ಚಿತ್ರದುರ್ಗ: ಮಹಾಮಾರಿ ಕೊರೊನಾ ವೈರಸ್ನಿಂದಾಗಿ ಜಿಲ್ಲೆಯ ರೈತರು ತತ್ತರಿಸಿ ಹೋಗಿದ್ದಾರೆ. ಜಿಲ್ಲೆಯ ಹೊಸದುರ್ಗ ತಾಲೂಕಿನ ಕಂಚೀಪುರ ಗ್ರಾಮದಲ್ಲಿ ಕಷ್ಟಪಟ್ಟು ಸಾಲ ಮಾಡಿ ಬೆಳೆದಿದ್ದ ಬದನೆಕಾಯಿ ಬೆಳೆ ನೆಲಕಚ್ಚಿದೆ.
ಬದನೆಕಾಯಿ ಬೆಳೆದಿದ್ದ ರೈತ ಮಾರುಕಟ್ಟೆಗೆ ಕೊಂಡೊಯ್ಯಲಾಗದೆ ಹೈರಾಣಾಗಿದ್ದಾನೆ. ರೈತ ರಾಕೇಶ್ಗೌಡ ತಮ್ಮ 2 ಎಕರೆ ಜಮೀನಿನಲ್ಲಿ ಬದನೆಕಾಯಿ ಬೆಳೆದಿದ್ದರು. ಆದರೆ, ಸರಿಯಾದ ಬೆಲೆ ಇಲ್ಲದೆ ಮನನೊಂದ ಟ್ರ್ಯಾಕ್ಟರ್ ಮೂಲಕ ಬದನೆಕಾಯಿ ರಸ್ತೆಗೆ ಸುರಿದಿದ್ದಾರೆ.
ಸಾಲ ಮಾಡಿ ಕಷ್ಟಪಟ್ಟು ಬೆಳೆದಿದ್ದ ಬದನೆಕಾಯಿ ಬೆಳೆಯ ನಷ್ಟಕ್ಕೆ ಪರಿಹಾರ ನೀಡುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ.