ETV Bharat / state

ಈಡೇರದ ಮೇಲ್ಸೇತುವೆ ನಿರ್ಮಾಣದ ಬೇಡಿಕೆ: ಚುನಾವಣೆ ಬಹಿಷ್ಕರಿಸಲು ನಿರ್ಧರಿಸಿದ ಗ್ರಾಮಸ್ಥರು - ಚುನಾವಣೆ ಬಹಿಷ್ಕರಿಸಲು ನಿರ್ಧರಿಸಿದ ವಿಜಾಪುರ ಗ್ರಾಮಸ್ಥರು

ಚಿತ್ರದುರ್ಗ ತಾಲೂಕಿನ ವಿಜಾಪುರ ಗ್ರಾಮಕ್ಕೆ ಹೊಂದಿಕೊಂಡಿರುವ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸೇತುವೆ ನಿರ್ಮಾಣಕ್ಕೆ ಇಲ್ಲಿನ ನಿವಾಸಿಗಳು ಹಲವು ಬಾರಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ, ಜಿಲ್ಲಾಡಳಿ ಹಾಗೂ ತಾಲೂಕಾಡಳಿತಕ್ಕೆ ಮನವಿ ಮಾಡಿದ್ದರು. ಆದರೆ ಯಾವುದೇ ಅಧಿಕಾರಿಗಳು ಇವರ ಸಮಸ್ಯಗೆ ಸ್ಪಂದಿಸಿರಲಿಲ್ಲ. ಇದರಿಂದ ಕೋಪಗೊಂಡಿರುವ ಗ್ರಾಮಸ್ಥರು, ಗ್ರಾಮ ಪಂಚಾಯಿತಿ ಚುನಾವಣೆ ಬಹಿಷ್ಕಾರಕ್ಕೆ ಟೊಂಕ ಕಟ್ಟಿ ನಿಂತಿದ್ದಾರೆ.

Bijapur villagers are decided to boycott election
ಚುನಾವಣೆ ಬಹಿಷ್ಕರಿಸಲು ನಿರ್ಧರಿಸಿದ ಗ್ರಾಮಸ್ಥರು
author img

By

Published : Dec 5, 2020, 6:16 PM IST

Updated : Dec 5, 2020, 8:30 PM IST

ಚಿತ್ರದುರ್ಗ: ಇದು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಗ್ರಾಮ. ಆ ಗ್ರಾಮದ ಜನರು ಹಲವು ವರ್ಷಗಳಿಂದ ಸೇತುವೆ ಮಾಡುವಂತೆ ಬೇಡಿಕೆ ಇಟ್ಟಿದ್ದಾರೆ. ಆದರೆ ಅಧಿಕಾರಿಗಳು ಕೆಳಸೇತುವೆ ನಿರ್ಮಾಣ ಮಾಡಿದ್ದಾರೆ. ಇದರಿಂದ ಆಕ್ರೋಶಗೊಂಡಿರುವ ಗ್ರಾಮಸ್ಥರು, ಗ್ರಾಪಂ ಚುನಾವಣೆಯಲ್ಲಿ ಮತ ಸಲಾಯಿಸದೆ ದೂರ ಉಳಿಯಲು ನಿರ್ಧರಿಸಿದ್ದಾರೆ.

