ETV Bharat / state

ಚಿತ್ರದುರ್ಗದಲ್ಲಿ ವೈದ್ಯನಿಗೆ ವಕ್ಕರಿಸಿದ ಕೊರೊನಾ: ಆರೋಗ್ಯಾಧಿಕಾರಿ ಹೇಳಿದ್ದೇನು?

author img

By

Published : Jun 24, 2020, 6:28 PM IST

Updated : Jun 24, 2020, 9:42 PM IST

ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ವೈದ್ಯರೊಬ್ಬರಿಗೆ ಕೊರೊನಾ ಸೋಂಕು ತಗುಲಿದ್ದು, ಜಿಲ್ಲೆಯಲ್ಲಿ ಆತಂಕ ಮನೆ ಮಾಡಿದೆ.

ds
ಚಿತ್ರದುರ್ಗದಲ್ಲಿ ವೈದ್ಯನಿಗೆ ವಕ್ಕರಿಸಿದ ಕೊರೊನಾ

ಚಿತ್ರದುರ್ಗ: ಚಿಕ್ಕಮಗಳೂರು ಜಿಲ್ಲೆಯ ಕ್ವಾರಂಟೈನ್ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹಿರಿಯೂರು ಮೂಲದ ವೈದ್ಯನಿಗೆ ಕೊರೊನಾ ಸೋಂಕು ತಗುಲಿದೆ.

ಚಿತ್ರದುರ್ಗದಲ್ಲಿ ವೈದ್ಯನಿಗೆ ವಕ್ಕರಿಸಿದ ಕೊರೊನಾ

ವೈದ್ಯನಿಗೆ ಕೆಮ್ಮು, ಶೀತ, ಜ್ವರ ಕಾಣಿಸಿಕೊಂಡಿದ್ದರಿಂದ ಹೊಸದುರ್ಗ ತಾಲೂಕು ಆಸ್ಪತ್ರೆಯಲ್ಲಿ ಗಂಟಲು ದ್ರವ ಪಡೆದು ಪರೀಕ್ಷೆಗೊಳಪಡಿಸಲಾಗಿತ್ತು. ಈಗ ಪರೀಕ್ಷಾ ವರದಿಯಲ್ಲಿ ಕೊರೊನಾ ತಗುಲಿರುವುದು ದೃಢಪಟ್ಟಿದೆ.

ಇದರಿಂದ ಸೋಂಕಿತ ವೈದ್ಯನನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪಾಸಿಟಿವ್ ಪ್ರಕರಣದ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಘೋಷಣೆ ಮಾಡಬೇಕಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಪಾಲಾಕ್ಷ ಮಾಹಿತಿ ನೀಡಿದ್ದಾರೆ.

ಚಿತ್ರದುರ್ಗ: ಚಿಕ್ಕಮಗಳೂರು ಜಿಲ್ಲೆಯ ಕ್ವಾರಂಟೈನ್ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹಿರಿಯೂರು ಮೂಲದ ವೈದ್ಯನಿಗೆ ಕೊರೊನಾ ಸೋಂಕು ತಗುಲಿದೆ.

ಚಿತ್ರದುರ್ಗದಲ್ಲಿ ವೈದ್ಯನಿಗೆ ವಕ್ಕರಿಸಿದ ಕೊರೊನಾ

ವೈದ್ಯನಿಗೆ ಕೆಮ್ಮು, ಶೀತ, ಜ್ವರ ಕಾಣಿಸಿಕೊಂಡಿದ್ದರಿಂದ ಹೊಸದುರ್ಗ ತಾಲೂಕು ಆಸ್ಪತ್ರೆಯಲ್ಲಿ ಗಂಟಲು ದ್ರವ ಪಡೆದು ಪರೀಕ್ಷೆಗೊಳಪಡಿಸಲಾಗಿತ್ತು. ಈಗ ಪರೀಕ್ಷಾ ವರದಿಯಲ್ಲಿ ಕೊರೊನಾ ತಗುಲಿರುವುದು ದೃಢಪಟ್ಟಿದೆ.

ಇದರಿಂದ ಸೋಂಕಿತ ವೈದ್ಯನನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪಾಸಿಟಿವ್ ಪ್ರಕರಣದ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಘೋಷಣೆ ಮಾಡಬೇಕಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಪಾಲಾಕ್ಷ ಮಾಹಿತಿ ನೀಡಿದ್ದಾರೆ.

Last Updated : Jun 24, 2020, 9:42 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.