ETV Bharat / state

ಕಾಫಿ ದೊರೆಗೆ ಮಲೆನಾಡಿನಲ್ಲಿ ಸಾರ್ವಜನಿಕ ಶ್ರದ್ಧಾಂಜಲಿ...

ಮಲೆನಾಡು ಭಾಗದ ಹಿರಿಯ ಉದ್ಯಮಿ, ಚಿಕ್ಕಮಗಳೂರಿನ ಕಾಫಿಯನ್ನು ವಿಶ್ವಕ್ಕೆ ಪರಿಚಯಿಸಿದ ಸಿದ್ಧಾರ್ಥ್​ ಹೆಗ್ಡೆ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಚಿಕ್ಕಮಗಳೂರಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಒಂದು ನಿಮಿಷಗಳ ಕಾಲ ಮೌನಚರಣೆ ಮಾಡಲಾಯಿತು.

author img

By

Published : Aug 14, 2019, 1:31 PM IST

ಕಾಫಿದೊರೆಗೆ ಶ್ರದ್ಧಾಂಜಲಿ

ಚಿಕ್ಕಮಗಳೂರು: ಕೆಫೆ ಕಾಫೀ ಡೇ ಸಂಸ್ಥಾಪಕ ಸಿದ್ಧಾರ್ಥ್​ ಹೆಗ್ಡೆ ಅವರು ಸಾವನ್ನಪ್ಪಿದ್ದ ಹಿನ್ನೆಲೆಯಲ್ಲಿ, ನಗರದ ವಿಜಯಪುರದಲ್ಲಿ ಜಿಲ್ಲಾ ಒಕ್ಕಲಿಗರ ಸಂಘದಿಂದ ಭಾವ ಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಸುಮಾರು ಎರಡು ಸಾವಿರಕ್ಕೂ ಅಧಿಕ ಜನರು ಭಾಗವಹಿಸಿದ್ದರು. ಕಾಫೀ ಡೇಯಲ್ಲಿ ಕಾರ್ಯ ನಿರ್ವಹಿಸುವ ಕಾರ್ಮಿಕರು, ಅಂಧ ಮಕ್ಕಳು, ಗಣ್ಯರು, ಹಿತೈಷಿಗಳು, ಸ್ನೇಹಿತರು ಸೇರಿದಂತೆ ರಾಜಕೀಯ ನಾಯಕರು ಭಾಗವಹಿಸಿ ಸಿದ್ಧಾರ್ಥ್​ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಈ ವೇಳೆ ಒಂದು ನಿಮಿಷಗಳ ಕಾಲ ಮೌನಾಚರಣೆ ಮಾಡಲಾಯಿತು.

ಮಲೆನಾಡಿನಲ್ಲಿ ಸಾರ್ವಜನಿಕ ಶ್ರದ್ಧಾಂಜಲಿ

ಕಾರ್ಯಕ್ರಮದಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ವಿಧಾನ ಪರಿಷತ್​ ಉಪ ಸಭಾಪತಿ ಎಸ್ ಎಲ್ ಧರ್ಮೇಗೌಡ, ಶಾಸಕ ಸಿ ಟಿ ರವಿ, ಕಾಂಗ್ರೆಸ್ ಮುಖಂಡ ಬಿ ಎಲ್ ಶಂಕರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಚಿಕ್ಕಮಗಳೂರು: ಕೆಫೆ ಕಾಫೀ ಡೇ ಸಂಸ್ಥಾಪಕ ಸಿದ್ಧಾರ್ಥ್​ ಹೆಗ್ಡೆ ಅವರು ಸಾವನ್ನಪ್ಪಿದ್ದ ಹಿನ್ನೆಲೆಯಲ್ಲಿ, ನಗರದ ವಿಜಯಪುರದಲ್ಲಿ ಜಿಲ್ಲಾ ಒಕ್ಕಲಿಗರ ಸಂಘದಿಂದ ಭಾವ ಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಸುಮಾರು ಎರಡು ಸಾವಿರಕ್ಕೂ ಅಧಿಕ ಜನರು ಭಾಗವಹಿಸಿದ್ದರು. ಕಾಫೀ ಡೇಯಲ್ಲಿ ಕಾರ್ಯ ನಿರ್ವಹಿಸುವ ಕಾರ್ಮಿಕರು, ಅಂಧ ಮಕ್ಕಳು, ಗಣ್ಯರು, ಹಿತೈಷಿಗಳು, ಸ್ನೇಹಿತರು ಸೇರಿದಂತೆ ರಾಜಕೀಯ ನಾಯಕರು ಭಾಗವಹಿಸಿ ಸಿದ್ಧಾರ್ಥ್​ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಈ ವೇಳೆ ಒಂದು ನಿಮಿಷಗಳ ಕಾಲ ಮೌನಾಚರಣೆ ಮಾಡಲಾಯಿತು.

