ETV Bharat / state

ಡಿವಿಎಸ್ ಆರೋಗ್ಯದಲ್ಲಿ ಚೇತರಿಕೆ.. ಆತಂಕದ ಅಗತ್ಯವಿಲ್ಲ; ವೈದ್ಯ ಡಾ. ಅಭಿಷೇಕ್

author img

By

Published : Jan 3, 2021, 3:54 PM IST

ಡಿವಿಎಸ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಎಲ್ಲರ ಜೊತೆಗೆ ಮಾತನಾಡುತ್ತಿದ್ದಾರೆ. ಜ್ಯೂಸ್ ಸೇವಿಸಿದ್ದಾರೆ. ಸದ್ಯ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಬಸವೇಶ್ವರ ಆಸ್ಪತ್ರೆಯ ವೈದ್ಯ ಡಾ. ಅಭಿಷೇಕ್​​ ಹೇಳಿದ್ದಾರೆ.

ಡಿವಿಎಸ್ ಅವರ ಆರೋಗ್ಯದಲ್ಲಿ ಚೇತರಿಕೆ
ಡಿವಿಎಸ್ ಅವರ ಆರೋಗ್ಯದಲ್ಲಿ ಚೇತರಿಕೆ

ಚಿತ್ರದುರ್ಗ: ಕೇಂದ್ರ ಸಚಿವ ಸದಾನಂದಗೌಡ ಅವರು ಶುಗರ್ ಲೋ ಆಗಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಚಿತ್ರದುರ್ಗ ನಗರದಲ್ಲಿ ನಡೆದಿದೆ.

ಡಿವಿಎಸ್ ಅವರ ಆರೋಗ್ಯದಲ್ಲಿ ಚೇತರಿಕೆ

ಈ ಸಂಬಂಧ ಶಾಸಕ ತಿಪ್ಪಾರೆಡ್ಡಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಶುಗರ್​​ ಕಡಿಮೆಯಾದ ಕಾರಣ ಅಸ್ವಸ್ಥಗೊಂಡಿದ್ದರು. ಹಾಗಾಗಿ ಆಸ್ಪತ್ರೆಗೆ ದಾಖಲಿಸಿದ್ದೇವೆ. ಸದ್ಯ ಚೇತರಿಸಿಕೊಂಡಿದ್ದಾರೆ. ಆ್ಯಂಬುಲೆನ್ಸ್​​ ಮೂಲಕ ಬೆಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗುತ್ತದೆ ಎಂದರು.

ಬಸವೇಶ್ವರ ಆಸ್ಪತ್ರೆಯ ವೈದ್ಯ ಡಾ. ಅಭಿಷೇಕ್​​ ಮಾತನಾಡಿ, ಡಿವಿಎಸ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಎಲ್ಲರ ಜೊತೆಗೆ ಮಾತನಾಡುತ್ತಿದ್ದಾರೆ. ಜ್ಯೂಸ್ ಸೇವಿಸಿದ್ದಾರೆ. ಸದ್ಯ ಆತಂಕಪಡುವ ಅವಶ್ಯಕತೆ ಇಲ್ಲ ಎಂದಿದ್ದಾರೆ.

ಓದಿ:ಕೇಂದ್ರ ಸಚಿವ ಸದಾನಂದಗೌಡ ಅಸ್ವಸ್ಥ: ಝೀರೋ ಟ್ರಾಫಿಕ್​ ಮೂಲಕ ಹೆಬ್ಬಾಳದ ಆಸ್ಟರ್​ ಆಸ್ಪತ್ರೆಗೆ ಶಿಫ್ಟ್​

