ಚಿತ್ರದುರ್ಗ: ಕೆಎಸ್ಆರ್ಟಿಸಿ ಬಸ್ ಮತ್ತು ಲಾರಿ ಮಧ್ಯೆ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಸಾವನಪ್ಪಿದ್ದು, ಕೆಲವರು ಗಾಯಗೊಂಡ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಬಳಿ ಇರುವ ಶ್ರೀರಂಗಪಟ್ಟಣ ಬೀದರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಬೆಂಗಳೂರಿಂದ ಬಳ್ಳಾರಿ ಕಡೆಗೆ ಸಂಚರಿಸುತ್ತಿದ್ದ ಬಸ್ಗೆ ಲಾರಿ ಡಿಕ್ಕಿ ಹೊಡೆದಿದೆ. ಬಸ್ ಚಾಲಕ ಪವನ್, ಪ್ರಯಾಣಿಕ ವಿಜಯಕುಮಾರ್ ಸೇರಿದ್ದಂತೆ ಓರ್ವ ಮಹಿಳೆ ಮೃತಪಟ್ಟಿದ್ದಾರೆ. ಮಹಿಳೆಯ ಹೆಸರು ತಿಳಿದು ಬಂದಿಲ್ಲ.
ಗಾಯಾಳುಗಳನ್ನು ಹತ್ತಿರದ ಚಳ್ಳಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದು, ಚಳ್ಳಕೆರೆ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.