ETV Bharat / state

ಚಿಕ್ಕಮಗಳೂರು-ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ಬಿರುಕು: ವಾಹನ ಸವಾರರಲ್ಲಿ ಆತಂಕ

author img

By

Published : Dec 20, 2019, 10:10 AM IST

ಶೃಂಗೇರಿಗೆ ಹೋಗುವ ಮಾರ್ಗ ಮಧ್ಯೆ ರಾಜ್ಯ ಹೆದ್ದಾರಿ ಬಿರುಕು ಬಿಟ್ಟಿದ್ದು, ವಾಹನ ಸವಾರರು ಹಾಗೂ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

Kn_Ckm_03_Road_biruku_av_7202347
ಚಿಕ್ಕಮಗಳೂರು-ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ಬಿರುಕು: ವಾಹನ ಸವಾರರಲ್ಲಿ ಆತಂಕ

ಚಿಕ್ಕಮಗಳೂರು: ಶೃಂಗೇರಿಗೆ ಹೋಗುವ ಮಾರ್ಗ ಮಧ್ಯೆ ರಾಜ್ಯ ಹೆದ್ದಾರಿ ಬಿರುಕು ಬಿಟ್ಟಿದ್ದು, ವಾಹನ ಸವಾರರು ಹಾಗೂ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಬಳಿಯ ಇಟ್ಟಿಗೆ - ಸೀಗೋಡು ಎಂಬ ಗ್ರಾಮದಲ್ಲಿ ರಸ್ತೆಯ ಒಂದು ಬದಿಯಿಂದ ಮತ್ತೊಂದು ಬದಿಯವರೆಗೂ ಭೂಮಿ ಬಿರುಕು ಬಿಟ್ಟಿದ್ದು, ಜಯಪುರ, ಕೊಪ್ಪ, ಶೃಂಗೇರಿ ಸೇರಿದಂತೆ ಈ ಭಾಗದಲ್ಲಿ ಸಂಚರಿಸುವ ಜನರಲ್ಲಿ ಭಯ ಹುಟ್ಟಿಸಿದೆ. ಇಟ್ಟಿಗೆ-ಸೀಗೋಡು ಗ್ರಾಮದ ಶಿವನಗರದಲ್ಲಿ ವ್ಯಕ್ತಿಯೊಬ್ಬರು ಮನೆ ನಿರ್ಮಾಣಕ್ಕಾಗಿ ಬೋರ್​​ವೆಲ್​ ಕೊರೆಸುವ ವೇಳೆ ರಸ್ತೆಯಲ್ಲಿ ಬಿರುಕು ಬಂದಿದೆ ಎಂಬ ಆರೋಪ ಕೇಳಿ ಬಂದಿದೆ. ಶೃಂಗೇರಿ ಸೇರಿದಂತೆ ಹತ್ತಾರು ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ಏಕೈಕ ಮಾರ್ಗ ಇದೇ ಆಗಿದೆ. ಒಂದು ವೇಳೆ ಈ ಮಾರ್ಗ ಬಂದ್ ಆದಲ್ಲಿ ಚಿಕ್ಕಮಗಳೂರು-ಕೊಪ್ಪ-ಶೃಂಗೇರಿ ಮಾರ್ಗವೂ ಬಂದ್ ಆಗಲಿದೆ. ಹತ್ತಾರು ಕಿ.ಮೀ. ಸುತ್ತಿಕೊಂಡು ಓಡಾಡಬೇಕಾದ ಸ್ಥಿತಿ ನಿರ್ಮಾಣವಾಗಲಿದೆ. ಕೂಡಲೇ ಸಂಬಂಧಪಟ್ಟ ಇಲಾಖೆ ಇತ್ತ ಗಮನ ಹರಿಸಿ ರಸ್ತೆ ಪರಿಶೀಲನೆ ನಡೆಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಚಿಕ್ಕಮಗಳೂರು: ಶೃಂಗೇರಿಗೆ ಹೋಗುವ ಮಾರ್ಗ ಮಧ್ಯೆ ರಾಜ್ಯ ಹೆದ್ದಾರಿ ಬಿರುಕು ಬಿಟ್ಟಿದ್ದು, ವಾಹನ ಸವಾರರು ಹಾಗೂ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಬಳಿಯ ಇಟ್ಟಿಗೆ - ಸೀಗೋಡು ಎಂಬ ಗ್ರಾಮದಲ್ಲಿ ರಸ್ತೆಯ ಒಂದು ಬದಿಯಿಂದ ಮತ್ತೊಂದು ಬದಿಯವರೆಗೂ ಭೂಮಿ ಬಿರುಕು ಬಿಟ್ಟಿದ್ದು, ಜಯಪುರ, ಕೊಪ್ಪ, ಶೃಂಗೇರಿ ಸೇರಿದಂತೆ ಈ ಭಾಗದಲ್ಲಿ ಸಂಚರಿಸುವ ಜನರಲ್ಲಿ ಭಯ ಹುಟ್ಟಿಸಿದೆ. ಇಟ್ಟಿಗೆ-ಸೀಗೋಡು ಗ್ರಾಮದ ಶಿವನಗರದಲ್ಲಿ ವ್ಯಕ್ತಿಯೊಬ್ಬರು ಮನೆ ನಿರ್ಮಾಣಕ್ಕಾಗಿ ಬೋರ್​​ವೆಲ್​ ಕೊರೆಸುವ ವೇಳೆ ರಸ್ತೆಯಲ್ಲಿ ಬಿರುಕು ಬಂದಿದೆ ಎಂಬ ಆರೋಪ ಕೇಳಿ ಬಂದಿದೆ. ಶೃಂಗೇರಿ ಸೇರಿದಂತೆ ಹತ್ತಾರು ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ಏಕೈಕ ಮಾರ್ಗ ಇದೇ ಆಗಿದೆ. ಒಂದು ವೇಳೆ ಈ ಮಾರ್ಗ ಬಂದ್ ಆದಲ್ಲಿ ಚಿಕ್ಕಮಗಳೂರು-ಕೊಪ್ಪ-ಶೃಂಗೇರಿ ಮಾರ್ಗವೂ ಬಂದ್ ಆಗಲಿದೆ. ಹತ್ತಾರು ಕಿ.ಮೀ. ಸುತ್ತಿಕೊಂಡು ಓಡಾಡಬೇಕಾದ ಸ್ಥಿತಿ ನಿರ್ಮಾಣವಾಗಲಿದೆ. ಕೂಡಲೇ ಸಂಬಂಧಪಟ್ಟ ಇಲಾಖೆ ಇತ್ತ ಗಮನ ಹರಿಸಿ ರಸ್ತೆ ಪರಿಶೀಲನೆ ನಡೆಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

