ETV Bharat / state

ಚಿಕ್ಕಮಗಳೂರಿನಲ್ಲಿ ಒಂದೇ ಕುಟುಂಬದ ಮೂವರು ಮಹಿಳೆಯರು ನೇಣಿಗೆ ಶರಣು

author img

By

Published : Sep 6, 2021, 2:39 PM IST

Updated : Sep 6, 2021, 5:20 PM IST

ಘಟನೆಗೆ ನಿಖರ ಕಾರಣ ಏನೆಂದು ಈವರೆಗೆ ತಿಳಿದು ಬಂದಿಲ್ಲ. ಸ್ಥಳಕ್ಕೆ ಭೇಟಿ ನೀಡಿದ ಶೃಂಗೇರಿ ಪೊಲೀಸರು ಪರಿಶೀಲನೆ ನಡೆಸಿ ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ..

ಒಂದೇ ಕುಟುಂಬದ ಮೂವರು ನೇಣಿಗೆ ಶರಣು
ಒಂದೇ ಕುಟುಂಬದ ಮೂವರು ನೇಣಿಗೆ ಶರಣು

ಚಿಕ್ಕಮಗಳೂರು : ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಮನ ಕಲಕುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ನಡೆದಿದೆ.

ಮೃತರನ್ನು ಶೃಂಗೇರಿ ತಾಲೂಕಿನ ಮಕ್ಕಿಮನೆ ಗ್ರಾಮದ ಸುಧಾಕರ್ ಎಂಬುವರ ಕುಟುಂಬದ ಮೂವರು ಸದಸ್ಯರಾದ ವೀಣಾ (49), ಶಾರದಮ್ಮ (70) ಮತ್ತು ಶ್ರಾವ್ಯ (15) ಎಂದು ಗುರುತಿಸಲಾಗಿದೆ. ವೀಣಾ ಅವರು ಹೊನ್ನವಳ್ಳಿ ಅಂಗನವಾಡಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಅವರ ಮಗಳು ಶ್ರಾವ್ಯ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು.

ಒಂದೇ ಕುಟುಂಬದ ಮೂವರು ನೇಣಿಗೆ ಶರಣು
ಒಂದೇ ಕುಟುಂಬದ ಮೂವರು ನೇಣಿಗೆ ಶರಣು

ಇದನ್ನೂ ಓದಿ: ವಿಧಾನಪರಿಷತ್ ಸದಸ್ಯ ಬಿ.ಎಂ.ಫಾರೂಕ್ ಒಡೆತನದ ಫೆರಾರಿ ಕಾರು‌ ಡಿವೈಡರ್​ಗೆ ಡಿಕ್ಕಿ

ಇಂದು ಬೆಳಗ್ಗೆ 10.30ಕ್ಕೆ ಅಂಗನವಾಡಿ ಆಯಾ ಪೂರ್ಣಿಮಾ ಅವರು ವೀಣಾ ಅವರಿಗೆ ಕರೆ ಮಾಡಿದ್ದು, ಫೋನ್​ಗೆ ಸಿಕ್ಕಿರಲಿಲ್ಲ. ನಂತರ ಸ್ಥಳೀಯರು ಅನುಮಾನಗೊಂಡು ಮನೆಯ ಹಂಚು ತೆಗೆದಾಗ ವಿಷಯ ಬೆಳಕಿಗೆ ಬಂದಿದೆ.

ಘಟನೆಗೆ ನಿಖರ ಕಾರಣ ಏನೆಂದು ಈವರೆಗೆ ತಿಳಿದು ಬಂದಿಲ್ಲ. ಸ್ಥಳಕ್ಕೆ ಭೇಟಿ ನೀಡಿದ ಶೃಂಗೇರಿ ಪೊಲೀಸರು ಪರಿಶೀಲನೆ ನಡೆಸಿ ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಚಿಕ್ಕಮಗಳೂರು : ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಮನ ಕಲಕುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ನಡೆದಿದೆ.

ಮೃತರನ್ನು ಶೃಂಗೇರಿ ತಾಲೂಕಿನ ಮಕ್ಕಿಮನೆ ಗ್ರಾಮದ ಸುಧಾಕರ್ ಎಂಬುವರ ಕುಟುಂಬದ ಮೂವರು ಸದಸ್ಯರಾದ ವೀಣಾ (49), ಶಾರದಮ್ಮ (70) ಮತ್ತು ಶ್ರಾವ್ಯ (15) ಎಂದು ಗುರುತಿಸಲಾಗಿದೆ. ವೀಣಾ ಅವರು ಹೊನ್ನವಳ್ಳಿ ಅಂಗನವಾಡಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಅವರ ಮಗಳು ಶ್ರಾವ್ಯ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು.

ಒಂದೇ ಕುಟುಂಬದ ಮೂವರು ನೇಣಿಗೆ ಶರಣು
ಒಂದೇ ಕುಟುಂಬದ ಮೂವರು ನೇಣಿಗೆ ಶರಣು

ಇದನ್ನೂ ಓದಿ: ವಿಧಾನಪರಿಷತ್ ಸದಸ್ಯ ಬಿ.ಎಂ.ಫಾರೂಕ್ ಒಡೆತನದ ಫೆರಾರಿ ಕಾರು‌ ಡಿವೈಡರ್​ಗೆ ಡಿಕ್ಕಿ

ಇಂದು ಬೆಳಗ್ಗೆ 10.30ಕ್ಕೆ ಅಂಗನವಾಡಿ ಆಯಾ ಪೂರ್ಣಿಮಾ ಅವರು ವೀಣಾ ಅವರಿಗೆ ಕರೆ ಮಾಡಿದ್ದು, ಫೋನ್​ಗೆ ಸಿಕ್ಕಿರಲಿಲ್ಲ. ನಂತರ ಸ್ಥಳೀಯರು ಅನುಮಾನಗೊಂಡು ಮನೆಯ ಹಂಚು ತೆಗೆದಾಗ ವಿಷಯ ಬೆಳಕಿಗೆ ಬಂದಿದೆ.

ಘಟನೆಗೆ ನಿಖರ ಕಾರಣ ಏನೆಂದು ಈವರೆಗೆ ತಿಳಿದು ಬಂದಿಲ್ಲ. ಸ್ಥಳಕ್ಕೆ ಭೇಟಿ ನೀಡಿದ ಶೃಂಗೇರಿ ಪೊಲೀಸರು ಪರಿಶೀಲನೆ ನಡೆಸಿ ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Last Updated : Sep 6, 2021, 5:20 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.