ETV Bharat / state

ಸಿದ್ದರಾಮಯ್ಯ ಅಂದ್ರೆನೇ ಸುಳ್ಳು: ಶೋಭಾ ಕರಂದ್ಲಾಜೆ

author img

By

Published : Nov 2, 2019, 5:20 PM IST

ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ, ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯನವರು ಕೇಂದ್ರ ಸರ್ಕಾರದ ಯೋಜನೆಗಳನ್ನು ತಮ್ಮ ಯೋಜನೆಗಳೆಂದು ಹೇಳಿ ಓಡಾಡಿದ್ದು ಬಿಟ್ಟರೆ ಅವರ ಸಾಧನೆ ಏನೂ ಇಲ್ಲ ಎಂದು ವ್ಯಂಗ್ಯವಾಡಿದ್ದಾರೆ.

Shobha karandlaje

ಚಿಕ್ಕಮಗಳೂರು: ಅನ್ನಭಾಗ್ಯ ಯೋಜನೆ ಕೇಂದ್ರ ಸರ್ಕಾರದ ಯೋಜನೆಯಾಗಿದ್ದು, ಸಿದ್ದರಾಮಯ್ಯನವರು ಯೋಜನೆ ನನ್ನದು ಎಂದು ಸುಳ್ಳು ಹೇಳಿಕೊಂಡು ಓಡಾಡಿದ್ದಾರೆ. ಅವರದ್ದು ಸ್ವಂತ ಸಾಧನೆ ಏನೂ ಇಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ, ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ಸಂಸದೆ ಶೋಭಾ ಕರಂದ್ಲಾಜೆ

ನಗರದಲ್ಲಿ ಮಾಧ್ಯಮಗಳೊಂದೊಗೆ ಮಾತನಾಡಿದ ಅವರು, ಅನ್ನಭಾಗ್ಯ ಯೋಜನೆ ಕೇಂದ್ರ ಸರ್ಕಾರದ ಯೋಜನೆಯಾಗಿದೆ. ಆದರೆ ಸಿದ್ದರಾಮಯ್ಯನವರು ತಮ್ಮ ಯೋಜನೆ ಎಂದು ಹೇಳಿಕೊಂಡು ಓಡಾಡಿದ್ದಾರೆ. ಸಿದ್ದರಾಮಯ್ಯ ಅಂದ್ರೆನೇ ಸುಳ್ಳು. ಎಲ್ಲಾ ಯೋಜನೆಗಳಿಗೂ ಕೇಂದ್ರ ಸರ್ಕಾರ ಹಣ ನೀಡಿದೆ. ಹಾಗಿದ್ದ ಮೇಲೆ ಸಿದ್ದರಾಮಯ್ಯ ಅವರ ಸ್ವಂತ ಸಾಧನೆ ಏನು ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯನವರನ್ನು ರಾಜಧಾನಿ ನೆನಪಿಟ್ಟುಕೊಳ್ಳಲು ಅವರು ಮಾಡಿರುವ ಒಂದು ಸಾಧನೆಯನ್ನಾದರೂ ಹೇಳಿ ನೋಡೋಣ. ಒಂದು ಜನಾಂಗಕ್ಕೆ ಒಂದು ಸಾಧನೆ ಹೇಳಲಿ. ಸಿದ್ದರಾಮಯ್ಯ ಭ್ರಮೆಯಲ್ಲಿದ್ದು, ಕರ್ನಾಟಕದಲ್ಲಿ ಕಾಂಗ್ರೆಸ್ ಅಧಃಪತನದಲ್ಲಿದೆ. ಇದಕ್ಕೆ ಸಿದ್ದರಾಮಯ್ಯ ಕೊಡುಗೆ ಅಪಾರವಾಗಿದ್ದು, ನಿಜಕ್ಕೂ ಅವರಿಗೆ ಅಭಿನಂದನೆ ಸಲ್ಲಿಸಬೇಕೆಂದು ವ್ಯಂಗ್ಯವಾಡಿದ್ರು.

ಸಿದ್ದರಾಮಯ್ಯ ಬ್ಲಾಕ್ ಮೇಲ್ ಮಾಡಿ ವಿರೋಧ ಪಕ್ಷದ ಸ್ಥಾನ ಗಿಟ್ಟಿಕೊಂಡಿದ್ದು, ಏನೋ ಮಾತನಾಡಬೇಕು ಅಂತಾ ಸುಮ್ಮನೆ ಮಾತನಾಡುತ್ತಾರೆ. ಹಣಕಾಸಿನ ಪರಿಸ್ಥಿತಿ ಹದಗೆಡಿಸಿ ಹೋಗಿದ್ದಾರೆ ಎಂದು ದೂರಿದರು.

