ETV Bharat / state

ಲಾಕ್​​ಡೌನ್ ನಡುವೆಯೂ ಚಿತ್ರದುರ್ಗದಲ್ಲಿ ಕಾಂಗ್ರೆಸ್ ಮುಖಂಡರ ಸಭೆ!

ಮೇ 22ರಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ಆಯ್ಕೆ ಚುನಾವಣೆ ಹಿನ್ನೆಲೆ ಚಿತ್ರದುರ್ಗ ನಗರದ ಹೊರವಲಯದ ತೋಟದ ಮನೆಯಲ್ಲಿ ಎಂಎಲ್​​​ಸಿ ಹೆಚ್.ಎಂ.ರೇವಣ್ಣ ನೇತೃತ್ವದಲ್ಲಿ ಕಾಂಗ್ರೆಸ್ ಜಿಲ್ಲಾ ಪಂಚಾಯಿತಿ ಸದಸ್ಯರ ಸಭೆ ನಡೆದಿದೆ.

author img

By

Published : May 16, 2020, 3:41 PM IST

HM Revanna held a meeting in violation of the lock down
ಕಾಂಗ್ರೆಸ್ ಮುಖಂಡರ ಸಭೆ

ಚಿತ್ರದುರ್ಗ: ಲಾಕ್​​​ಡೌನ್ ನಿಯಮ ಉಲ್ಲಂಘಿಸಿದರೆ ಜನಸಾಮಾನ್ಯರ ವಿರುದ್ಧ ಪ್ರಕರಣ ದಾಖಲಿಸುತ್ತಾರೆ. ಆದರೆ ಅದು ಜನಪ್ರತಿನಿಧಿಗಳಿಗೆ ಅನ್ವಯಿಸುವುದಿಲ್ಲವೇ ಎಂಬ ಅನುಮಾನ ಸಾರ್ವಜನಿಕ ವಲಯದಲ್ಲಿ ಕಾಡುತ್ತಿದೆ.

ಲಾಕ್​​ಡೌನ್ ಉಲ್ಲಂಘಿಸಿ ಎಂಎಲ್​​​ಸಿ ಹೆಚ್.ಎಂ.ರೇವಣ್ಣ ನೇತೃತ್ವದಲ್ಲಿ ಕಾಂಗ್ರೆಸ್ ಜಿಲ್ಲಾ ಪಂಚಾಯಿತಿ ಸದಸ್ಯರ ಸಭೆ ನಡೆಸಲಾಗಿದೆ. ಮೇ 22ರಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ಆಯ್ಕೆ ಚುನಾವಣೆ ಹಿನ್ನೆಲೆ ಚಿತ್ರದುರ್ಗ ನಗರದ ಹೊರವಲಯದ ತೋಟದ ಮನೆಯಲ್ಲಿ ಈ ಸಭೆ ನಡೆಸಲಾಗಿದೆ.

ಕಾಂಗ್ರೆಸ್ ಮುಖಂಡರ ಸಭೆ

ಸಭೆಯಲ್ಲಿ ಶಾಸಕ ರಘುಮೂರ್ತಿ, ಎಂಎಲ್​ಸಿ ಜಯಮ್ಮ ಬಾಲರಾಜ್, ಮಾಜಿ ಸಚಿವ ಹೆಚ್.ಆಂಜನೇಯ, ಡಿ.ಸುಧಾಕರ್, ಮಾಜಿ ಶಾಸಕ ಬಿ.ಜಿ.ಗೋವಿಂದಪ್ಪ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಸೇರಿ ಹಲವರಿದ್ದರು ಎನ್ನಲಾಗಿದೆ.

ಜಿ.ಪಂ ಸದಸ್ಯರು ಸೇರಿ ನೂರಕ್ಕೂ ಹೆಚ್ಚು ಜನ ಸಭೆಯಲ್ಲಿ ಭಾಗಿಯಾಗಿ ನಿಯಮ ಉಲ್ಲಂಘನೆ ಮಾಡಿದ್ದಾರೆ. ಹೆಚ್.ಎಂ.ರೇವಣ್ಣ ಅವರನ್ನು ಕೇಳಿದರೆ, ಚುನಾವಣೆ ಘೋಷಣೆ ಹಿನ್ನೆಲೆ ಸಭೆ ನಡೆಸಿದ್ದೇವೆ ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ.

ಚಿತ್ರದುರ್ಗ: ಲಾಕ್​​​ಡೌನ್ ನಿಯಮ ಉಲ್ಲಂಘಿಸಿದರೆ ಜನಸಾಮಾನ್ಯರ ವಿರುದ್ಧ ಪ್ರಕರಣ ದಾಖಲಿಸುತ್ತಾರೆ. ಆದರೆ ಅದು ಜನಪ್ರತಿನಿಧಿಗಳಿಗೆ ಅನ್ವಯಿಸುವುದಿಲ್ಲವೇ ಎಂಬ ಅನುಮಾನ ಸಾರ್ವಜನಿಕ ವಲಯದಲ್ಲಿ ಕಾಡುತ್ತಿದೆ.

ಲಾಕ್​​ಡೌನ್ ಉಲ್ಲಂಘಿಸಿ ಎಂಎಲ್​​​ಸಿ ಹೆಚ್.ಎಂ.ರೇವಣ್ಣ ನೇತೃತ್ವದಲ್ಲಿ ಕಾಂಗ್ರೆಸ್ ಜಿಲ್ಲಾ ಪಂಚಾಯಿತಿ ಸದಸ್ಯರ ಸಭೆ ನಡೆಸಲಾಗಿದೆ. ಮೇ 22ರಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ಆಯ್ಕೆ ಚುನಾವಣೆ ಹಿನ್ನೆಲೆ ಚಿತ್ರದುರ್ಗ ನಗರದ ಹೊರವಲಯದ ತೋಟದ ಮನೆಯಲ್ಲಿ ಈ ಸಭೆ ನಡೆಸಲಾಗಿದೆ.

ಕಾಂಗ್ರೆಸ್ ಮುಖಂಡರ ಸಭೆ

ಸಭೆಯಲ್ಲಿ ಶಾಸಕ ರಘುಮೂರ್ತಿ, ಎಂಎಲ್​ಸಿ ಜಯಮ್ಮ ಬಾಲರಾಜ್, ಮಾಜಿ ಸಚಿವ ಹೆಚ್.ಆಂಜನೇಯ, ಡಿ.ಸುಧಾಕರ್, ಮಾಜಿ ಶಾಸಕ ಬಿ.ಜಿ.ಗೋವಿಂದಪ್ಪ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಸೇರಿ ಹಲವರಿದ್ದರು ಎನ್ನಲಾಗಿದೆ.

ಜಿ.ಪಂ ಸದಸ್ಯರು ಸೇರಿ ನೂರಕ್ಕೂ ಹೆಚ್ಚು ಜನ ಸಭೆಯಲ್ಲಿ ಭಾಗಿಯಾಗಿ ನಿಯಮ ಉಲ್ಲಂಘನೆ ಮಾಡಿದ್ದಾರೆ. ಹೆಚ್.ಎಂ.ರೇವಣ್ಣ ಅವರನ್ನು ಕೇಳಿದರೆ, ಚುನಾವಣೆ ಘೋಷಣೆ ಹಿನ್ನೆಲೆ ಸಭೆ ನಡೆಸಿದ್ದೇವೆ ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.