ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿರುವ ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಭೂಕುಸಿತ ಸಂಭವಿಸುತ್ತಿರುವ ಹಿನ್ನೆಲೆ ಇಂದು ಮತ್ತು ನಾಳೆ ಚಾರ್ಮಾಡಿ ಘಾಟಿಯಲ್ಲಿ ವಾಹನ ಸಂಚಾರ ಬಂದ್ ಮಾಡಲಾಗಿದೆ.
ಮಂಗಳೂರಿಗೆ ತೆರಳಲು ದಾರಿ ಕಾಣದೇ ರೋಗಿಯೊಬ್ಬರು ನರಳಾಡಿದ ಘಟನೆ ಬೆಳಕಿಗೆ ಬಂದಿದೆ. ತುರ್ತು ಚಿಕಿತ್ಸೆಗಾಗಿ ಬಣಕಲ್ ನಿವಾಸಿ ಸಾಧಿಕ್ ಮಂಗಳೂರಿಗೆ ಹೋಗಬೇಕಾಗಿತ್ತು. ಆದರೇ ಚಾರ್ಮಾಡಿ ಘಾಟಿ ಬಂದ್ ಆಗಿರುವ ಕಾರಣ ದಾರಿ ಇರಲಿಲ್ಲ. ಈ ಸಂದರ್ಭದಲ್ಲಿ ಅಲ್ಲಿನ ಸ್ಥಳೀಯರು ಹಾಗೂ ಪೊಲೀಸರ ಸಹಾಯದಿಂದ ಅಂಬುಲೆನ್ಸ್ಗೆ ದಾರಿ ಮಾಡಿಕೊಟ್ಟಿದ್ದು ಸುರಕ್ಷಿತವಾಗಿ ರೋಗಿಯನ್ನು ಮಂಗಳೂರಿಗೆ ಕಳುಹಿಸಿಕೊಟ್ಟಿದ್ದಾರೆ. ಸಾಧಿಕ್ ಈಗ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.