ಇನ್ನು ಉಪ ಚುನಾವಣೆ ಕುರಿತು ಮಾತನಾಡಿ, ಸುಮಲತಾ ಅವರಿಗೆ ಬಿಜೆಪಿಯಿಂದ ನಾವು ಬೆಂಬಲ ಕೊಟ್ಟಿದ್ದೇವೆ. ಸುಮಲತಾ ಬೆಂಬಲ ಕೊಡುತ್ತಾರೆ ಎನ್ನುವ ವಿಶ್ವಾಸವಿದ್ದು, ನಮ್ಮನ್ನು ಬೆಂಬಲಿಸಿ ಎಂದು ನಾವು ಒತ್ತಾಯ ಮಾಡೋ ಪ್ರಶ್ನೆಯೇ ಇಲ್ಲ. ಏಕೆಂದರೆ ಅವರೇ ಕೇಂದ್ರ, ರಾಜ್ಯ ಸರ್ಕಾರಕ್ಕೆ ನನ್ನ ಬೆಂಬಲ ಅಂತ ಹೇಳಿದ್ದಾರೆ. ಈಗ ಏನು ಬದಲಾವಣೆ ಆಗಿದ್ಯೋ ಗೊತ್ತಿಲ್ಲ ಎಂದರು.

ಚಿಕ್ಕಮಗಳೂರು: ಅನ್ನಭಾಗ್ಯ ಯೋಜನೆ ಕೇಂದ್ರ ಸರ್ಕಾರದ ಯೋಜನೆಯಾಗಿದ್ದು, ಸಿದ್ದರಾಮಯ್ಯನವರು ಯೋಜನೆ ನನ್ನದು ಎಂದು ಸುಳ್ಳು ಹೇಳಿಕೊಂಡು ಓಡಾಡಿದ್ದಾರೆ. ಅವರದ್ದು ಸ್ವಂತ ಸಾಧನೆ ಏನೂ ಇಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ, ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ಸಂಸದೆ ಶೋಭಾ ಕರಂದ್ಲಾಜೆ

ನಗರದಲ್ಲಿ ಮಾಧ್ಯಮಗಳೊಂದೊಗೆ ಮಾತನಾಡಿದ ಅವರು, ಅನ್ನಭಾಗ್ಯ ಯೋಜನೆ ಕೇಂದ್ರ ಸರ್ಕಾರದ ಯೋಜನೆಯಾಗಿದೆ. ಆದರೆ ಸಿದ್ದರಾಮಯ್ಯನವರು ತಮ್ಮ ಯೋಜನೆ ಎಂದು ಹೇಳಿಕೊಂಡು ಓಡಾಡಿದ್ದಾರೆ. ಸಿದ್ದರಾಮಯ್ಯ ಅಂದ್ರೆನೇ ಸುಳ್ಳು. ಎಲ್ಲಾ ಯೋಜನೆಗಳಿಗೂ ಕೇಂದ್ರ ಸರ್ಕಾರ ಹಣ ನೀಡಿದೆ. ಹಾಗಿದ್ದ ಮೇಲೆ ಸಿದ್ದರಾಮಯ್ಯ ಅವರ ಸ್ವಂತ ಸಾಧನೆ ಏನು ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯನವರನ್ನು ರಾಜಧಾನಿ ನೆನಪಿಟ್ಟುಕೊಳ್ಳಲು ಅವರು ಮಾಡಿರುವ ಒಂದು ಸಾಧನೆಯನ್ನಾದರೂ ಹೇಳಿ ನೋಡೋಣ. ಒಂದು ಜನಾಂಗಕ್ಕೆ ಒಂದು ಸಾಧನೆ ಹೇಳಲಿ. ಸಿದ್ದರಾಮಯ್ಯ ಭ್ರಮೆಯಲ್ಲಿದ್ದು, ಕರ್ನಾಟಕದಲ್ಲಿ ಕಾಂಗ್ರೆಸ್ ಅಧಃಪತನದಲ್ಲಿದೆ. ಇದಕ್ಕೆ ಸಿದ್ದರಾಮಯ್ಯ ಕೊಡುಗೆ ಅಪಾರವಾಗಿದ್ದು, ನಿಜಕ್ಕೂ ಅವರಿಗೆ ಅಭಿನಂದನೆ ಸಲ್ಲಿಸಬೇಕೆಂದು ವ್ಯಂಗ್ಯವಾಡಿದ್ರು.

