ETV Bharat / state

ಎಸ್​ಟಿ ಮೀಸಲಾತಿಗೆ ಆಗ್ರಹಿಸಿ ನಡೆಸುತ್ತಿರುವ ಪಾದಯಾತ್ರೆಗೆ ಹೆಚ್ ವಿಶ್ವನಾಥ್ ಸಾಥ್​

author img

By

Published : Jan 24, 2021, 9:14 AM IST

ಕಾಗಿನೆಲೆ ಗುರು ಪೀಠದ ನಿರಂಜನಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ಕುರುಬ ಸಮುದಾಯಕ್ಕೆ ಎಸ್​ಟಿ ಮೀಸಲಾತಿ ನೀಡುವಂತೆ ಆಗ್ರಹಿಸಿ ನಡೆಸುತ್ತಿರುವ ಪಾದಯಾತ್ರೆಗೆ ಹೆಚ್ ವಿಶ್ವನಾಥ್ ಸಾಥ್​ ನೀಡಿದರು.

ಪಾದಯಾತ್ರೆಗೆ ಹೆಚ್ ವಿಶ್ವನಾಥ್ ಸಾಥ್​
ಪಾದಯಾತ್ರೆಗೆ ಹೆಚ್ ವಿಶ್ವನಾಥ್ ಸಾಥ್​

ಚಿತ್ರದುರ್ಗ: ಕುರುಬ ಸಮುದಾಯಕ್ಕೆ ಎಸ್​ಟಿ ಮೀಸಲಾತಿ ನೀಡುವಂತೆ ಆಗ್ರಹಿಸಿ ನಡೆಸುತ್ತಿರುವ ಪಾದಯಾತ್ರೆಗೆ ವಿಧಾನ ಪರಿಷತ್​ ಸದಸ್ಯ ಹೆಚ್ ವಿಶ್ವನಾಥ್ ಸಾಥ್​ ನೀಡಿದರು.

ಕಾಗಿನೆಲೆ ಗುರು ಪೀಠದ ನಿರಂಜನಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆ

ಕಾಗಿನೆಲೆ ಗುರು ಪೀಠದ ನಿರಂಜನಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ಪಾದಯಾತ್ರೆ ನಡೆಸಲಾಗುತ್ತಿದೆ. ನಗರದ ಎಸ್‌ಎಸ್‌ಕೆಎಸ್ ಸಮುದಾಯದಲ್ಲಿ ಕುರುಬ ಸಮುದಾಯದ ಹೋರಾಟಗಾರರು ನಿನ್ನೆ ವಾಸ್ತವ್ಯ ಹೂಡಿದ್ದರು. ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಸಮುದಾಯದ ಜನ ಇಂದು ಬೆಳಗಿನ ಜಾವ ಚಿತ್ರದುರ್ಗ ನಗರದಿಂದ ಐಮಂಗಲದತ್ತ ಹೆಜ್ಜೆ ಹಾಕಿದರು.

ಎಂ‌ಎಲ್‍ಸಿ ಹೆಚ್. ವಿಶ್ವನಾಥ್ ಹಾಗೂ ಹೆಚ್.ಎಂ.ರೇವಣ್ಣ ಇಂದು ಪಾದಯಾತ್ರೆಯಲ್ಲಿ ಹೆಜ್ಜೆ ಹಾಕುವ ಮೂಲಕ ಕುರುಬ ಸಮುದಾಯಕ್ಕೆ ಎಸ್​ಟಿ ಮೀಸಲಾತಿ ನೀಡುವಂತೆ ಒತ್ತಾಯಿಸಿದರು. ಇಂದು ಸಂಜೆ ಹಿರಿಯೂರು ತಾಲೂಕಿನ ಐಮಂಗಲ ಗ್ರಾಮಕ್ಕೆ ಪಾದಯಾತ್ರೆ ತಲುಪಿ ವಾಸ್ತವ್ಯ ಹೂಡಲಿದೆ.

ಚಿತ್ರದುರ್ಗ: ಕುರುಬ ಸಮುದಾಯಕ್ಕೆ ಎಸ್​ಟಿ ಮೀಸಲಾತಿ ನೀಡುವಂತೆ ಆಗ್ರಹಿಸಿ ನಡೆಸುತ್ತಿರುವ ಪಾದಯಾತ್ರೆಗೆ ವಿಧಾನ ಪರಿಷತ್​ ಸದಸ್ಯ ಹೆಚ್ ವಿಶ್ವನಾಥ್ ಸಾಥ್​ ನೀಡಿದರು.

ಕಾಗಿನೆಲೆ ಗುರು ಪೀಠದ ನಿರಂಜನಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆ

ಕಾಗಿನೆಲೆ ಗುರು ಪೀಠದ ನಿರಂಜನಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ಪಾದಯಾತ್ರೆ ನಡೆಸಲಾಗುತ್ತಿದೆ. ನಗರದ ಎಸ್‌ಎಸ್‌ಕೆಎಸ್ ಸಮುದಾಯದಲ್ಲಿ ಕುರುಬ ಸಮುದಾಯದ ಹೋರಾಟಗಾರರು ನಿನ್ನೆ ವಾಸ್ತವ್ಯ ಹೂಡಿದ್ದರು. ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಸಮುದಾಯದ ಜನ ಇಂದು ಬೆಳಗಿನ ಜಾವ ಚಿತ್ರದುರ್ಗ ನಗರದಿಂದ ಐಮಂಗಲದತ್ತ ಹೆಜ್ಜೆ ಹಾಕಿದರು.

ಎಂ‌ಎಲ್‍ಸಿ ಹೆಚ್. ವಿಶ್ವನಾಥ್ ಹಾಗೂ ಹೆಚ್.ಎಂ.ರೇವಣ್ಣ ಇಂದು ಪಾದಯಾತ್ರೆಯಲ್ಲಿ ಹೆಜ್ಜೆ ಹಾಕುವ ಮೂಲಕ ಕುರುಬ ಸಮುದಾಯಕ್ಕೆ ಎಸ್​ಟಿ ಮೀಸಲಾತಿ ನೀಡುವಂತೆ ಒತ್ತಾಯಿಸಿದರು. ಇಂದು ಸಂಜೆ ಹಿರಿಯೂರು ತಾಲೂಕಿನ ಐಮಂಗಲ ಗ್ರಾಮಕ್ಕೆ ಪಾದಯಾತ್ರೆ ತಲುಪಿ ವಾಸ್ತವ್ಯ ಹೂಡಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.