ಚುನಾವಣೆ ಬಹಿಷ್ಕರಿಸಲು ನಿರ್ಧರಿಸಿದ ಗ್ರಾಮಸ್ಥರು

ಚಿತ್ರದುರ್ಗ ತಾಲೂಕಿನ ವಿಜಾಪುರ ಗ್ರಾಮಕ್ಕೆ ಹೊಂದಿಕೊಂಡಿರುವ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸೇತುವೆ ನಿರ್ಮಾಣಕ್ಕೆ ಇಲ್ಲಿನ ನಿವಾಸಿಗಳು ಹಲವು ಬಾರಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ, ಜಿಲ್ಲಾಡಳಿತ ಹಾಗೂ ತಾಲೂಕಾಡಳಿತಕ್ಕೆ ಮನವಿ ಮಾಡಿದ್ದರು. ಆದರೆ ಯಾವುದೇ ಅಧಿಕಾರಿಗಳು ಇವರ ಸಮಸ್ಯಗೆ ಸ್ಪಂದಿಸಿರಲಿಲ್ಲ. ಇದರಿಂದ ಕೋಪಗೊಂಡಿರುವ ಗ್ರಾಮಸ್ಥರು, ಗ್ರಾಮ ಪಂಚಾಯಿತಿ ಚುನಾವಣೆ ಬಹಿಷ್ಕಾರಕ್ಕೆ ಟೊಂಕ ಕಟ್ಟಿ ನಿಂತಿದ್ದಾರೆ.

Highway road
ವಿಜಾಪುರದಲ್ಲಿರುವ ರಾಷ್ಟ್ರಿಯ ಹೆದ್ದಾರಿ

ವಿಜಾಪುರ ಗ್ರಾಮಕ್ಕೆ ಸುಮಾರು 200 ವರ್ಷಗಳ ಇತಿಹಾಸವಿದೆ. ಈ ಗ್ರಾಮದಲ್ಲಿ ಸುಮಾರು 1500 ಜನರು ವಾಸವಾಗಿದ್ದು, ಈ ಪೈಕಿ 1000 ಮತಗಳಿವೆ. ಆದರೂ ಸಹ ಯಾವೊಬ್ಬ ಅಧಿಕಾರಿಗಳು ನಮ್ಮ ಸಮಸ್ಯೆ ಆಲಿಸುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಕೃಷಿ ಚುವಟಿಕೆಗೆ ಅಡತಡೆ, ಸ್ಪಲ್ಪ ಮೈ ಮರೆತರೂ ಪ್ರಾಣಾಪಾಯ:

ಗ್ರಾಮಸ್ಥರ ಬಹುತೇಕ ಕೃಷಿ ಜಮೀನುಗಳು ಹೆದ್ದಾರಿ ಪಕ್ಕದಲ್ಲಿದ್ದು, ಹೆದ್ದಾರಿಯನ್ನು ದಾಟಿಕೊಂಡೇ ಹೋಗಬೇಕು. ಹೀಗೆ ರಸ್ತೆ ದಾಟುವಾಗ ಕೆಲವೊಮ್ಮೆ ಗ್ರಾಮಸ್ಥರಿಗೆ ಹಾಗೂ ಸಾಕು ಪ್ರಾಣಿಗಳಿಗೆ ಪ್ರಾಣಾಪಾಯ ಸಂಭವಿಸಿದೆಯಂತೆ. ಇತ್ತ ಈ ಗ್ರಾಮದ ಪಕ್ಕದ ಬಳಗಟ್ಟೆ, ಮಳೆನಳ್ಳಿ, ಕಬ್ಬಗೇರಿ, ಗೊಲ್ಲರಹಟ್ಟಿ, ಕಲಕುಂಟೆ ಸೇರಿದಂತೆ 8 ಗ್ರಾಮಗಳ ಜನತೆ ನಿತ್ಯ ಈ ಗ್ರಾಮಕ್ಕೆ ಆಗಮಿಸುತ್ತಾರೆ. ಆದರೆ ಸೇತುವೆ ಇಲ್ಲದ ಕಾರಣ ನಿತ್ಯವೂ 4 ಕಿ.ಮೀ. ಸುತ್ತುವರೆದು ಬರುವಂತಾಗಿದೆ ಎಂಬುದು ಗ್ರಾಮಸ್ಥರು ಆರೋಪಿಸಿದ್ದಾರೆ.

