ಚಿತ್ರದುರ್ಗ: ಕೊರೊನಾ ವೈರಸ್ ಅಟ್ಟಾಹಾಸ ಮೆರೆಯುತ್ತಿದ್ದು, ರಾಜ್ಯ ರಾಜಧಾನಿ ಸೇರಿದ್ದಂತೆ ಇತರೆ ಜಿಲ್ಲೆಗಳಲ್ಲೂ ಪ್ರತ್ಯೇಕ ಪ್ರಕರಣಗಳು ಕಂಡು ಬಂದಿರುವ ಬೆನ್ನಲ್ಲೇ ಚಿತ್ರದುರ್ಗದಲ್ಲಿ ವೈರಸ್ ಬಗ್ಗೆ ಅರಿವು ಮೂಡಿಸಲು ಜಿಲ್ಲಾ ಮಟ್ಟದ ವೈದ್ಯರ ತಂಡ ಸಜ್ಜಾಗಿದೆ.
ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನೊವೆಲ್ ಕೊರೊನಾ ವೈರಸ್ ಕುರಿತು ಅರಿವು ಮೂಡಿಸುವ ಕಾರ್ಯಗಾರವನ್ನು ಸರ್ಕಾರಿ ಹಾಗೂ ಖಾಸಗಿ ವೈದ್ಯರುಗಳಿಗೆ ಜಿಲ್ಲಾಡಳಿತದಿಂದ ಏರ್ಪಡಿಸಲಾಗಿತ್ತು. ಜಿಲ್ಲಾಧಿಕಾರಿ ಆರ್.ವಿನೋತ್ ಪ್ರಿಯಾ ಈ ಕಾರ್ಯಗಾರ ಉದ್ಘಾಟಿಸುವ ಮೂಲಕ ಸರ್ಕಾರಿ ಹಾಗೂ ಖಾಸಗಿ ವೈದ್ಯರು ಜನಸಾಮಾನ್ಯರಿಗೆ ಅರಿವು ಮೂಡಿಸಬೇಕಾಗುತ್ತದೆ. ಅದಕ್ಕೆ ಬೇಕಾಗುವ ಮುನ್ನೆಚ್ಚರಿಕ ಕ್ರಮ ವಹಿಸಿ ಜಾಗೃತೆಯಿಂದ ಅರಿವು ಮೂಡಿಸಿ ಎಂದು ತಾಕೀತು ಮಾಡಿದರು.