ಮಲೆನಾಡಿನಲ್ಲಿ ಸಾರ್ವಜನಿಕ ಶ್ರದ್ಧಾಂಜಲಿ

ಕಾರ್ಯಕ್ರಮದಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ವಿಧಾನ ಪರಿಷತ್​ ಉಪ ಸಭಾಪತಿ ಎಸ್ ಎಲ್ ಧರ್ಮೇಗೌಡ, ಶಾಸಕ ಸಿ ಟಿ ರವಿ, ಕಾಂಗ್ರೆಸ್ ಮುಖಂಡ ಬಿ ಎಲ್ ಶಂಕರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Intro:Kn_Ckm_04_Siddartha ge namana_av_7202347Body:

ಚಿಕ್ಕಮಗಳೂರು :-

ಕಾಫೀ ಡೇ ಸಂಸ್ಥಾಪಕ, ಮಲೆನಾಡು ಭಾಗದ ಹಿರಿಯ ಉದ್ಯಮಿ ಚಿಕ್ಕಮಗಳೂರಿನ ಕಾಫೀಯನ್ನು ವಿಶ್ವಕ್ಕೆ ಪರಿಚಯಿಸಿದ ಸಿದ್ದಾರ್ಥ ಹೆಗ್ಡೆ ಅವರು ಸಾವನ್ನಪ್ಪಿದ್ದ ಹಿನ್ನಲೆ ಚಿಕ್ಕಮಗಳೂರು ನಗರದಲ್ಲಿ ಜಿಲ್ಲಾ ಒಕ್ಕಲಿಗರ ಸಂಘದಿಂದಾ ವಿಜಯಪುರದಲ್ಲಿರುವ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಅವರಿಗೆ ಭಾವ ಪೂರ್ಣ ಶ್ರದ್ದಾಂಜಲಿಯನ್ನು ಸಲ್ಲಿಸಸಲಾಯಿತು.ಈ ಕಾರ್ಯಕ್ರಮದಲ್ಲಿ ಸುಮಾರು ಎರಡೂ ಸಾವಿರಕ್ಕೂ ಅಧಿಕ ಜನರು ಭಾಗವಹಿಸಿದ್ದು ಕಾಫೀ ಡೇಯಲ್ಲಿ ಕಾರ್ಯ ನಿರ್ವಹಿಸುವ ಕಾರ್ಮಿಕರು, ಅಂಧ ಮಕ್ಕಳು, ಹಾಗೂ ಗಣ್ಯರು,ಅವರ ಹಿತೈಷಿಗಳು,ಸ್ನೇಹಿತರು ಸೇರಿದಂತೆ ರಾಜಕೀಯ ಗಣ್ಯರುಗಳು ಭಾಗವಹಿಸಿ ಸಿದ್ದಾರ್ಥ ಅವರಿಗೆ ಶ್ರದ್ದಾಂಜಲಿಯನ್ನು ಸಲ್ಲಿಸಿದರು. ಪ್ರತಿಯೊಬ್ಬ ರಾಜಕೀಯ ಗಣ್ಯರು ಅವರ ಭಾವಚಿತ್ರದ ಬಳಿ ಹೋಗಿ ಪುಷ್ವರ್ಚನೆ ಮಾಡುವುದರ ಮೂಲಕ ಅವರ ಚಿತ್ರಕ್ಕೆ ಕೈ ಮುಗಿದ್ದು ಶ್ರದ್ದಾಂಜಲಿಯನ್ನು ಸಲ್ಲಿಸಿದ್ದು ನಂತರ ಒಂದು ನಿಮಿಷಗಳ ಕಾಲ ಮೌನಚರಣೆಯನ್ನು ಮಾಡಲಾಯಿತು.ಈ ಕಾರ್ಯಕ್ರಮದಲ್ಲಿ ಸಂಸದೆ ಶೋಭ ಕರಂದ್ಲಾಜ್ಞೆ, ಉಪ ಸಭಾಪತಿ ಎಸ್ ಎಲ್ ಧರ್ಮೇಗೌಡ, ಶಾಸಕ ಸಿ ಟಿ ರವಿ, ಕಾಂಗ್ರೇಸ್ ಮುಖಂಡ ಬಿ ಎಲ್ ಶಂಕರ್ ಸೇರಿದಂತೆ ಹಲವಾರು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು..

Conclusion:ರಾಜಕುಮಾರ್....
ಈ ಟಿವಿ ಭಾರತ್...
ಚಿಕ್ಕಮಗಳೂರು...
ETV Bharat Logo

Copyright © 2024 Ushodaya Enterprises Pvt. Ltd., All Rights Reserved.