ಚಿತ್ರದುರ್ಗ: ಜಿಲ್ಲೆಗೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರು ಸ್ವಚ್ಛತಾ ಸಪ್ತಾಹ ಕಾರ್ಯಕ್ರಮಕ್ಕೆ ಆಗಮಿಸಿ, ಕೈಯಲ್ಲಿ ಪೊರಕೆ ಹಿಡಿದು ಕಸ ಗುಡಿಸಿದ್ರು.
ಚಿತ್ರದುರ್ಗ ಜಿಲ್ಲಾಸ್ಪತ್ರೆಯ ಮುಂಭಾಗ ಆಯೋಜಿಸಿದ್ದ ಸ್ವಚ್ಛತಾ ಸಪ್ತಾಹ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಕಸ ಗುಡಿಸುವ ಮೂಲಕ ಸಾರ್ವಜನಿಕರು ಹುಬ್ಬೇರಿಸುವಂತೆ ಮಾಡಿದ್ರು.
ಬಳಿಕ ಕೈಗೆ ಗ್ಲೌಸ್ ಧರಿಸಿ ಬುಟ್ಟಿಗೆ ಒಂದೆರಡು ಹಿಡಿ ಕಸ ತುಂಬಿದ ಕಟೀಲ್ ಆ ಬಳಿಕ ನಿರ್ಗಮಿಸಿದ್ರು.