ಚಿತ್ರದುರ್ಗ: ಲಾಕ್ಡೌನ್ನಿಂದಾಗಿ ಹಲವು ದಿನಗಳ ಕಾಲ ಬಂದ್ ಆಗಿದ್ದ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭವಾಗಿ 2 ದಿನ ಕಳೆದು ಮೂರನೇ ದಿನಕ್ಕೆ ಕಾಲಿಟ್ಟರೂ ಜಿಲ್ಲೆಯ ಪ್ರಯಾಣಿಕರು ಮಾತ್ರ ಬಸ್ನಲ್ಲಿ ಪ್ರಯಾಣ ಬೆಳೆಸಲು ಹಿಂದೇಟು ಹಾಕುತ್ತಿದ್ದಾರೆ.
ಬಸ್ ಸಂಚಾರ ಆಂಭವಾಗಿ ಮೂರು ದಿನಗಳಾದರೂ ಬಸ್ ನಿಲ್ದಾಣದಲ್ಲಿ ಜನರಿಲ್ಲದೆ ಬಿಕೋ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ. ಎರಡು ದಿನಗಳಿಂದ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಜನಜಂಗುಳಿಯಿಂದ ಕೂಡಿತ್ತಾದರೂ ಇದ್ದಕ್ಕಿದ್ದಂತೆ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದ್ದು, ಇಡೀ ಕೇಂದ್ರೀಯ ಬಸ್ ನಿಲ್ದಾಣ ಜನರಿಲ್ಲದೆ ಭಣಗುಡುತ್ತಿದೆ. ಬಸ್ಗಳು ನಿಂತ ಸ್ಥಳದಲ್ಲೇ ನಿಂತಿದ್ದು, ಪ್ರಯಾಣಿಕರು ಮಾತ್ರ ಸುಳಿಯದಂತಾಗಿದೆ. ಇದೇ ರೀತಿ ಮುಂದುವರೆದರೆ ನಷ್ಟ ಅನುಭವಿಸುವ ಪರಿಸ್ಥಿತಿ ನಿರ್ಮಾಣ ಆಗಲಿದೆ.