ETV Bharat / state

ಬಿಜೆಪಿಯ ಅಧಿಕೃತ ಅಭ್ಯರ್ಥಿಯಿದ್ರೂ ತಮ್ಮನನ್ನ ನಿಲ್ಸಿದ್ದಾರೆ: ರಮೇಶ್ ಜಾರಕಿಹೊಳಿ ವಿರುದ್ಧ ಸಿದ್ದರಾಮಯ್ಯ ಕಿಡಿ

author img

By

Published : Dec 3, 2021, 2:20 PM IST

Updated : Dec 3, 2021, 3:39 PM IST

ತಮ್ಮ ಪಕ್ಷದ ವಿರುದ್ಧವಾಗಿಯೇ ರಮೇಶ್ ಜಾರಕಿಹೊಳಿ ಅಭ್ಯರ್ಥಿಯನ್ನ ನಿಲ್ಲಿಸಿದ್ದಾರೆ. ಇಂತವರಿಗೆ ಕಾಂಗ್ರೆಸ್​ ಬಗ್ಗೆ ಹೇಳಿಕೆ ನೀಡುವ ಯಾವ ನೈತಿಕತೆ ಇದೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

siddaramaiah
ಸಿದ್ದರಾಮಯ್ಯ

ಚಿಕ್ಕಮಗಳೂರು: ಗುಂಡಾಗಳನ್ನು ಕರೆಯಿಸಿ ಕಾಂಗ್ರೆಸ್​​​ನಿಂದ ಪ್ರಚಾರ ನಡೆಸಲಾಗುತ್ತಿದೆ ಎಂಬ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆಗೆ ಚಿಕ್ಕಮಗಳೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.

ತಮ್ಮ ಪಕ್ಷದ ವಿರುದ್ಧವಾಗಿಯೇ ಅಭ್ಯರ್ಥಿಯನ್ನ ನಿಲ್ಲಿಸಿಕೊಂಡಿರೋರು ರಮೇಶ್ ಜಾರಕಿಹೊಳಿ. ಲಖನ್ ಜಾರಕಿಹೊಳಿಯನ್ನ ವಿಧಾನಪರಿಷತ್ ಚುನಾವಣೆಯಲ್ಲಿ ನಿಲ್ಲಿಸಿರೋದು ಯಾರು? ಬಿಜೆಪಿಯ ಅಧಿಕೃತ ಅಭ್ಯರ್ಥಿಯಿದ್ರೂ ತಮ್ಮ ತಮ್ಮನನ್ನ ನಿಲ್ಲಿಸಿದ್ದಾರೆ. ಈ ರೀತಿ ಹೇಳಿಕೆ ನೀಡೋಕೆ ಅವರಿಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದ್ದಾರೆ.

ಚಿಕ್ಕಮಗಳೂರಲ್ಲಿ ಮಾಧ್ಯಮದವರೊಂದಿಗೆ ಸಿದ್ದರಾಮಯ್ಯ

ಸಿಎಂ ಬದಲಾವಣೆ ಕುರಿತು ಈಶ್ವರಪ್ಪರ ಹೇಳಿಕೆ ಕುರಿತ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಈಶ್ವರಪ್ಪ ಬಾಯಿತಪ್ಪಿ ಸತ್ಯ ಹೇಳಿದ್ದಾರೆ. ಆಮೇಲೆ ಸರಿಪಡಿಸಿಕೊಳ್ಳಲು ಹೋಗುತ್ತಿದ್ದಾರೆ, ಆದರೆ ಜನರಿಗೆ ಗೊತ್ತಾಗಿದೆ ಎಂದರು.

ಇದನ್ನೂ ಓದಿ: ಲಖನ್​ಗೆ, ರಮೇಶ್​ ಜಾರಕಿಹೊಳಿ‌ ಪರೋಕ್ಷ ಬೆಂಬಲ...ಪಕ್ಷ ಗಮನಿಸುತ್ತಿದೆ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ

ಇದೇ ವೇಳೆ ಕೋವಿಡ್​ ಬಗ್ಗೆ ಮಾತನಾಡಿದ ಅವರು, ಸರ್ಕಾರ ಎರಡನೇ ಅಲೆಯಲ್ಲಿ ಸರಿಯಾದ ಸಿದ್ಧತೆಯನ್ನು ಮಾಡಿಕೊಂಡಿರಲಿಲ್ಲ. ಹೀಗಾಗಿ ತುಂಬಾ ಜನ ಸಾವನ್ನಪ್ಪಿದ್ದರು, ಈ ಬಾರಿ ಹಾಗಾಗದಂತೆ ನೋಡಿಕೊಳ್ಳಬೇಕು. ಇಷ್ಟೊತ್ತಿಗಾಗಲೇ ಸರ್ಕಾರ ಎರಡು ಡೋಸ್ ಮುಗಿಸಬೇಕಿತ್ತು. ಬೂಸ್ಟರ್ ವ್ಯಾಕ್ಸಿನೇಷನ್ ಮಾಡಿಸಲು ಕೇಂದ್ರ ಸರ್ಕಾರ ಕೂಡಲೇ ಅನುಮತಿ ನೀಡಬೇಕು. ಇಬ್ಬರಿಗೆ ಒಮಿಕ್ರಾನ್ ಬಂದಿದ್ದು, ಅದು ಹರಡದಂತೆ ಕ್ರಮ ಕೈಗೊಳ್ಳಬೇಕು. ಅಂತಾರಾಷ್ಟ್ರೀಯ ವಿಮಾನಗಳನ್ನ ನಿಲ್ಲಿಸಬೇಕು. ಏರ್ ಪೋರ್ಟ್​ನಲ್ಲಿ ಸರಿಯಾದ ತಪಾಸಣೆ ಆಗಬೇಕು ಎಂದು ಹೇಳಿದರು.

