ಚಿತ್ರದುರ್ಗ: ಕೆಎಸ್ಆರ್ಟಿಸಿ ಬಸ್ ಹಾಗೂ ಜಿಲ್ಲಾಧಿಕಾರಿ ಕಾರು ನಡುವೆ ನಡೆದಿದ್ದ ಅಪಘಾತದ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಜಿಲ್ಲಾಧಿಕಾರಿ ಹೋಗುತ್ತಿದ್ದ ಕಾರು ನಿನ್ನೆ ಮಧ್ಯಾಹ್ನ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಶಿವಗಂಗಾ ಗ್ರಾಮದ ಬಳಿ ಸಾರಿಗೆ ಬಸ್ಗೆ ಡಿಕ್ಕಿಯಾಗಿತ್ತು. ಹಸು ಅಡ್ಡ ಬಂದಿದ್ದರಿಂದ ಈ ಅವಘಡ ಸಂಭವಿಸಿತ್ತು. ಶಿವಮೊಗ್ಗದಿಂದ ನಗರಕ್ಕೆ ಆಗಮಿಸುತ್ತಿದ್ದ ಸರ್ಕಾರಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿರುವ ಅಪಘಾತ ದೃಶ್ಯ ಭಯಾನಕವಾಗಿದೆ.
ಈ ದೃಶ್ಯ ಪೆಟ್ರೋಲ್ ಬಂಕ್ನಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇನ್ನು ಅಪಘಾತದಲ್ಲಿ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅವರ ಎಡಗೈ ಬೆರಳಿಗೆ ಸಣ್ಣ ಗಾಯವಾಗಿದೆ.