ETV Bharat / state

ಕೃಷಿಕನ ಬದುಕಿಗೆ ಕೊಳ್ಳಿಯಿಟ್ಟ ಕೊರೊನಾ: ಸೂಕ್ತ ಬೆಲೆ ಸಿಗದೆ ಬದನೆಕಾಯಿ ನಾಶ - ಚಿತ್ರದುರ್ಗ ಲೆಟೆಸ್ಟ್​ ನ್ಯೂಸ್

ರಾಜ್ಯಾದ್ಯಂತ ಕೊರೊನಾದಿಂದ ಸಾಕಷ್ಟು ನಷ್ಟ ಸಂಭವಿಸಿದ್ದು, ರೈತರು ಇದಕ್ಕೆ ಹೊರತಾಗಿಲ್ಲ. ಲಾಕ್​ಡೌನ್​ನಿಂದ ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದೆ ತಾಲೂಕಿನ ರೈತನೋರ್ವ ಬದನೆಕಾಯಿ ಫಸಲು ನಾಶ ಮಾಡಿದ್ದಾನೆ.

Chitradurga farmers facing lot of problems due to corona
ಕೊರೊನಾ ಮಹಾಮಾರಿಗೆ ರೈತರು ತತ್ತರ
author img

By

Published : Jul 6, 2020, 7:16 PM IST

ಚಿತ್ರದುರ್ಗ: ಕೊರೊನಾ ಲಾಕ್​ಡೌನ್​​ನಿಂದಾಗಿ ಬೆಳೆದ ಫಸಲಿಗೆ ಸರಿಯಾದ ಬೆಲೆ ಸಿಗದೆ ಜಿಲ್ಲೆಯ ರೈತನೋರ್ವ ತಾನು ಬೆಳೆದಿದ್ದ ಬೆಳೆಯನ್ನು ನಾಶ ಮಾಡಿದ್ದಾನೆ.

ತಾಲೂಕಿನ ಸೀಗೆಹಳ್ಳಿಯ ರೈತ ಜಗದೀಶ್ ಕರಿಸಿದ್ದಪ್ಪ ಎಂಬುವವರು ಎರಡು ಎಕರೆ ಜಮೀನಿನನ್ನು ಗುತ್ತಿಗೆ ಪಡೆದು ಸಾಲ ಮಾಡಿ ಬದನೆಕಾಯಿ ಬೆಳೆ ಬೆಳೆದಿದ್ದರು. ಆದರೆ, ಕೊರೊನಾ ಪ್ರೇರೇಪಿತ ಲಾಕ್​ಡೌನ್​ ಆದ ಪರಿಣಾಮ ಬೆಲೆ ಕುಸಿತ ಉಂಟಾಗಿ ಸಾಕಷ್ಟು ನಷ್ಟ ಅನುಭವಿಸಿದ್ದರು. ಇದರಿಂದ ಬೇಸತ್ತ ರೈತ, ತಾನು ಬೆಳೆದ ಬೆಳೆಯನ್ನು ನಾಶ ಮಾಡಿದ್ದಾನೆ.

ಕಳೆದ ಹಲವು ತಿಂಗಳಿಂದ ರೈತರು ಸಾಕಷ್ಟು ನಷ್ಟ ಅನುಭವಿಸಿದ್ದು, ಸಂಕಷ್ಟಕ್ಕೀಡಾಗಿರುವ ರೈತರ ಸಹಾಯಕ್ಕೆ ಸರ್ಕಾರ ಧಾವಿಸಬೇಕೆಂದು ರೈತ ಮನವಿ ಮಾಡಿಕೊಂಡಿದ್ದಾರೆ.

ಚಿತ್ರದುರ್ಗ: ಕೊರೊನಾ ಲಾಕ್​ಡೌನ್​​ನಿಂದಾಗಿ ಬೆಳೆದ ಫಸಲಿಗೆ ಸರಿಯಾದ ಬೆಲೆ ಸಿಗದೆ ಜಿಲ್ಲೆಯ ರೈತನೋರ್ವ ತಾನು ಬೆಳೆದಿದ್ದ ಬೆಳೆಯನ್ನು ನಾಶ ಮಾಡಿದ್ದಾನೆ.

ತಾಲೂಕಿನ ಸೀಗೆಹಳ್ಳಿಯ ರೈತ ಜಗದೀಶ್ ಕರಿಸಿದ್ದಪ್ಪ ಎಂಬುವವರು ಎರಡು ಎಕರೆ ಜಮೀನಿನನ್ನು ಗುತ್ತಿಗೆ ಪಡೆದು ಸಾಲ ಮಾಡಿ ಬದನೆಕಾಯಿ ಬೆಳೆ ಬೆಳೆದಿದ್ದರು. ಆದರೆ, ಕೊರೊನಾ ಪ್ರೇರೇಪಿತ ಲಾಕ್​ಡೌನ್​ ಆದ ಪರಿಣಾಮ ಬೆಲೆ ಕುಸಿತ ಉಂಟಾಗಿ ಸಾಕಷ್ಟು ನಷ್ಟ ಅನುಭವಿಸಿದ್ದರು. ಇದರಿಂದ ಬೇಸತ್ತ ರೈತ, ತಾನು ಬೆಳೆದ ಬೆಳೆಯನ್ನು ನಾಶ ಮಾಡಿದ್ದಾನೆ.

ಕಳೆದ ಹಲವು ತಿಂಗಳಿಂದ ರೈತರು ಸಾಕಷ್ಟು ನಷ್ಟ ಅನುಭವಿಸಿದ್ದು, ಸಂಕಷ್ಟಕ್ಕೀಡಾಗಿರುವ ರೈತರ ಸಹಾಯಕ್ಕೆ ಸರ್ಕಾರ ಧಾವಿಸಬೇಕೆಂದು ರೈತ ಮನವಿ ಮಾಡಿಕೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.