ETV Bharat / state

ಪಾದರಾಯನಪುರ: ಅಧಿಕಾರಿಗಳಿಗೆ ಸಹಕರಿಸದವರು ದೇಶ ದ್ರೋಹಿಗಳು- ಭೋಜೇಗೌಡ - Corona suspected of assault

ಕ್ವಾರಂಟೈನ್​ಗೆ ಕರೆದುಕೊಂಡು ಹೋಗಲು ಬಂದಿದ್ದ ಬಿಬಿಎಂಪಿ ಅಧಿಕಾರಿಗಳ ಮೇಲೆ ಕೊರೊನಾ ಶಂಕಿತರು ಹಲ್ಲೆ ನಡೆಸಿದ ಘಟನೆ ಭಾನುವಾರ ರಾತ್ರಿ ನಡೆಯಿತು. ಈ ಬಗ್ಗೆ ದೇಶಾದ್ಯಂತ ಜನರು ವಿರುದ್ಧ ವ್ಯಕ್ತಪಡಿಸಿದ್ದಾರೆ. ವಿಧಾನ ಪರಿಷತ್ ಸದಸ್ಯ ಭೋಜೇಗೌಡ ಅಹ ತೀವ್ರವಾಗಿ ಖಂಡಿಸಿದ್ದಾರೆ.

S .L .Bhojegowda
ಎಸ್​​​​.ಎಲ್​​​​​​​.ಭೋಜೇಗೌಡ
author img

By

Published : Apr 20, 2020, 6:11 PM IST

ಚಿಕ್ಕಮಗಳೂರು: ಕೊರೊನಾ ವೈರಸ್ ತಡೆಗಟ್ಟುವುದು ಸರ್ಕಾರದ ಕೆಲಸ ಮಾತ್ರವಲ್ಲ, ಪ್ರತಿಯೊಬ್ಬರ ಕರ್ತವ್ಯ ಎಂದು ವಿಧಾನ ಪರಿಷತ್ ಸದಸ್ಯ ಎಸ್​​​​.ಎಲ್​​​​​​​. ಭೋಜೇಗೌಡ ಹೇಳಿದರು.

ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದ ಘಟನೆ ತಲೆತಗ್ಗಿಸುವ ವಿಚಾರ. ಅಲ್ಲಿ ಅಧಿಕಾರಿಗಳು ತಮ್ಮ ಕರ್ತವ್ಯ ಮಾಡಿದ್ದಾರೆ. ಅವರ ಕರ್ತವ್ಯಕ್ಕೆ ಯಾರೂ ಅಡ್ಡಿಪಡಿಬಾರದು. ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಕಿಡಿಗೇಡಿಗಳ ವಿರುದ್ದ ಮುಖ್ಯಮಂತ್ರಿ ಬಿ.ಎಸ್​​.ಯಡಿಯೂರಪ್ಪ ಹಾಗೂ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ವಿಧಾನ ಪರಿಷತ್ ಸದಸ್ಯ ಎಸ್​​​​.ಎಲ್​​​​​​​.ಭೋಜೇಗೌಡ

ಸ್ಥಳಕ್ಕೆ ತೆರಳಿದ ಅಧಿಕಾರಿಗಳಿಗೆ ಸಹಕಾರ ನೀಡದೆ ಇರುವವರನ್ನು ದೇಶದ್ರೋಹಿಗಳು ಎಂದೂ ಕರೆಯಬೇಕು. ಎಂತಹ ಕಠಿಣ ಶಿಕ್ಷೆ ನೀಡಿದರೂ ಸಾಲದು. ಇದು ಸಮಾಜವೇ ತಲೆ ತಗ್ಗಿಸುವಂತಹ ವಿಚಾರ. ದಬ್ಬಾಳಿಕೆ ಮಾಡಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಚಿಕ್ಕಮಗಳೂರು: ಕೊರೊನಾ ವೈರಸ್ ತಡೆಗಟ್ಟುವುದು ಸರ್ಕಾರದ ಕೆಲಸ ಮಾತ್ರವಲ್ಲ, ಪ್ರತಿಯೊಬ್ಬರ ಕರ್ತವ್ಯ ಎಂದು ವಿಧಾನ ಪರಿಷತ್ ಸದಸ್ಯ ಎಸ್​​​​.ಎಲ್​​​​​​​. ಭೋಜೇಗೌಡ ಹೇಳಿದರು.

ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದ ಘಟನೆ ತಲೆತಗ್ಗಿಸುವ ವಿಚಾರ. ಅಲ್ಲಿ ಅಧಿಕಾರಿಗಳು ತಮ್ಮ ಕರ್ತವ್ಯ ಮಾಡಿದ್ದಾರೆ. ಅವರ ಕರ್ತವ್ಯಕ್ಕೆ ಯಾರೂ ಅಡ್ಡಿಪಡಿಬಾರದು. ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಕಿಡಿಗೇಡಿಗಳ ವಿರುದ್ದ ಮುಖ್ಯಮಂತ್ರಿ ಬಿ.ಎಸ್​​.ಯಡಿಯೂರಪ್ಪ ಹಾಗೂ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ವಿಧಾನ ಪರಿಷತ್ ಸದಸ್ಯ ಎಸ್​​​​.ಎಲ್​​​​​​​.ಭೋಜೇಗೌಡ

ಸ್ಥಳಕ್ಕೆ ತೆರಳಿದ ಅಧಿಕಾರಿಗಳಿಗೆ ಸಹಕಾರ ನೀಡದೆ ಇರುವವರನ್ನು ದೇಶದ್ರೋಹಿಗಳು ಎಂದೂ ಕರೆಯಬೇಕು. ಎಂತಹ ಕಠಿಣ ಶಿಕ್ಷೆ ನೀಡಿದರೂ ಸಾಲದು. ಇದು ಸಮಾಜವೇ ತಲೆ ತಗ್ಗಿಸುವಂತಹ ವಿಚಾರ. ದಬ್ಬಾಳಿಕೆ ಮಾಡಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.