಂತಹ ಅಲ್ಪಸ್ವಲ್ಪ ಇಳುವರಿಗೂ ಸಹ ನಿರೀಕ್ಷಿತ ಬೆಲೆ ಸಿಗದೇ ರೈತರು ಕಂಗಾಲಾಗಿದ್ದಾರೆ. ಕೂಡಲೇ ರಾಜ್ಯ ಹಾಗೂ ಕೇಂದ್ರ ಸರ್ಕಾರ ಮಧ್ಯ ಪ್ರವೇಶ ಮಾಡಿ ರೈತರು ಬೆಳೆದ ಭತ್ತಕ್ಕೆ ಬೆಂಬಲ ಬೆಲೆ ನೀಡಬೇಕು ಹಾಗೂ ಭತ್ತದ ಖರೀದಿ ಕೇಂದ್ರ ಪ್ರಾರಂಭ ಮಾಡಬೇಕು ಎಂದು ಆಗ್ರಹಿಸಿ ತರೀಕೆರೆ ತಹಶೀಲ್ದಾರ್​​​ಗೆ ಮನವಿ ಪತ್ರ ಸಲ್ಲಿಸಿದ್ದಾರೆ.

Intro:Kn_Ckm_03_Raith_protest_av_7202347Body:ಚಿಕ್ಕಮಗಳೂರು :-

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿ ಹೋಬಳಿಯಲ್ಲಿ ಭದ್ರಾ ರೈತರ ಅಭಿವೃದ್ದಿ ಸಂಘದ ವತಿಯಿಂದಾ ಭತ್ತದ ಬೆಳೆಗೆ ಬೆಂಬಲ ಬೆಲೆ ನಿಗದಿ ಮಾಡಬೇಕು ಹಾಗೂ ಭತ್ತದ ಖರೀದಿ ಕೇಂದ್ರ ಪ್ರಾರಂಭ ಮಾಡಬೇಕು ಎಂದೂ ಆಗ್ರಹಿಸಿ ಲಕ್ಕವಳ್ಳಿಯಲ್ಲಿ ನೂರಾರು ರೈತರು ಪ್ರತಿಭಟನೆ ಮಾಡಿದರು. ಲಕ್ಕವಳ್ಳಿಯ ಬಸವೇಶ್ವರ ಆಸ್ವತ್ರೆಯ ಮುಂಭಾಗದಿಂದಾ ಲಕ್ಕವಳ್ಳಿಯ ಬಸ್ ನಿಲ್ಡಾಣದ ವರೆಗೂ ಪ್ರತಿಭಟನಾ ಮೆರವಣಿಗೆ ಮಾಡಿದ ನೂರಾರು ರೈತರು ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಲಕ್ಕವಳ್ಳಿ ಹೋಬಳಿ ಪ್ರದೇಶದಲ್ಲಿ ರೈತರು ಅತಿ ಹೆಚ್ಚಾಗಿ ಜ್ಯೋತಿ ಭತ್ತವನ್ನು ಬೆಳೆಯುತ್ತಿದ್ದು ಕಳೆದ ವಾರ ಪ್ರತಿ ಕ್ವಿಂಟಾಲ್ ಗೆ 2.500 ರೂ ಬೆಲೆ ಇತ್ತು ಆದರೇ ಒಂದು ವಾರದಲ್ಲಿಯೇ 1.700 ರೂ ಕ್ಕೆ ಬೆಲೆ ಇಳಿದಿದ್ದು ಇದರಿಂದ ರೈತರಿಗೆ ತುಂಬಾ ಅನಾನುಕೂಲ ಆಗಿ ತೀರ್ವ್ರವಾದ ತೊಂದರೆಗೆ ಸಿಲುಕಿದ್ದಾರೆ.ಈ ಬಾರೀಯ ಮಳೆಯಿಂದಾ ಫಸಲು ಸಹ ಕುಂಠಿತವಾಗಿದ್ದು ಈಗ ಬಂದಿರುವಂತಹ ಅಲ್ವ ಸ್ವಲ್ವ ಇಳುವರಿಯೂ ಸಹ ನಿರೀಕ್ಷಿತ ಬೆಲೆ ಸಿಗದೇ ರೈತರು ಕಂಗಾಲಾಗಿದ್ದಾರೆ.ಕೂಡಲೇ ರಾಜ್ಯ ಹಾಗೂ ಕೇಂದ್ರ ಸರ್ಕಾರ ಮಧ್ಯ ಪ್ರವೇಶ ಮಾಡಿ ರೈತರು ಬೆಳೆದ ಭತ್ತಕ್ಕೆ ಬೆಂಬಲ ಬೆಲೆ ನೀಡಬೇಕು ಹಾಗೂ ಭತ್ತದ ಖರೀದಿ ಕೇಂದ್ರ ಪ್ರಾರಂಭ ಮಾಡಬೇಕು ಎಂದೂ ಆಗ್ರಹಿಸಿ ತರೀಕೆರೆ ತಹಶೀಲ್ಡಾರ್ ಗೆ ರೈತರು ಮನವಿ ಪತ್ರವನ್ನು ಸಲ್ಲಿಸಿದ್ದಾರೆ....

Conclusion:ರಾಜಕುಮಾರ್...
ಈ ಟಿವಿ ಭಾರತ್....
ಚಿಕ್ಕಮಗಳೂರು.....
ETV Bharat Logo

Copyright © 2025 Ushodaya Enterprises Pvt. Ltd., All Rights Reserved.