ಸಿದ್ದರಾಮಯ್ಯ ಬ್ಲಾಕ್ ಮೇಲ್ ಮಾಡಿ ವಿರೋಧ ಪಕ್ಷದ ಸ್ಥಾನ ಗಿಟ್ಟಿಕೊಂಡಿದ್ದು, ಏನೋ ಮಾತನಾಡಬೇಕು ಅಂತಾ ಸುಮ್ಮನೆ ಮಾತನಾಡುತ್ತಾರೆ. ಹಣಕಾಸಿನ ಪರಿಸ್ಥಿತಿ ಹದಗೆಡಿಸಿ ಹೋಗಿದ್ದಾರೆ ಎಂದು ದೂರಿದರು.

ಇನ್ನು ಉಪ ಚುನಾವಣೆ ಕುರಿತು ಮಾತನಾಡಿ, ಸುಮಲತಾ ಅವರಿಗೆ ಬಿಜೆಪಿಯಿಂದ ನಾವು ಬೆಂಬಲ ಕೊಟ್ಟಿದ್ದೇವೆ. ಸುಮಲತಾ ಬೆಂಬಲ ಕೊಡುತ್ತಾರೆ ಎನ್ನುವ ವಿಶ್ವಾಸವಿದ್ದು, ನಮ್ಮನ್ನು ಬೆಂಬಲಿಸಿ ಎಂದು ನಾವು ಒತ್ತಾಯ ಮಾಡೋ ಪ್ರಶ್ನೆಯೇ ಇಲ್ಲ. ಏಕೆಂದರೆ ಅವರೇ ಕೇಂದ್ರ, ರಾಜ್ಯ ಸರ್ಕಾರಕ್ಕೆ ನನ್ನ ಬೆಂಬಲ ಅಂತ ಹೇಳಿದ್ದಾರೆ. ಈಗ ಏನು ಬದಲಾವಣೆ ಆಗಿದ್ಯೋ ಗೊತ್ತಿಲ್ಲ ಎಂದರು.

