ETV Bharat / state

ಚಿಕ್ಕಮಗಳೂರಿನಲ್ಲಿ ನೆರೆ ಹಾನಿ ಪ್ರದೇಶಗಳ ವೀಕ್ಷಣೆ ಮಾಡಿದ ಸಂಸದೆ ಶೋಭಾ ಕರಂದ್ಲಾಜೆ..

ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿಯ ಹರವಿಕೆರೆ, ಹಳ್ಳಿಕೆರೆ, ಚೆನ್ನನಹಡ್ಲು ಭಾಗದಲ್ಲಿ ಮಳೆಯಿಂದ ಹಾನಿಗೊಳಗಾದ ವಿವಿಧ ಪ್ರದೇಶಗಳಿಗೆ ಉಡುಪಿ -ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

author img

By

Published : Sep 4, 2019, 11:26 PM IST

ಚಿಕ್ಕಮಗಳೂರಿನಲ್ಲಿ ಮಳೆಹಾನಿ ಪ್ರದೇಶ ವಿಕ್ಷೀಸಿದ ಸಂಸದೆ ಶೋಭ ಕರಂದ್ಲಾಜೆ

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿಯ ಹರವಿಕೆರೆ, ಹಳ್ಳಿಕೆರೆ, ಚೆನ್ನನಹಡ್ಲು ಭಾಗದಲ್ಲಿ ಮಳೆಯಿಂದ ಹಾನಿಗೊಳಗಾದ ವಿವಿಧ ಪ್ರದೇಶಗಳಿಗೆ ಉಡುಪಿ -ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಚಿಕ್ಕಮಗಳೂರಿನಲ್ಲಿ ಮಳೆಹಾನಿ ಪ್ರದೇಶ ವೀಕ್ಷಿಸಿದ ಸಂಸದೆ ಶೋಭಾ ಕರಂದ್ಲಾಜೆ..

ಬಳಿಕ ಸ್ಥಳೀಯ ಸಂತ್ರಸ್ತರೊಂದಿಗೆ ಚರ್ಚೆ ಮಾಡಿ ಸರ್ಕಾರದ ವತಿಯಿಂದ ಎಲ್ಲಾ ರೀತಿ ಅನುಕೂಲ ಮಾಡಿಕೊಡಲಾಗುವುದು ಎಂದೂ ಅವರಿಗೆ ಧೈರ್ಯ ತುಂಬಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೂಡಿಗೆರೆ ತಾಲೂಕಿನ ಕಳಸ, ಬಣಕಲ್ ಮತ್ತು ಕೊಟ್ಟಿಗೆಹಾರ ಹೋಬಳಿಗಳಲ್ಲಿ ಅತಿವೃಷ್ಠಿಯಿಂದ ರೈತರಿಗೆ ದೊಡ್ಡ ಪ್ರಮಾಣದ ನಷ್ಟವಾಗಿದೆ. ಕಾಫಿ ಮತ್ತು ಅಡಿಕೆ ತೋಟಗಳು ನೆಲ ಸಮವಾಗಿವೆ. ಇವುಗಳಿಗೆ ಸರ್ಕಾರ ಸೂಕ್ತ ಪರಿಹಾರ ನೀಡಲಿದೆ ಎಂದರು.

ಕಳೆದ ಬಾರಿ ಅತಿವೃಷ್ಠಿಯಿಂದಾಗಿ ಕೊಡಗಿನಲ್ಲಾದ ನಷ್ಟಕ್ಕಿಂತಲೂ ಮೂಡಿಗೆರೆ ತಾಲೂಕಿನಲ್ಲಿ ಹೆಚ್ಚಿನ ಪ್ರಮಾಣದ ನಷ್ಟವಾಗಿತ್ತು. ಇದರ ವಿವರವನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿ ರೈತರಿಗೆ, ಸಾರ್ವಜನಿಕರಿಗೆ ನೆಮ್ಮದಿಯ ಹಾಗೂ ರಕ್ಷಣೆಯ ಬದುಕು ನೀಡುವ ಪ್ರಯತ್ನ ಮಾಡುತ್ತೇವೆ. ಅತಿವೃಷ್ಠಿಯಾದಂತಹ ಪ್ರದೇಶಗಳಲ್ಲಿರುವ ಜನರ ಮನೆಗಳನ್ನು ಸ್ಥಳಾಂತರಿಸಬೇಕು ಎಂದು ಬೇಡಿಕೆ ಇಟ್ಟಿದ್ದಾರೆ.

