ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೇಮಾವತಿ ನದಿಯಲ್ಲಿ ಕಡಿದಾಳು ಗ್ರಾಮದ ದೇವಮ್ಮ (55) ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ.
ಗದ್ದೆಗೆ ಹೋಗುವಾಗ ಈ ದುರಂತ ನಡೆದಿದ್ದು, ಸುಮಾರು ಎರಡು ಕಿಲೋಮೀಟರ್ ದೂರದಲ್ಲಿ ದೇವಮ್ಮ ಮೃತದೇಹ ಪತ್ತೆಯಾಗಿದೆ. ಈ ಸಂಬಂಧ ಮೂಡಿಗೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಹಾಮಳೆಗೆ ಜಿಲ್ಲೆಯಲ್ಲಿ ಇದು ಆರನೇ ಬಲಿಯಾಗಿದ್ದು, ಧಾರಾಕಾರ ಮಳೆಗೆ ನಾನಾ ಅವಾಂತರಗಳು ಸೃಷ್ಟಿಯಾಗಿವೆ. ಎರಡು ದಿನಗಳಿಂದ ಜಿಲ್ಲೆಯಲ್ಲಿ ವರುಣ ಬಿಡುವು ನೀಡಿದ್ದರೂ ಜಿಲ್ಲೆಯಲ್ಲಿ ನದಿಗಳು ಧುಮ್ಮಿಕ್ಕಿ ಹರಿಯುತ್ತಿವೆ.