ಚಿತ್ರದುರ್ಗ: ಕಂಟೇನರ್ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಬಳಿ ಜರುಗಿದೆ.
ಕಂಟೇನರ್ ಲಾರಿಗೆ ಬಣ್ಣದ ಡಬ್ಬಗಳನ್ನು ಸಾಗಣಿಕೆ ಮಾಡುತ್ತಿದ್ದ ಲಾರಿ ಡಿಕ್ಕಿಯಾದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ. ಅಪಘಾತದಲ್ಲಿ ಬಣ್ಣದ ಡಬ್ಬಗಳನ್ನು ಸಾಗಣೆ ಮಾಡುತ್ತಿದ್ದ ಲಾರಿಗೆ ಬೆಂಕಿ ಹೊತ್ತಿಕೊಂಡು ಇಡೀ ಲಾರಿ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂಬಂಧ ಹಿರಿಯೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.