ಇಂತಹವರಿಗೆ ಬೇರೆಡೆ ಬಡಾವಣೆಗಳನ್ನು ಮಾಡಿ ಮನೆಗಳನ್ನು ಕಟ್ಟಿಕೊಡಲಾಗುತ್ತದೆ ಹಾಗೂ ಸಂತ್ರಸ್ತರಿಗೆ ಮಾಡಿಕೊಡಲಾದ ಬಾಡಿಗೆ ಮನೆಗಳಿಗೆ ರೂ. 5,೦೦೦ ಕ್ಕಿಂತಲೂ ಹೆಚ್ಚಿನ ಮೊತ್ತವನ್ನು ಸರ್ಕಾರ ನೀಡುತ್ತದೆ. ಅಲ್ಲಿಯವರೆಗೂ ತಾತ್ಕಾಲಿಕವಾಗಿ ಶೆಡ್‌ಗಳನ್ನು ನಿರ್ಮಾಣ ಮಾಡಿಕೊಡಲಾಗುತ್ತದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿಯ ಹರವಿಕೆರೆ, ಹಳ್ಳಿಕೆರೆ, ಚೆನ್ನನಹಡ್ಲು ಭಾಗದಲ್ಲಿ ಮಳೆಯಿಂದ ಹಾನಿಗೊಳಗಾದ ವಿವಿಧ ಪ್ರದೇಶಗಳಿಗೆ ಉಡುಪಿ -ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಚಿಕ್ಕಮಗಳೂರಿನಲ್ಲಿ ಮಳೆಹಾನಿ ಪ್ರದೇಶ ವೀಕ್ಷಿಸಿದ ಸಂಸದೆ ಶೋಭಾ ಕರಂದ್ಲಾಜೆ..

ಬಳಿಕ ಸ್ಥಳೀಯ ಸಂತ್ರಸ್ತರೊಂದಿಗೆ ಚರ್ಚೆ ಮಾಡಿ ಸರ್ಕಾರದ ವತಿಯಿಂದ ಎಲ್ಲಾ ರೀತಿ ಅನುಕೂಲ ಮಾಡಿಕೊಡಲಾಗುವುದು ಎಂದೂ ಅವರಿಗೆ ಧೈರ್ಯ ತುಂಬಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೂಡಿಗೆರೆ ತಾಲೂಕಿನ ಕಳಸ, ಬಣಕಲ್ ಮತ್ತು ಕೊಟ್ಟಿಗೆಹಾರ ಹೋಬಳಿಗಳಲ್ಲಿ ಅತಿವೃಷ್ಠಿಯಿಂದ ರೈತರಿಗೆ ದೊಡ್ಡ ಪ್ರಮಾಣದ ನಷ್ಟವಾಗಿದೆ. ಕಾಫಿ ಮತ್ತು ಅಡಿಕೆ ತೋಟಗಳು ನೆಲ ಸಮವಾಗಿವೆ. ಇವುಗಳಿಗೆ ಸರ್ಕಾರ ಸೂಕ್ತ ಪರಿಹಾರ ನೀಡಲಿದೆ ಎಂದರು.

ಕಳೆದ ಬಾರಿ ಅತಿವೃಷ್ಠಿಯಿಂದಾಗಿ ಕೊಡಗಿನಲ್ಲಾದ ನಷ್ಟಕ್ಕಿಂತಲೂ ಮೂಡಿಗೆರೆ ತಾಲೂಕಿನಲ್ಲಿ ಹೆಚ್ಚಿನ ಪ್ರಮಾಣದ ನಷ್ಟವಾಗಿತ್ತು. ಇದರ ವಿವರವನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿ ರೈತರಿಗೆ, ಸಾರ್ವಜನಿಕರಿಗೆ ನೆಮ್ಮದಿಯ ಹಾಗೂ ರಕ್ಷಣೆಯ ಬದುಕು ನೀಡುವ ಪ್ರಯತ್ನ ಮಾಡುತ್ತೇವೆ. ಅತಿವೃಷ್ಠಿಯಾದಂತಹ ಪ್ರದೇಶಗಳಲ್ಲಿರುವ ಜನರ ಮನೆಗಳನ್ನು ಸ್ಥಳಾಂತರಿಸಬೇಕು ಎಂದು ಬೇಡಿಕೆ ಇಟ್ಟಿದ್ದಾರೆ.

ಇಂತಹವರಿಗೆ ಬೇರೆಡೆ ಬಡಾವಣೆಗಳನ್ನು ಮಾಡಿ ಮನೆಗಳನ್ನು ಕಟ್ಟಿಕೊಡಲಾಗುತ್ತದೆ ಹಾಗೂ ಸಂತ್ರಸ್ತರಿಗೆ ಮಾಡಿಕೊಡಲಾದ ಬಾಡಿಗೆ ಮನೆಗಳಿಗೆ ರೂ. 5,೦೦೦ ಕ್ಕಿಂತಲೂ ಹೆಚ್ಚಿನ ಮೊತ್ತವನ್ನು ಸರ್ಕಾರ ನೀಡುತ್ತದೆ. ಅಲ್ಲಿಯವರೆಗೂ ತಾತ್ಕಾಲಿಕವಾಗಿ ಶೆಡ್‌ಗಳನ್ನು ನಿರ್ಮಾಣ ಮಾಡಿಕೊಡಲಾಗುತ್ತದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

