ಚಿತ್ರದುರ್ಗ: ಜಿಲ್ಲೆಗೆ ಮಂಜೂರಾಗಿ ಕೈತಪ್ಪಿ ಹೋಗಿದ್ದ ಮೆಡಿಕಲ್ ಕಾಲೇಜು ಮರು ಮಂಜೂರು ಮಾಡಬೇಕೆಂದು ಕರ್ನಾಟಕ ನವ ನಿರ್ಮಾಣ ಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.
ತೀವ್ರ ಬರಕ್ಕೆ ತುತ್ತಾಗಿರುವ ಜಿಲ್ಲೆ ಹಾಗೂ ಹಿಂದುಳಿದ ಜಿಲ್ಲೆಯಾಗಿರುವುದರಿಂದ ಮೆಡಿಕಲ್ ಕಾಲೇಜು ಅವಶ್ಯಕತೆ ಇದೆ. ಅದಕ್ಕಾಗಿ ಆರೋಗ್ಯ ಸಚಿವರಾದ ಶ್ರೀರಾಮುಲು ತಕ್ಷಣ ಮಂಜೂರು ಮಾಡಬೇಕು ಎಂದು ಮನವಿ ಮಾಡಿಕೊಂಡರು.
ನಗರದಲ್ಲಿ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ನಿರ್ಮಾಣಕ್ಕೆ ಸೂಚಿಸಿರುವ 14 ಎಕರೆ ಜಮೀನು ಕಾಯ್ದಿರಿಸಿದ್ದರೂ ಕಾಲೇಜು ನಿರ್ಮಾಣ ಆಗದೆ ಇರುವುದು ಜನರ ಆಕ್ರೋಶಕ್ಕೆ ಕಾರಣ ಆಗಿದೆ.