ಉಪಯೋಗವಾಗದ ಬ್ರಿಡ್ಜ್​​:

bridge
ವಿಜಾಪುರದಲ್ಲಿ ಗ್ರಾಮದಲ್ಲಿ ನಿರ್ಮಾಣವಾಗಿರುವ ಕೆಳ ಸೇತುವೆ

ಗ್ರಾಮಸ್ಥರ ಒತ್ತಾಯಕ್ಕೆ ಮಣಿದ ಎನ್‌ಹೆಚ್ ಅಧಿಕಾರಿಗಳು ಇಲ್ಲಿನ ನಿವಾಸಿಗಳಿಗೆ ಅನುಕೂಲವಾಗಲೆಂದು ಹೆದ್ದಾರಿಯ‌ಲ್ಲಿ ಕೆಳ ಸೇತುವೆ (ಬಿಡ್ಜ್) ನಿರ್ಮಾಣ ಮಾಡುತ್ತಿದ್ದಾರೆ. ಆದರೆ ಸೇತುವೆ ಗ್ರಾಮದಿಂದ 1 ಕಿ.ಮೀ. ದೂರವಿರುವ ಕಾರಣ ಗ್ರಾಮಸ್ಥರಿಗೆ ಇದು ಅನುಕೂಲವಾಗಿಲ್ಲ.

ಇದನ್ನೂ ಓದಿ: ಒಂದೇ ಗ್ರಾಮದ 5 ಮನೆ ಕಳ್ಳತನ: ಅಪಾರ ಪ್ರಮಾಣದ ಚಿನ್ನಾಭರಣ, ನಗದು ಕಳವು

ಗ್ರಾಮಸ್ಥರ ಬೇಡಿಕೆಗೂ ಮಣಿಯದ ಸರ್ಕಾರ:

ಹೆದ್ದಾರಿಯಲ್ಲಿ ಬ್ರಿಡ್ಜ್​ ನಿರ್ಮಾಣಕ್ಕೆ ಒತ್ತಾಯಿಸಿ ವಿಜಾಪುರ ಗ್ರಾಮಸ್ಥರು ಕಳೆದ ನಾಲ್ಕು ವರ್ಷಗಳಿಂದ ಜನಪ್ರತಿಧಿಗಳ ಹಾಗೂ ಅಧಿಕಾರಿಗಳ ಗಮನಕ್ಕೆ ತರುತ್ತಿದ್ದಾರೆ. ಹಲವು ತಿಂಗಳಿಂದ ಭರವಸೆ ಮಾತುಗಳನ್ನು ಹೇಳಿಕೊಂಡು ಬಂದಿದ್ದ ಅಧಿಕಾರಿಗಳು ಕೊನೆಗೂ ಗ್ರಾಮದ ಹೊರಗೆ ಸೇತುವೆ ನಿರ್ಮಾಣ ಮಾಡಿದ್ದಾರೆ. ಇದು ಸ್ಥಳೀಯರ ಕೆಂಗಣ್ಣಿಗೆ ಗುರಿಯಾಗಿದೆ. ಹೀಗಾಗಿ ಬೇಡಿಕೆ ಈಡೇರುವವರೆಗೂ ಯಾವುದೇ ಚುನಾವಣೆಗೆ ಮತ ಚಲಾಯಿಸುವುದಿಲ್ಲ ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.

ಚಿತ್ರದುರ್ಗ: ಇದು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಗ್ರಾಮ. ಆ ಗ್ರಾಮದ ಜನರು ಹಲವು ವರ್ಷಗಳಿಂದ ಸೇತುವೆ ಮಾಡುವಂತೆ ಬೇಡಿಕೆ ಇಟ್ಟಿದ್ದಾರೆ. ಆದರೆ ಅಧಿಕಾರಿಗಳು ಕೆಳಸೇತುವೆ ನಿರ್ಮಾಣ ಮಾಡಿದ್ದಾರೆ. ಇದರಿಂದ ಆಕ್ರೋಶಗೊಂಡಿರುವ ಗ್ರಾಮಸ್ಥರು, ಗ್ರಾಪಂ ಚುನಾವಣೆಯಲ್ಲಿ ಮತ ಸಲಾಯಿಸದೆ ದೂರ ಉಳಿಯಲು ನಿರ್ಧರಿಸಿದ್ದಾರೆ.