ಬಿಜೆಪಿ ಪಕ್ಷದ ಕಾರ್ಯಕಾರಣಿ ಸಭೆ ಮುಗಿಸಿಕೊಂಡು ಚಿತ್ರದುರ್ಗ ನಗರಕ್ಕೆ ಇಂದು ಮಧ್ಯಾಹ್ನ ಡಿವಿಎಸ್ ಆಗಮಿಸಿದ್ದರು. ಬಳಿಕ ಖಾಸಗಿ ಹೋಟೆಲ್​​ಗೆ ಬಂದ ಅವರು ಇದ್ದಕ್ಕಿದ್ದಂತೆ ಕುಸಿದು ಬಿದ್ದರು ಎನ್ನಲಾಗುತ್ತಿದೆ. ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಹಾಗೂ ಕಾರ್ಯಕರ್ತರು ಸ್ಥಳೀಯ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೇಂದ್ರ ಸಚಿವ ಡಿವಿಎಸ್ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​​​ಕುಮಾರ್​​ ಕಟೀಲ ಹಾಗೂ ಸಚಿವ ಈ‌ಶ್ವರಪ್ಪ, ಶಾಸಕ ತಿಪ್ಪಾರೆಡ್ಡಿಯವರಿಗೆ ಕರೆ ಮಾಡಿ ವಿಚಾರಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಜಿರೋ ಟ್ರಾಫಿಕ್​ ಮೂಲಕ ಬೆಂಗಳೂರಿನ ಆಸ್ಟರ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಚಿತ್ರದುರ್ಗ: ಕೇಂದ್ರ ಸಚಿವ ಸದಾನಂದಗೌಡ ಅವರು ಶುಗರ್ ಲೋ ಆಗಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಚಿತ್ರದುರ್ಗ ನಗರದಲ್ಲಿ ನಡೆದಿದೆ.

ಡಿವಿಎಸ್ ಅವರ ಆರೋಗ್ಯದಲ್ಲಿ ಚೇತರಿಕೆ

ಈ ಸಂಬಂಧ ಶಾಸಕ ತಿಪ್ಪಾರೆಡ್ಡಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಶುಗರ್​​ ಕಡಿಮೆಯಾದ ಕಾರಣ ಅಸ್ವಸ್ಥಗೊಂಡಿದ್ದರು. ಹಾಗಾಗಿ ಆಸ್ಪತ್ರೆಗೆ ದಾಖಲಿಸಿದ್ದೇವೆ. ಸದ್ಯ ಚೇತರಿಸಿಕೊಂಡಿದ್ದಾರೆ. ಆ್ಯಂಬುಲೆನ್ಸ್​​ ಮೂಲಕ ಬೆಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗುತ್ತದೆ ಎಂದರು.

ಬಸವೇಶ್ವರ ಆಸ್ಪತ್ರೆಯ ವೈದ್ಯ ಡಾ. ಅಭಿಷೇಕ್​​ ಮಾತನಾಡಿ, ಡಿವಿಎಸ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಎಲ್ಲರ ಜೊತೆಗೆ ಮಾತನಾಡುತ್ತಿದ್ದಾರೆ. ಜ್ಯೂಸ್ ಸೇವಿಸಿದ್ದಾರೆ. ಸದ್ಯ ಆತಂಕಪಡುವ ಅವಶ್ಯಕತೆ ಇಲ್ಲ ಎಂದಿದ್ದಾರೆ.

ಓದಿ:ಕೇಂದ್ರ ಸಚಿವ ಸದಾನಂದಗೌಡ ಅಸ್ವಸ್ಥ: ಝೀರೋ ಟ್ರಾಫಿಕ್​ ಮೂಲಕ ಹೆಬ್ಬಾಳದ ಆಸ್ಟರ್​ ಆಸ್ಪತ್ರೆಗೆ ಶಿಫ್ಟ್​

ಬಿಜೆಪಿ ಪಕ್ಷದ ಕಾರ್ಯಕಾರಣಿ ಸಭೆ ಮುಗಿಸಿಕೊಂಡು ಚಿತ್ರದುರ್ಗ ನಗರಕ್ಕೆ ಇಂದು ಮಧ್ಯಾಹ್ನ ಡಿವಿಎಸ್ ಆಗಮಿಸಿದ್ದರು. ಬಳಿಕ ಖಾಸಗಿ ಹೋಟೆಲ್​​ಗೆ ಬಂದ ಅವರು ಇದ್ದಕ್ಕಿದ್ದಂತೆ ಕುಸಿದು ಬಿದ್ದರು ಎನ್ನಲಾಗುತ್ತಿದೆ. ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಹಾಗೂ ಕಾರ್ಯಕರ್ತರು ಸ್ಥಳೀಯ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೇಂದ್ರ ಸಚಿವ ಡಿವಿಎಸ್ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​​​ಕುಮಾರ್​​ ಕಟೀಲ ಹಾಗೂ ಸಚಿವ ಈ‌ಶ್ವರಪ್ಪ, ಶಾಸಕ ತಿಪ್ಪಾರೆಡ್ಡಿಯವರಿಗೆ ಕರೆ ಮಾಡಿ ವಿಚಾರಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಜಿರೋ ಟ್ರಾಫಿಕ್​ ಮೂಲಕ ಬೆಂಗಳೂರಿನ ಆಸ್ಟರ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.