ಚಿಕ್ಕಮಗಳೂರು: ಗುಂಡಾಗಳನ್ನು ಕರೆಯಿಸಿ ಕಾಂಗ್ರೆಸ್​​​ನಿಂದ ಪ್ರಚಾರ ನಡೆಸಲಾಗುತ್ತಿದೆ ಎಂಬ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆಗೆ ಚಿಕ್ಕಮಗಳೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.

ತಮ್ಮ ಪಕ್ಷದ ವಿರುದ್ಧವಾಗಿಯೇ ಅಭ್ಯರ್ಥಿಯನ್ನ ನಿಲ್ಲಿಸಿಕೊಂಡಿರೋರು ರಮೇಶ್ ಜಾರಕಿಹೊಳಿ. ಲಖನ್ ಜಾರಕಿಹೊಳಿಯನ್ನ ವಿಧಾನಪರಿಷತ್ ಚುನಾವಣೆಯಲ್ಲಿ ನಿಲ್ಲಿಸಿರೋದು ಯಾರು? ಬಿಜೆಪಿಯ ಅಧಿಕೃತ ಅಭ್ಯರ್ಥಿಯಿದ್ರೂ ತಮ್ಮ ತಮ್ಮನನ್ನ ನಿಲ್ಲಿಸಿದ್ದಾರೆ. ಈ ರೀತಿ ಹೇಳಿಕೆ ನೀಡೋಕೆ ಅವರಿಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದ್ದಾರೆ.

ಚಿಕ್ಕಮಗಳೂರಲ್ಲಿ ಮಾಧ್ಯಮದವರೊಂದಿಗೆ ಸಿದ್ದರಾಮಯ್ಯ

ಸಿಎಂ ಬದಲಾವಣೆ ಕುರಿತು ಈಶ್ವರಪ್ಪರ ಹೇಳಿಕೆ ಕುರಿತ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಈಶ್ವರಪ್ಪ ಬಾಯಿತಪ್ಪಿ ಸತ್ಯ ಹೇಳಿದ್ದಾರೆ. ಆಮೇಲೆ ಸರಿಪಡಿಸಿಕೊಳ್ಳಲು ಹೋಗುತ್ತಿದ್ದಾರೆ, ಆದರೆ ಜನರಿಗೆ ಗೊತ್ತಾಗಿದೆ ಎಂದರು.

ಇದನ್ನೂ ಓದಿ: ಲಖನ್​ಗೆ, ರಮೇಶ್​ ಜಾರಕಿಹೊಳಿ‌ ಪರೋಕ್ಷ ಬೆಂಬಲ...ಪಕ್ಷ ಗಮನಿಸುತ್ತಿದೆ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ

ಇದೇ ವೇಳೆ ಕೋವಿಡ್​ ಬಗ್ಗೆ ಮಾತನಾಡಿದ ಅವರು, ಸರ್ಕಾರ ಎರಡನೇ ಅಲೆಯಲ್ಲಿ ಸರಿಯಾದ ಸಿದ್ಧತೆಯನ್ನು ಮಾಡಿಕೊಂಡಿರಲಿಲ್ಲ. ಹೀಗಾಗಿ ತುಂಬಾ ಜನ ಸಾವನ್ನಪ್ಪಿದ್ದರು, ಈ ಬಾರಿ ಹಾಗಾಗದಂತೆ ನೋಡಿಕೊಳ್ಳಬೇಕು. ಇಷ್ಟೊತ್ತಿಗಾಗಲೇ ಸರ್ಕಾರ ಎರಡು ಡೋಸ್ ಮುಗಿಸಬೇಕಿತ್ತು. ಬೂಸ್ಟರ್ ವ್ಯಾಕ್ಸಿನೇಷನ್ ಮಾಡಿಸಲು ಕೇಂದ್ರ ಸರ್ಕಾರ ಕೂಡಲೇ ಅನುಮತಿ ನೀಡಬೇಕು. ಇಬ್ಬರಿಗೆ ಒಮಿಕ್ರಾನ್ ಬಂದಿದ್ದು, ಅದು ಹರಡದಂತೆ ಕ್ರಮ ಕೈಗೊಳ್ಳಬೇಕು. ಅಂತಾರಾಷ್ಟ್ರೀಯ ವಿಮಾನಗಳನ್ನ ನಿಲ್ಲಿಸಬೇಕು. ಏರ್ ಪೋರ್ಟ್​ನಲ್ಲಿ ಸರಿಯಾದ ತಪಾಸಣೆ ಆಗಬೇಕು ಎಂದು ಹೇಳಿದರು.

Last Updated : Dec 3, 2021, 3:39 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.