Intro:Kn_Ckm_01_Mp Shobha_av_7202347Body:ಚಿಕ್ಕಮಗಳೂರು :-

ಚಿಕ್ಕಮಗಳೂರಿನಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಅವರು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ. ಸಿದ್ದರಾಮಯ್ಯ ಅಂದರೇ ಸುಳ್ಳು ಎಂದೂ ಲೇವಡಿ ಮಾಡಿದ್ದು ಅನ್ನ ಭಾಗ್ಯ ಯೋಜನೆ ನನ್ನದು ಎಂದೂ ಸುಳ್ಳು ಹೇಳಿಕೊಂಡು ಓಡಾಡುತ್ತಿದ್ದಾರೆ. ಅದು ಕೇಂದ್ರ ಸರ್ಕಾರದ ಯೋಜನೆಯಾಗಿದ್ದು ಕೇಂದ್ರದ ಯೋಜನೆಯನ್ನು ನನ್ನದು ಅಂತಾರೆ ಅವರದು ಸ್ವಂತ ಸಾಧನೆ ಏನು ಅಂತಾ ಶೋಭಾ ಪ್ರಶ್ನೆ ಮಾಡಿದರು. ಒಂದು ಜನಾಂಗಕ್ಕೆ ಒಂದು ಸಾಧನೆ ಹೇಳಲಿ. ಸಿದ್ದರಾಮಯ್ಯ ಭ್ರಮಯಲ್ಲಿದ್ದು ಕರ್ನಾಟಕದಲ್ಲಿ ಕಾಂಗ್ರೆಸ್ ಅಧಃ ಪತನದಲ್ಲಿದೆ ಕಾಂಗ್ರೆಸ್ ಅಧಃಪತನಕ್ಕೆ ಸಿದ್ದರಾಮಯ್ಯ ಕೊಡುಗೆ ಅಪಾರವಾಗಿದ್ದು ನಿಜಕ್ಕೂ ಅವರಿಗೆ ಅಭಿನಂದನೆ ಸಲ್ಲಿಸಬೇಕು ಎಂದೂ ಹೇಳಿದರು. ಸಿದ್ದರಾಮಯ್ಯ ಬ್ಲಾಕ್ ಮೇಲ್ ಮಾಡಿ ವಿರೋಧ ಪಕ್ಷದ ಸ್ಥಾನ ಗಿಟ್ಟಿಸಿದ್ದಾರೆ. ಏನೋ ಮಾಡಿ ವಿರೋಧ ಪಕ್ಷದ ಸ್ಥಾನ ಗಿಟ್ಟಿಸಿದ್ದಾರೆ ಏನೋ ಮಾತನಾಡಬೇಕು ಅಂತಾ ಸುಮ್ಮನೇ ಮಾತನಾಡುತ್ತಾರೆ. ಹಣಕಾಸಿನ ಪರಿಸ್ಥಿತಿ ಹದಗೆಡಿಸಿ ಹೋಗಿದ್ದಾರೆ ಜಾತಿ ಜಾತಿಯನ್ನು ಹೊಡೆದಿದ್ದಾರೆ ಇದು ಸಿದ್ದರಾಮಯ್ಯನವರ ಕೆಲಸವಾಗಿದ್ದು ಹಿಂದುಳಿದ ವರ್ಗ, ಮುಂದುವರಿದ ವರ್ಗವನ್ನು ಹೊಡೆಯುವುದು ಜಾತಿ ಸಮೀಕ್ಷೆಯನ್ನು ನಡೆಸುವುದು. ಧರ್ಮ ಧರ್ಮವನ್ನು ಹೊಡೆಯುವುದು ಟಿಪ್ಪು ಜಯಂತಿ ಮಾಡುವುದು - ಸಿದ್ದರಾಮಯ್ಯ ಕೆಲಸವಾಗಿದೆ. ಮಕ್ಕಳ ಶಾಲಾ ಪ್ರವಾಸದಲ್ಲಿ ಜಾತಿ ನೋಡುವುದು ಇದೆಲ್ಲ ಸಿದ್ದರಾಮಯ್ಯ ನವರ ಮಹಾ ಸಾಧನೆಗಳಾಗಿದ್ದು ದಯಮಾಡಿ ಕಾರಿನಿಂದಿಳಿದು ಮಾತನಾಡಲಿ ಹಳ್ಳಿಗಳಲ್ಲಿ ಜನರ ಸಮಸ್ಯೆ ಆಲಿಸಲಿ.ಸಿದ್ದರಾಮಯ್ಯ ವಿರುದ್ದ ಚಾಟಿ ಬೀಸಿದರು. ಇನ್ನು ಬೈ ಎಲೆಕ್ಷನ್ ವಿಚಾರ ಮಾತನಾಡಿ ಸುಮಲತಾ ಅವರಿಗೆ ಬಿಜೆಪಿಯಿಂದ ನಾವು ಬೆಂಬಲ ಕೊಟ್ಟಿದ್ದೇವೆ. ಸುಮಲತಾ ಬೆಂಬಲ ಕೊಡಲೇ ಬೇಕು ಯಾಕಂದರೇ ನಾವು ಬೆಂಬಲ ಕೊಟ್ಟಿದ್ವಲ್ಲ ಅದಕ್ಕೆ ಬೆಂಬಲ ಕೊಡುತ್ತಾರೆ ಅನ್ನುವ ವಿಶ್ವಾಸವಿದ್ದು ನಮ್ಮನ್ನು ಬೆಂಬಲಿಸಿ ಎಂದು ನಾವು ಒತ್ತಾಯ ಮಾಡೋ ಪ್ರಶ್ನೆಯೇ ಇಲ್ಲ. ಏಕೆಂದರೇ ಅವರೇ ಕೇಂದ್ರ, ರಾಜ್ಯ ಸರ್ಕಾರಕ್ಕೆ ನನ್ನ ಬೆಂಬಲ ಅಂತ ಹೇಳಿದ್ದು ಈಗ ಏನು ಬದಲಾವಣೆ ಆಗಿದ್ಯೋ ಗೊತ್ತಿಲ್ಲ ಎಂದೂ ಚಿಕ್ಕಮಗಳೂರಿನಲ್ಲಿ ಸಂಸದೆ ಶೋಭ ಕರಂದ್ಲಾಜ್ಞೆ ಹೇಳಿದರು....

Conclusion:ರಾಜಕುಮಾರ್.....
ಈ ಟಿವಿ ಭಾರತ್....
ಚಿಕ್ಕಮಗಳೂರು....
ETV Bharat Logo

Copyright © 2024 Ushodaya Enterprises Pvt. Ltd., All Rights Reserved.