Intro:Kn_Ckm_03_Mp Shobha visit_av_7202347Body:ಚಿಕ್ಕಮಗಳೂರು :-

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಾಳೂರು ಹೋಬಳಿಯ ಹರವಿಕೆರೆ, ಹಳ್ಳಿಕೆರೆ, ಚೆನ್ನನಹಡ್ಲು ಭಾಗದಲ್ಲಿ ಮಳೆಯಿಂದಾ ಹಾನಿಗೊಳಗಾದ ವಿವಿಧ ಪ್ರದೇಶಗಳಿಗೆ ಉಡುಪಿ - ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭ ಕರಂದ್ಲಾಜ್ಞೆ ಭೇಟಿ ನೀಡಿ ಸ್ಥಳ ವೀಕ್ಷಣೆ ಮಾಡಿದರು.ನಂತರ ಸ್ಥಳೀಯ ಸಂತ್ರಸ್ಥರೊಂದಿಗೆ ಚರ್ಚೆ ಮಾಡಿ ಸರ್ಕಾರದ ವತಿಯಿಂದಾ ಎಲ್ಲಾ ರೀತಿ ಅನುಕೂಲ ಮಾಡಿಕೊಡಲಾಗುವುದು ಎಂದೂ ಅವರಿಗೆ ಧೈರ್ಯ ತುಂಬಿದರು.ನಂತರ ಮಾತನಾಡಿದ ಇವರು ಮೂಡಿಗೆರೆ ತಾಲ್ಲೂಕಿನ ಕಳಸ, ಬಣಕಲ್ ಮತ್ತು ಕೊಟ್ಟಿಗೆಹಾರ ಹೋಬಳಿಗಳಲ್ಲಿ ಅತಿವೃಷ್ಠಿಯಿಂದ ರೈತರಿಗೆ ದೊಡ್ಡ ಪ್ರಮಾಣದ ನಷ್ಟವಾಗಿದೆ. ಕಾಫಿ ಮತ್ತು ಅಡಿಕೆ ತೋಟಗಳು ನೆಲ ಸಮವಾಗಿದ್ದು, ಇವುಗಳಿಗೆ ಸರ್ಕಾರ ಸೂಕ್ತ ಪರಿಹಾರ ನೀಡಲಿದೆ ಎಂದು ಹೇಳಿದರು. ಕಳೆದ ಬಾರಿ ಅತೀವೃಷ್ಠಿಯಿಂದಾಗಿ ಕೊಡಗಿನಲ್ಲಾದ ನಷ್ಟಕ್ಕಿಂತಲೂ ಮೂಡಿಗೆರೆ ತಾಲ್ಲೂಕಿನಲ್ಲಿ ಹೆಚ್ಚಿನ ಪ್ರಮಾಣದ ನಷ್ಟವಾಗಿದ್ದು, ಇದರ ವಿವರವನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿ ರೈತರಿಗೆ, ಸಾರ್ವಜನಿಕರಿಗೆ ನೆಮ್ಮದಿಯ ಹಾಗೂ ರಕ್ಷಣೆಯ ಬದುಕು ನೀಡುವ ಪ್ರಯತ್ನ ಮಾಡುತ್ತೇವೆ. ಅತಿವೃಷ್ಠಿಯಾದಂತಹ ಪ್ರದೇಶಗಳಲ್ಲಿರುವ ಜನರು ಮನೆಗಳನ್ನು ಸ್ಥಳಾಂತರಿಸಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಇಂತಹವರಿಗೆ ಬೇರೆಡೆ ಬಡಾವಣೆಗಳನ್ನು ಮಾಡಿ ಮನೆಗಳನ್ನು ಕಟ್ಟಿಕೊಡಲಾಗುತ್ತದೆ ಹಾಗೂ ಸಂತ್ರಸ್ತರಿಗೆ ಮಾಡಿಕೊಡಲಾದ ಬಾಡಿಗೆ ಮನೆಗಳಿಗೆ ರೂ.5,೦೦೦ ಕ್ಕಿಂತಲೂ ಹೆಚ್ಚಿನ ಮೊತ್ತವನ್ನು ಸರ್ಕಾರ ನೀಡುತ್ತದೆ. ಅಲ್ಲಿಯವರೆಗೂ ತಾತ್ಕಾಲಿಕವಾಗಿ ಶೆಡ್‌ಗಳನ್ನು ನಿರ್ಮಾಣ ಮಾಡಿಕೊಡಲಾಗುತ್ತದೆ ಎಂದು ಮೂಡಿಗೆರೆಯಲ್ಲಿ ಸಂಸದೆ ಶೋಭ ಕರಂದ್ಲಾಜ್ಞೆ ಹೇಳಿದರು....

byte:-1 ಶೋಭ ಕರಂದ್ಲಾಜ್ಞೆ.....ಸಂಸದೆ.

Conclusion:ರಾಜಕುಮಾರ್.....
ಈ ಟಿವಿ ಭಾರತ್....
ಚಿಕ್ಕಮಗಳೂರು.....
ETV Bharat Logo

Copyright © 2024 Ushodaya Enterprises Pvt. Ltd., All Rights Reserved.