Intro:Kn_Ckm_03_Road_biruku_av_7202347Body:ಚಿಕ್ಕಮಗಳೂರು :-

ಚಿಕ್ಕಮಗಳೂರು - ಶೃಂಗೇರಿ ಮಾರ್ಗ ಮಧ್ಯೆ ರಾಜ್ಯ ಹೆದ್ದಾರಿ ಬಿರುಕು ಬಿಟ್ಟಿದ್ದು ವಾಹನ ಸವಾರರು ಹಾಗೂ ಸ್ಥಳಿಯರಲ್ಲಿ ಆತಂಕ ಮೂಡಿಸಿದೆ.ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಬಳಿಯ ಇಟ್ಟಿಗೆ - ಸೀಗೋಡು ಎಂಬ ಗ್ರಾಮದಲ್ಲಿ ರಸ್ತೆಯ ಒಂದು ಬದಿಯಿಂದ ಮತ್ತೊಂದು ಬದಿಯವರೆಗೂ ಭೂಮಿ ಬಿರುಕು ಬಿಟ್ಟಿದ್ದು ಜಯಪುರ, ಕೊಪ್ಪ, ಶೃಂಗೇರಿ ಸೇರಿದಂದೆ ಈ ಭಾಗದಲ್ಲಿ ಸಂಚರಿಸುವ ಜನರಲ್ಲಿ ಭಯ ಹುಟ್ಟಿಸಿದೆ. ಇಟ್ಟಿಗೆ ಸೀಗೋಡು ಗ್ರಾಮದ ಶಿವನಗರದಲ್ಲಿ ವ್ಯಕ್ತಿಯೊಬ್ಬರು ಮನೆ ನಿರ್ಮಾಣಕ್ಕಾಗಿ ಬೋರ್‍ವೆಲ್ ಕೊರೆಸುವ ವೇಳೆ ರಸ್ತೆಯಲ್ಲಿ ಬಿರುಕು ಬಂದಿದೆ ಎಂಬ ಆರೋಪ ಕೇಳಿ ಬಂದಿದ್ದು . ಬಾಳೆಹೊನ್ನೂರು, ಕೊಪ್ಪ, ಜಯಪುರ, ಶೃಂಗೇರಿ ಸೇರಿದಂತೆ ಹತ್ತಾರು ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ಏಕೈಕ ಮಾರ್ಗ ಇದೇ ಆಗಿದೆ. ರಸ್ತೆ ಬಿರುಕು ಬಿಟ್ಟಿರೋದರಿಂದ ರಸ್ತೆ ಮೇಲೆ ಸರಕು ಸಾಗಿಸುವ ಘನ ವಾಹನಗಳು ಸಂಚರಿಸಿದಲ್ಲಿ ಭೂಮಿ ಕುಸಿಯುವ ಆತಂಕ ಸ್ಥಳಿಯರದ್ದಾಗಿದೆ. ಒಂದು ವೇಳೆ ಈ ಮಾರ್ಗ ಬಂದ್ ಆಗಿದ್ದಲ್ಲಿ ಚಿಕ್ಕಮಗಳೂರು-ಕೊಪ್ಪ-ಶೃಂಗೇರಿ ಮಾರ್ಗವೂ ಬಂದ್ ಆಗಲಿದೆ, ಹತ್ತಾರು ಕಿ.ಮೀ. ಸುತ್ತಿಕೊಂಡು ಓಡಾಡಬೇಕಾದ ಸ್ಥಿತಿ ನಿರ್ಮಾಣವಾಗಲಿದೆ. ಕೂಡಲೇ ಸಂಬಂಧಪಟ್ಟ ಇಲಾಖೆ ಇತ್ತ ಗಮನ ಹರಿಸಿ ರಸ್ತೆ ಸಾಮಥ್ರ್ಯದ ಬಗ್ಗೆ ಪರಿಶೀಲನೆ ನಡೆಸಬೇಕೆಂಬ ಕೂಗು ಕೇಳಿ ಬರುತ್ತಿದೆ.....

Conclusion:ರಾಜಕುಮಾರ್...
ಈ ಟಿವಿ ಭಾರತ್...
ಚಿಕ್ಕಮಗಳೂರು.....

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.