ಚುನಾವಣೆ ಬಹಿಷ್ಕರಿಸಲು ನಿರ್ಧರಿಸಿದ ಗ್ರಾಮಸ್ಥರು

ಚಿತ್ರದುರ್ಗ ತಾಲೂಕಿನ ವಿಜಾಪುರ ಗ್ರಾಮಕ್ಕೆ ಹೊಂದಿಕೊಂಡಿರುವ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸೇತುವೆ ನಿರ್ಮಾಣಕ್ಕೆ ಇಲ್ಲಿನ ನಿವಾಸಿಗಳು ಹಲವು ಬಾರಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ, ಜಿಲ್ಲಾಡಳಿತ ಹಾಗೂ ತಾಲೂಕಾಡಳಿತಕ್ಕೆ ಮನವಿ ಮಾಡಿದ್ದರು. ಆದರೆ ಯಾವುದೇ ಅಧಿಕಾರಿಗಳು ಇವರ ಸಮಸ್ಯಗೆ ಸ್ಪಂದಿಸಿರಲಿಲ್ಲ. ಇದರಿಂದ ಕೋಪಗೊಂಡಿರುವ ಗ್ರಾಮಸ್ಥರು, ಗ್ರಾಮ ಪಂಚಾಯಿತಿ ಚುನಾವಣೆ ಬಹಿಷ್ಕಾರಕ್ಕೆ ಟೊಂಕ ಕಟ್ಟಿ ನಿಂತಿದ್ದಾರೆ.

Highway road
ವಿಜಾಪುರದಲ್ಲಿರುವ ರಾಷ್ಟ್ರಿಯ ಹೆದ್ದಾರಿ

ವಿಜಾಪುರ ಗ್ರಾಮಕ್ಕೆ ಸುಮಾರು 200 ವರ್ಷಗಳ ಇತಿಹಾಸವಿದೆ. ಈ ಗ್ರಾಮದಲ್ಲಿ ಸುಮಾರು 1500 ಜನರು ವಾಸವಾಗಿದ್ದು, ಈ ಪೈಕಿ 1000 ಮತಗಳಿವೆ. ಆದರೂ ಸಹ ಯಾವೊಬ್ಬ ಅಧಿಕಾರಿಗಳು ನಮ್ಮ ಸಮಸ್ಯೆ ಆಲಿಸುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಕೃಷಿ ಚುವಟಿಕೆಗೆ ಅಡತಡೆ, ಸ್ಪಲ್ಪ ಮೈ ಮರೆತರೂ ಪ್ರಾಣಾಪಾಯ:

ಗ್ರಾಮಸ್ಥರ ಬಹುತೇಕ ಕೃಷಿ ಜಮೀನುಗಳು ಹೆದ್ದಾರಿ ಪಕ್ಕದಲ್ಲಿದ್ದು, ಹೆದ್ದಾರಿಯನ್ನು ದಾಟಿಕೊಂಡೇ ಹೋಗಬೇಕು. ಹೀಗೆ ರಸ್ತೆ ದಾಟುವಾಗ ಕೆಲವೊಮ್ಮೆ ಗ್ರಾಮಸ್ಥರಿಗೆ ಹಾಗೂ ಸಾಕು ಪ್ರಾಣಿಗಳಿಗೆ ಪ್ರಾಣಾಪಾಯ ಸಂಭವಿಸಿದೆಯಂತೆ. ಇತ್ತ ಈ ಗ್ರಾಮದ ಪಕ್ಕದ ಬಳಗಟ್ಟೆ, ಮಳೆನಳ್ಳಿ, ಕಬ್ಬಗೇರಿ, ಗೊಲ್ಲರಹಟ್ಟಿ, ಕಲಕುಂಟೆ ಸೇರಿದಂತೆ 8 ಗ್ರಾಮಗಳ ಜನತೆ ನಿತ್ಯ ಈ ಗ್ರಾಮಕ್ಕೆ ಆಗಮಿಸುತ್ತಾರೆ. ಆದರೆ ಸೇತುವೆ ಇಲ್ಲದ ಕಾರಣ ನಿತ್ಯವೂ 4 ಕಿ.ಮೀ. ಸುತ್ತುವರೆದು ಬರುವಂತಾಗಿದೆ ಎಂಬುದು ಗ್ರಾಮಸ್ಥರು ಆರೋಪಿಸಿದ್ದಾರೆ.

