ಚಿಕ್ಕಮಗಳೂರು: ಶೃಂಗೇರಿಯಲ್ಲಿ ನಡೆದ ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಆರೋಪದಡಿ ಶೃಂಗೇರಿ ಠಾಣೆಯ ಪಿಎಸ್ಐ ಕೀರ್ತಿ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ಕೀರ್ತಿ ಕುಮಾರ್ ಅವರನ್ನು ಶೃಂಗೇರಿಯಿಂದ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಠಾಣೆಗೆ ವರ್ಗಾವಣೆ ಮಾಡಲಾಗಿದ್ದು, ಕಳೆದ ಎರಡು ದಿನಗಳ ಹಿಂದೆ ಇದೇ ಠಾಣೆಯ ಸಿಪಿಐ ಸಿದ್ದರಾಮಯ್ಯ ಸಸ್ಪಂಡೆ ಆಗಿದ್ದರು. ಕರ್ತವ್ಯ ಲೋಪ ಹಿನ್ನೆಲೆ ಹಿಂದಿನ ಅಧಿಕಾರಿಗಳನ್ನು ಎಎಸ್ಪಿ ಕೈ ಬಿಟ್ಟಿದ್ದರು. ಸದ್ಯ ಈ ಪ್ರಕರಣದ ತನಿಖಾಧಿಕಾರಿ ಎಎಸ್ಪಿ ಶೃತಿ ಆಗಿದ್ದು, ಅವರೇ ತನಿಖೆಯನ್ನು ನಡೆಸುತ್ತಿದ್ದಾರೆ.
ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿರುವ ನೀಚರ ವಿರುದ್ಧ ಈಗಾಗಲೇ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪ್ರಕರಣದಲ್ಲಿ 17 ಮಂದಿ ವಿರುದ್ಧ ಎಫ್ಐಆರ್ ಕೂಡ ಹಾಕಲಾಗಿದೆ.
ಪ್ರಕರಣ ಸಂಬಂಧ ಶೃಂಗೇರಿ ಪೊಲೀಸರಿಂದ ಎಂಟು ಮಂದಿ ಆರೋಪಿಗಳ ಬಂಧನವಾಗಿದ್ದು, ಉಳಿದ ಆರೋಪಿಗಳನ್ನು ಬಂಧಿಸಲು ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ ಎಂಬ ಆರೋಪ ಸಹ ಕೇಳಿ ಬಂದಿತ್ತು. ಹೀಗಾಗಿ ಹೊಸ ಟೀಮ್ ಜೊತೆ ಎಎಸ್ಪಿ ಶೃತಿ ಫೀಲ್ಡಿಗಿಳಿದು ತನಿಖೆ ಚುರುಕುಗೊಳಿಸಿದ್ದಾರೆ.
ಇದನ್ನೂ ಓದಿ:ಶೃಂಗೇರಿ ಬಾಲಕಿ ಮೇಲಿನ ಅತ್ಯಾಚಾರ ಖಂಡನೀಯ : ಶೋಭಾ ಕರಂದ್ಲಾಜೆ