ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಅರಣ್ಯದಲ್ಲಿ, ಸಫಾರಿಯಲ್ಲಿದ್ದ ಪ್ರವಾಸಿಗರ ಕಣ್ಣಿಗೆ ಹುಲಿ ಕಾಣಿಸಿಕೊಂಡಿದೆ. ಹುಲಿ ಹಾಗೂ ಹುಲಿಯ ಎರಡು ಮರಿಗಳ ದರ್ಶನ ಪ್ರವಾಸಿಗರಿಗೆ ಆಗಿದ್ದು, ಈ ದೃಶ್ಯವನ್ನು ಕಂಡು ಪ್ರವಾಸಿಗರು ಸಂತೋಷ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯ ಭದ್ರ ಹುಲಿ ಸಂರಕ್ಷಿತಾರಣ್ಯದಲ್ಲಿ ಈ ದೃಶ್ಯ ಸೆರೆಯಾಗಿದ್ದು, ಹುಲಿ ಹಾಗೂ ಎರಡು ಮರಿ ಹುಲಿಗಳ ದೃಶ್ಯವನ್ನು ಸಫಾರಿಗೆ ಹೋದ ಪ್ರವಾಸಿಗರು ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಲಕ್ಕವಳ್ಳಿಯ ಭದ್ರಹುಲಿ ಸಂರಕ್ಷಿತಾರಣ್ಯದಲ್ಲಿ ಈ ದೃಶ್ಯ ಕಂಡು ಬಂದಿದೆ. ಸಫಾರಿ ವೇಳೆ ಅಪರೂಪಕ್ಕೆ ಹುಲಿಗಳು ಕಾಣ ಸಿಗುತ್ತವೆ ಎಂದು ಹೇಳಲಾಗಿದೆ.
ಓದಿ :ಆರ್ಯನ್ ಖಾನ್ ಡ್ರಗ್ಸ್ ಕೇಸ್.. ಪ್ರಮುಖ ಸಾಕ್ಷಿ ಪ್ರಭಾಕರ್ ಸೈಲ್ ಹೃದಯಾಘಾತದಿಂದ ಮೃತ