ಉಪಯೋಗವಾಗದ ಬ್ರಿಡ್ಜ್​​:

bridge
ವಿಜಾಪುರದಲ್ಲಿ ಗ್ರಾಮದಲ್ಲಿ ನಿರ್ಮಾಣವಾಗಿರುವ ಕೆಳ ಸೇತುವೆ

ಗ್ರಾಮಸ್ಥರ ಒತ್ತಾಯಕ್ಕೆ ಮಣಿದ ಎನ್‌ಹೆಚ್ ಅಧಿಕಾರಿಗಳು ಇಲ್ಲಿನ ನಿವಾಸಿಗಳಿಗೆ ಅನುಕೂಲವಾಗಲೆಂದು ಹೆದ್ದಾರಿಯ‌ಲ್ಲಿ ಕೆಳ ಸೇತುವೆ (ಬಿಡ್ಜ್) ನಿರ್ಮಾಣ ಮಾಡುತ್ತಿದ್ದಾರೆ. ಆದರೆ ಸೇತುವೆ ಗ್ರಾಮದಿಂದ 1 ಕಿ.ಮೀ. ದೂರವಿರುವ ಕಾರಣ ಗ್ರಾಮಸ್ಥರಿಗೆ ಇದು ಅನುಕೂಲವಾಗಿಲ್ಲ.

ಇದನ್ನೂ ಓದಿ: ಒಂದೇ ಗ್ರಾಮದ 5 ಮನೆ ಕಳ್ಳತನ: ಅಪಾರ ಪ್ರಮಾಣದ ಚಿನ್ನಾಭರಣ, ನಗದು ಕಳವು

ಗ್ರಾಮಸ್ಥರ ಬೇಡಿಕೆಗೂ ಮಣಿಯದ ಸರ್ಕಾರ:

ಹೆದ್ದಾರಿಯಲ್ಲಿ ಬ್ರಿಡ್ಜ್​ ನಿರ್ಮಾಣಕ್ಕೆ ಒತ್ತಾಯಿಸಿ ವಿಜಾಪುರ ಗ್ರಾಮಸ್ಥರು ಕಳೆದ ನಾಲ್ಕು ವರ್ಷಗಳಿಂದ ಜನಪ್ರತಿಧಿಗಳ ಹಾಗೂ ಅಧಿಕಾರಿಗಳ ಗಮನಕ್ಕೆ ತರುತ್ತಿದ್ದಾರೆ. ಹಲವು ತಿಂಗಳಿಂದ ಭರವಸೆ ಮಾತುಗಳನ್ನು ಹೇಳಿಕೊಂಡು ಬಂದಿದ್ದ ಅಧಿಕಾರಿಗಳು ಕೊನೆಗೂ ಗ್ರಾಮದ ಹೊರಗೆ ಸೇತುವೆ ನಿರ್ಮಾಣ ಮಾಡಿದ್ದಾರೆ. ಇದು ಸ್ಥಳೀಯರ ಕೆಂಗಣ್ಣಿಗೆ ಗುರಿಯಾಗಿದೆ. ಹೀಗಾಗಿ ಬೇಡಿಕೆ ಈಡೇರುವವರೆಗೂ ಯಾವುದೇ ಚುನಾವಣೆಗೆ ಮತ ಚಲಾಯಿಸುವುದಿಲ್ಲ ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.

Last Updated : Dec 5, 2020, 8:30 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.